ರಾಜ್ಯದಲ್ಲಿ ಉತ್ತಮ ಮಳೆಯಾಗಿದ್ದು, ಸದ್ಯ ವಿದ್ಯುತ್ ಉತ್ಪಾದನೆಯಲ್ಲಿ ಯಾವುದೇ ಕೊರತೆ ಇಲ್ಲ. ಕಲ್ಲಿದ್ದಲು ದಾಸ್ತಾನು ಕೂಡಾ ಉತ್ತಮವಾಗಿದೆ. ರಾಜ್ಯದಲ್ಲಿ ಈ ಬಾರಿ ದೀಪಾವಳಿಗೆ ಲೋಡ್ ಶೆಡ್ಡಿಂಗ್ ಆಗುವುದಿಲ್ಲ ಎಂದು ಇಂಧನ ಸಚಿವ ವಿ. ಸುನಿಲ್ ಕುಮಾರ್ ತಿಳಿಸಿದ್ದಾರೆ.
ಕಲ್ಲಿದ್ದಲು ಬೆಲೆ ಇಳಿಕೆಯಾದಲ್ಲಿ ವಿದ್ಯುತ್ ದರ ಕಡಿತಗೊಳಿಸಲಾಗುವುದು. ಅನೇಕ ವರ್ಷಗಳಿಂದ ಕಲ್ಲಿದ್ದಲು ಮತ್ತು ತೈಲ ಬೆಲೆ ಏರಿಕೆಯಾದಂತೆ ವಿದ್ಯುತ್ ಬೆಲೆಯನ್ನು ಪರಿಷ್ಕರಿಸಲಾಗುತ್ತಿದೆ. ಈಗ ಮೂರು ತಿಂಗಳಿಗೊಮ್ಮೆ ದರ ಪರಿಷ್ಕರಣೆಗೆ ನಿರ್ಧರಿಸಲಾಗಿದೆ. ಕಲ್ಲಿದ್ದಲು ಮತ್ತು ತೈಲಬೆಲೆ ಇಳಿಕೆಯಾದಲ್ಲಿ ವಿದ್ಯುತ್ ಬೆಲೆ ಕೂಡ ಇಳಿಕೆ ಮಾಡಲಾಗುವುದು ಎಂದು ಸಚಿವ ಸುನಿಲ್ ಕುಮಾರ್ ತಿಳಿಸಿದ್ದಾರೆ. ಪ್ರತಿ ಮೂರು ತಿಂಗಳಿಗೊಮ್ಮೆ ವಿದ್ಯುತ್ ದರ ಏರಿಕೆ ಮಾಡುವ ಬದಲು ವರ್ಷಕ್ಕೊಮ್ಮೆ ಹೆಚ್ಚಳ ಮಾಡುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪ್ರಸ್ತಾವನೆ ಮುಂದಿಟ್ಟಿದ್ದೇನೆ. ಗ್ರಾಹಕರಿಗೆ ಹೊರೆಯಾಗುವುದರಿಂದ ವರ್ಷಕ್ಕೊಮ್ಮೆ ದರ ಹೆಚ್ಚಿಸುವುದು ಸೂಕ್ತ ಎಂದು ಹೇಳಲಾಗಿದೆ ಎಂದರು.
ರಾಜ್ಯದ ಹಲವೆಡೆ ಗುಡುಗು-ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ…
ಭೂಮಿಯಲ್ಲೇ ಅತಿಹೆಚ್ಚು ಮಳೆಯಾಗುವ ಮೇಘಾಲಯ ಈಗ ನೀರಿನ ಕೊರತೆಯ ಆತಂಕ ಎದುರಿಸುತ್ತಿದೆ. ಹವಾಮಾನ…
ಗಲ್ಫ್ ಯುದ್ಧದಿಂದ ಭಾರತದ ₹11.8 ಬಿಲಿಯನ್ ಕೃಷಿ-ಆಹಾರ ರಫ್ತು ಅಪಾಯದಲ್ಲಿದೆ. ಸಾಗಾಟ ಅಡಚಣೆ…
ರಾಜ್ಯದ ವಿವಿಧ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ, ಮಲೆನಾಡು ಹಾಗೂ…
ಬೇಸಿಗೆ ಬಿಸಿಲು ತೀವ್ರಗೊಳ್ಳುತ್ತಿದ್ದಂತೆ ಜನ, ಜಾನುವಾರುಗಳ ಜೊತೆಗೆ ಪ್ರಾಣಿ-ಪಕ್ಷಿಗಳಿಗೂ ನೀರು ಮತ್ತು ಆಹಾರದ…
ಕೃಷಿ-ಆಹಾರ ವ್ಯವಸ್ಥೆಯಲ್ಲಿ ಮಹಿಳೆಯರ ನಾಯಕತ್ವ ಬಲಪಡಿಸಲು ಜಾಗತಿಕ ಸಮ್ಮೇಳನದಲ್ಲಿ ಮಹತ್ವದ ನಿರ್ಧಾರಗಳು ಕೈಗೊಳ್ಳಲಾಗಿದೆ.…