ರಾಜ್ಯದಲ್ಲಿ ಉತ್ತಮ ಮಳೆಯಾಗಿದ್ದು, ಸದ್ಯ ವಿದ್ಯುತ್ ಉತ್ಪಾದನೆಯಲ್ಲಿ ಯಾವುದೇ ಕೊರತೆ ಇಲ್ಲ. ಕಲ್ಲಿದ್ದಲು ದಾಸ್ತಾನು ಕೂಡಾ ಉತ್ತಮವಾಗಿದೆ. ರಾಜ್ಯದಲ್ಲಿ ಈ ಬಾರಿ ದೀಪಾವಳಿಗೆ ಲೋಡ್ ಶೆಡ್ಡಿಂಗ್ ಆಗುವುದಿಲ್ಲ ಎಂದು ಇಂಧನ ಸಚಿವ ವಿ. ಸುನಿಲ್ ಕುಮಾರ್ ತಿಳಿಸಿದ್ದಾರೆ.
ಕಲ್ಲಿದ್ದಲು ಬೆಲೆ ಇಳಿಕೆಯಾದಲ್ಲಿ ವಿದ್ಯುತ್ ದರ ಕಡಿತಗೊಳಿಸಲಾಗುವುದು. ಅನೇಕ ವರ್ಷಗಳಿಂದ ಕಲ್ಲಿದ್ದಲು ಮತ್ತು ತೈಲ ಬೆಲೆ ಏರಿಕೆಯಾದಂತೆ ವಿದ್ಯುತ್ ಬೆಲೆಯನ್ನು ಪರಿಷ್ಕರಿಸಲಾಗುತ್ತಿದೆ. ಈಗ ಮೂರು ತಿಂಗಳಿಗೊಮ್ಮೆ ದರ ಪರಿಷ್ಕರಣೆಗೆ ನಿರ್ಧರಿಸಲಾಗಿದೆ. ಕಲ್ಲಿದ್ದಲು ಮತ್ತು ತೈಲಬೆಲೆ ಇಳಿಕೆಯಾದಲ್ಲಿ ವಿದ್ಯುತ್ ಬೆಲೆ ಕೂಡ ಇಳಿಕೆ ಮಾಡಲಾಗುವುದು ಎಂದು ಸಚಿವ ಸುನಿಲ್ ಕುಮಾರ್ ತಿಳಿಸಿದ್ದಾರೆ. ಪ್ರತಿ ಮೂರು ತಿಂಗಳಿಗೊಮ್ಮೆ ವಿದ್ಯುತ್ ದರ ಏರಿಕೆ ಮಾಡುವ ಬದಲು ವರ್ಷಕ್ಕೊಮ್ಮೆ ಹೆಚ್ಚಳ ಮಾಡುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪ್ರಸ್ತಾವನೆ ಮುಂದಿಟ್ಟಿದ್ದೇನೆ. ಗ್ರಾಹಕರಿಗೆ ಹೊರೆಯಾಗುವುದರಿಂದ ವರ್ಷಕ್ಕೊಮ್ಮೆ ದರ ಹೆಚ್ಚಿಸುವುದು ಸೂಕ್ತ ಎಂದು ಹೇಳಲಾಗಿದೆ ಎಂದರು.
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…
ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…