ರಾಜ್ಯದಲ್ಲಿ ಉತ್ತಮ ಮಳೆಯಾಗಿದ್ದು, ಸದ್ಯ ವಿದ್ಯುತ್ ಉತ್ಪಾದನೆಯಲ್ಲಿ ಯಾವುದೇ ಕೊರತೆ ಇಲ್ಲ. ಕಲ್ಲಿದ್ದಲು ದಾಸ್ತಾನು ಕೂಡಾ ಉತ್ತಮವಾಗಿದೆ. ರಾಜ್ಯದಲ್ಲಿ ಈ ಬಾರಿ ದೀಪಾವಳಿಗೆ ಲೋಡ್ ಶೆಡ್ಡಿಂಗ್ ಆಗುವುದಿಲ್ಲ ಎಂದು ಇಂಧನ ಸಚಿವ ವಿ. ಸುನಿಲ್ ಕುಮಾರ್ ತಿಳಿಸಿದ್ದಾರೆ.
ಕಲ್ಲಿದ್ದಲು ಬೆಲೆ ಇಳಿಕೆಯಾದಲ್ಲಿ ವಿದ್ಯುತ್ ದರ ಕಡಿತಗೊಳಿಸಲಾಗುವುದು. ಅನೇಕ ವರ್ಷಗಳಿಂದ ಕಲ್ಲಿದ್ದಲು ಮತ್ತು ತೈಲ ಬೆಲೆ ಏರಿಕೆಯಾದಂತೆ ವಿದ್ಯುತ್ ಬೆಲೆಯನ್ನು ಪರಿಷ್ಕರಿಸಲಾಗುತ್ತಿದೆ. ಈಗ ಮೂರು ತಿಂಗಳಿಗೊಮ್ಮೆ ದರ ಪರಿಷ್ಕರಣೆಗೆ ನಿರ್ಧರಿಸಲಾಗಿದೆ. ಕಲ್ಲಿದ್ದಲು ಮತ್ತು ತೈಲಬೆಲೆ ಇಳಿಕೆಯಾದಲ್ಲಿ ವಿದ್ಯುತ್ ಬೆಲೆ ಕೂಡ ಇಳಿಕೆ ಮಾಡಲಾಗುವುದು ಎಂದು ಸಚಿವ ಸುನಿಲ್ ಕುಮಾರ್ ತಿಳಿಸಿದ್ದಾರೆ. ಪ್ರತಿ ಮೂರು ತಿಂಗಳಿಗೊಮ್ಮೆ ವಿದ್ಯುತ್ ದರ ಏರಿಕೆ ಮಾಡುವ ಬದಲು ವರ್ಷಕ್ಕೊಮ್ಮೆ ಹೆಚ್ಚಳ ಮಾಡುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪ್ರಸ್ತಾವನೆ ಮುಂದಿಟ್ಟಿದ್ದೇನೆ. ಗ್ರಾಹಕರಿಗೆ ಹೊರೆಯಾಗುವುದರಿಂದ ವರ್ಷಕ್ಕೊಮ್ಮೆ ದರ ಹೆಚ್ಚಿಸುವುದು ಸೂಕ್ತ ಎಂದು ಹೇಳಲಾಗಿದೆ ಎಂದರು.
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…
ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…