(ಫೋಟೊ ಕೃಪೆ : ಪೇಸ್ ಬುಕ್ )
ಪುತ್ತೂರು ನಗರದ ಮಳಿಗೆಯೊಂದರ ಬಳಿ ಜಿಲ್ಲೆಯ ಸಚಿವರೊಬ್ಬರ ಕಾರನ್ನು ಪಾರ್ಕ್ ಮಾಡಿದ ಫೋಟೋ ಇದೀಗ ಸಾರ್ವಜನಿಕ ಚರ್ಚೆಗೆ ಕಾರಣವಾಗಿದೆ. ಸಚಿವರ ಕಾರು ಈ ರೀತಿ ಪಾರ್ಕ್ ಮಾಡಿರುವುದನ್ನು ಸಾರ್ವಜನಿಕರು ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನಿಸಿದ್ದಾರೆ. ಎಲ್ಲರಿಗೂ ಒಂದೇ ನಿಯಮವಲ್ಲವೇ ಇಲ್ಲಿ ? ಎಂಬುದು ಪ್ರಶ್ನೆಯ ಸಾರಾಂಶ.
ಪುತ್ತೂರು ನಗರದಲ್ಲಿ ವಾಹನಗಳಿಗೆ ಸರಿಯಾದ ಪಾರ್ಕಿಂಗ್ ವ್ಯವಸ್ಥೆ ಇಲ್ಲ. ವಾಹನಗಳ ಓಡಾಟ ಹೆಚ್ಚಾದಂತೆ ಪುತ್ತೂರು ಪೇಟೆಯ ರಸ್ತೆಗಳು ಆಗಾಗ ಬ್ಲಾಕ್ ಆಗುತ್ತವೆ. ಹೀಗಾದಾಗ ಇಡೀ ಪೇಟೆಯಲ್ಲಿ ಟ್ರಾಫಿಕ್ ಜಾಂ ಆಗುತ್ತದೆ.
ಆದರೆ ಸಚಿವರೊಬ್ಬರ ಕಾರನ್ನು ಗುರುವಾರ ಸಂಜೆ ನಗರದ ಮಳಿಗೆಯೊಂದರ ಎದುರಿನಲ್ಲಿ ಪಾರ್ಕ್ ಮಾಡಲಾಗಿತ್ತು. ಇದರಿಂದ ಕೆಲಕಾಲ ಟ್ರಾಫಿಕ್ ಸಮಸ್ಯೆಯಾಯಿತು ಎಂದು ಕೆಲವರು ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದಾರೆ, ಇದೇ ವೇಳೆ, ಸಾರ್ವಜನಿಕರಿಗೆ ಒಂದು ಕಾನೂನು- ಸಚಿವರಿಗೆ ಇನ್ನೊಂದು ಕಾನೂನೇ ಎಂದೂ ಪ್ರಶ್ನೆ ಮಾಡಿದ್ದಾರೆ. ಸಚಿವರಾಗಿ ಜವಾಬ್ದಾರಿ ಸ್ಥಾನದಲ್ಲಿರುವವರೇ ಹೀಗೆ ವಾಹನವನ್ನು ಪಾರ್ಕ್ ಮಾಡಿಸಿದರೆ ಹೇಗೆ ಎಂಬುದೂ ಪ್ರಶ್ನೆಯಾಗಿದೆ.
ಇಂತಹ ಸಂದರ್ಭಗಳಲ್ಲಿ ಕಾರಿನ ಚಾಲಕನಲ್ಲಿ ಕೆಲಸಕ್ಕಾಗಿ ಮಳಿಗೆಗಳಿಗೆ ಬಿಟ್ಟು ವಾಹನವನ್ನು ಬೇರೆಡೆ ಪಾರ್ಕ್ ಮಾಡಿಸಿ ಕೆಲಸದ ನಂತರ ವಾಹನವನ್ನು ಮತ್ತೆ ಕರೆಯಿಸುವ ವ್ಯವಸ್ಥೆಯನ್ನು ಸಾಮಾನ್ಯ ಜನರೂ ಮಾಡುತ್ತಾರೆ.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…