ರಾಜ್ಯದಲ್ಲಿ ಉತ್ತಮ ಮಳೆಯಾಗಿದ್ದು, ಸದ್ಯ ವಿದ್ಯುತ್ ಉತ್ಪಾದನೆಯಲ್ಲಿ ಯಾವುದೇ ಕೊರತೆ ಇಲ್ಲ. ಕಲ್ಲಿದ್ದಲು ದಾಸ್ತಾನು ಕೂಡಾ ಉತ್ತಮವಾಗಿದೆ. ರಾಜ್ಯದಲ್ಲಿ ಈ ಬಾರಿ ದೀಪಾವಳಿಗೆ ಲೋಡ್ ಶೆಡ್ಡಿಂಗ್ ಆಗುವುದಿಲ್ಲ ಎಂದು ಇಂಧನ ಸಚಿವ ವಿ. ಸುನಿಲ್ ಕುಮಾರ್ ತಿಳಿಸಿದ್ದಾರೆ.
ಕಲ್ಲಿದ್ದಲು ಬೆಲೆ ಇಳಿಕೆಯಾದಲ್ಲಿ ವಿದ್ಯುತ್ ದರ ಕಡಿತಗೊಳಿಸಲಾಗುವುದು. ಅನೇಕ ವರ್ಷಗಳಿಂದ ಕಲ್ಲಿದ್ದಲು ಮತ್ತು ತೈಲ ಬೆಲೆ ಏರಿಕೆಯಾದಂತೆ ವಿದ್ಯುತ್ ಬೆಲೆಯನ್ನು ಪರಿಷ್ಕರಿಸಲಾಗುತ್ತಿದೆ. ಈಗ ಮೂರು ತಿಂಗಳಿಗೊಮ್ಮೆ ದರ ಪರಿಷ್ಕರಣೆಗೆ ನಿರ್ಧರಿಸಲಾಗಿದೆ. ಕಲ್ಲಿದ್ದಲು ಮತ್ತು ತೈಲಬೆಲೆ ಇಳಿಕೆಯಾದಲ್ಲಿ ವಿದ್ಯುತ್ ಬೆಲೆ ಕೂಡ ಇಳಿಕೆ ಮಾಡಲಾಗುವುದು ಎಂದು ಸಚಿವ ಸುನಿಲ್ ಕುಮಾರ್ ತಿಳಿಸಿದ್ದಾರೆ. ಪ್ರತಿ ಮೂರು ತಿಂಗಳಿಗೊಮ್ಮೆ ವಿದ್ಯುತ್ ದರ ಏರಿಕೆ ಮಾಡುವ ಬದಲು ವರ್ಷಕ್ಕೊಮ್ಮೆ ಹೆಚ್ಚಳ ಮಾಡುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪ್ರಸ್ತಾವನೆ ಮುಂದಿಟ್ಟಿದ್ದೇನೆ. ಗ್ರಾಹಕರಿಗೆ ಹೊರೆಯಾಗುವುದರಿಂದ ವರ್ಷಕ್ಕೊಮ್ಮೆ ದರ ಹೆಚ್ಚಿಸುವುದು ಸೂಕ್ತ ಎಂದು ಹೇಳಲಾಗಿದೆ ಎಂದರು.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…
ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…