ಮನೆಯ ಹಕ್ಕುಪತ್ರ ಸಮಸ್ಯೆಗೆ ಸಂಬಂಧಿಸಿ ಮಾಹಿತಿ ನೀಡಲು ಬಂದ ಮಹಿಳೆಗೆ ವಸತಿ ಸಚಿವ ಸೋಮಣ್ಣ ಕಪಾಳಮೋಕ್ಷ ಮಾಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿ ನಡೆದಿದೆ. ಹಂಗಳ ಗ್ರಾಮದಲ್ಲಿ ಶನಿವಾರ 175 ಗ್ರಾಮಸ್ಥರಿಗೆ ನಿವೇಶನ ಹಕ್ಕುಪತ್ರ ವಿತರಣೆ ಕಾರ್ಯಕ್ರಮ ನಿಗದಿಯಾಗಿತ್ತು.
ಹಕ್ಕುಪತ್ರ ವಿತರಣಾ ಕಾರ್ಯಕ್ರಮವು ಶನಿವಾರ ಮಧ್ಯಾಹ್ನ 3.30ಕ್ಕೆ ನಿಗದಿಯಾಗಿತ್ತು. ಆದರೆ ಕಾರ್ಯಕ್ರಮಕ್ಕೆ ಸಂಜೆ 6.30ಕ್ಕೆ ಆಗಮಿಸಿದ್ದ ಸಚಿವರ ಬಳಿ ಮಹಿಳೆ ಸಮಸ್ಯೆ ಹೇಳಿಕೊಳ್ಳಲು ಬಂದಿದ್ದರು. ನಿವೇಶನದ ಹಕ್ಕುಪತ್ರ ಪಡೆಯಲು ನೂಕುನುಗ್ಗಲು ಉಂಟಾಗಿತ್ತು, ಈ ಸಂದರ್ಭ ಮಹಿಳೆ ಸಚಿವರ ಬಳಿ ತೆರಳಿದ್ದ ವೇಳೆ ಸಚಿವರು, ಮಹಿಳೆಯ ಕಪಾಳಕ್ಕೆ ಬಾರಿಸಿದ್ದಾರೆ. ಬಳಿಕ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದರು. ಕಪಾಳಮೋಕ್ಷಕ್ಕೆ ಒಳಗಾಗಿದ್ದ ಮಹಿಳೆ ಕಳೆದ 5 ವರ್ಷದ ಹಿಂದೆಯೇ ನಿವೇಶನಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದರು, ಆದರೆ ಆಕೆಗೆ ಹಕ್ಕು ಪತ್ರ ಸಿಗದ ಹಿನ್ನೆಲೆ ಅಸಮಾಧಾನಗೊಂಡಿದ್ದಳು. ಇದಕ್ಕೆ ನೇರ ಸಚಿವರ ಬಳಿ ಸಮಸ್ಯೆ ಹೇಳಿಕೊಳ್ಳಲು ಮುಂದಾಗಿದ್ದರು ಎನ್ನಲಾಗಿದೆ.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…