ರಾಜ್ಯದಲ್ಲಿ ಉತ್ತಮ ಮಳೆಯಾಗಿದ್ದು, ಸದ್ಯ ವಿದ್ಯುತ್ ಉತ್ಪಾದನೆಯಲ್ಲಿ ಯಾವುದೇ ಕೊರತೆ ಇಲ್ಲ. ಕಲ್ಲಿದ್ದಲು ದಾಸ್ತಾನು ಕೂಡಾ ಉತ್ತಮವಾಗಿದೆ. ರಾಜ್ಯದಲ್ಲಿ ಈ ಬಾರಿ ದೀಪಾವಳಿಗೆ ಲೋಡ್ ಶೆಡ್ಡಿಂಗ್ ಆಗುವುದಿಲ್ಲ ಎಂದು ಇಂಧನ ಸಚಿವ ವಿ. ಸುನಿಲ್ ಕುಮಾರ್ ತಿಳಿಸಿದ್ದಾರೆ.
ಕಲ್ಲಿದ್ದಲು ಬೆಲೆ ಇಳಿಕೆಯಾದಲ್ಲಿ ವಿದ್ಯುತ್ ದರ ಕಡಿತಗೊಳಿಸಲಾಗುವುದು. ಅನೇಕ ವರ್ಷಗಳಿಂದ ಕಲ್ಲಿದ್ದಲು ಮತ್ತು ತೈಲ ಬೆಲೆ ಏರಿಕೆಯಾದಂತೆ ವಿದ್ಯುತ್ ಬೆಲೆಯನ್ನು ಪರಿಷ್ಕರಿಸಲಾಗುತ್ತಿದೆ. ಈಗ ಮೂರು ತಿಂಗಳಿಗೊಮ್ಮೆ ದರ ಪರಿಷ್ಕರಣೆಗೆ ನಿರ್ಧರಿಸಲಾಗಿದೆ. ಕಲ್ಲಿದ್ದಲು ಮತ್ತು ತೈಲಬೆಲೆ ಇಳಿಕೆಯಾದಲ್ಲಿ ವಿದ್ಯುತ್ ಬೆಲೆ ಕೂಡ ಇಳಿಕೆ ಮಾಡಲಾಗುವುದು ಎಂದು ಸಚಿವ ಸುನಿಲ್ ಕುಮಾರ್ ತಿಳಿಸಿದ್ದಾರೆ. ಪ್ರತಿ ಮೂರು ತಿಂಗಳಿಗೊಮ್ಮೆ ವಿದ್ಯುತ್ ದರ ಏರಿಕೆ ಮಾಡುವ ಬದಲು ವರ್ಷಕ್ಕೊಮ್ಮೆ ಹೆಚ್ಚಳ ಮಾಡುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪ್ರಸ್ತಾವನೆ ಮುಂದಿಟ್ಟಿದ್ದೇನೆ. ಗ್ರಾಹಕರಿಗೆ ಹೊರೆಯಾಗುವುದರಿಂದ ವರ್ಷಕ್ಕೊಮ್ಮೆ ದರ ಹೆಚ್ಚಿಸುವುದು ಸೂಕ್ತ ಎಂದು ಹೇಳಲಾಗಿದೆ ಎಂದರು.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…