Advertisement
ವೈರಲ್ ಸುದ್ದಿ

ಪುತ್ತೂರು ಪೇಟೆಯಲ್ಲಿ ರಸ್ತೆ ಬದಿ ಸಚಿವರ ಕಾರು ಪಾರ್ಕಿಂಗ್‌ | ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನಿಸಿದ ಸಾರ್ವಜನಿಕರು….! |

Share

ಪುತ್ತೂರು ನಗರದ ಮಳಿಗೆಯೊಂದರ ಬಳಿ ಜಿಲ್ಲೆಯ ಸಚಿವರೊಬ್ಬರ ಕಾರನ್ನು ಪಾರ್ಕ್ ಮಾಡಿದ ಫೋಟೋ ಇದೀಗ‌  ಸಾರ್ವಜನಿಕ ಚರ್ಚೆಗೆ ಕಾರಣವಾಗಿದೆ. ಸಚಿವರ ಕಾರು ಈ ರೀತಿ ಪಾರ್ಕ್‌ ಮಾಡಿರುವುದನ್ನು ಸಾರ್ವಜನಿಕರು ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನಿಸಿದ್ದಾರೆ. ಎಲ್ಲರಿಗೂ ಒಂದೇ ನಿಯಮವಲ್ಲವೇ ಇಲ್ಲಿ ? ಎಂಬುದು ಪ್ರಶ್ನೆಯ ಸಾರಾಂಶ.

Advertisement
Advertisement
Advertisement
Advertisement

ಪುತ್ತೂರು ನಗರದಲ್ಲಿ ವಾಹನಗಳಿಗೆ ಸರಿಯಾದ ಪಾರ್ಕಿಂಗ್‌ ವ್ಯವಸ್ಥೆ ಇಲ್ಲ. ವಾಹನಗಳ ಓಡಾಟ ಹೆಚ್ಚಾದಂತೆ ಪುತ್ತೂರು ಪೇಟೆಯ ರಸ್ತೆಗಳು ಆಗಾಗ ಬ್ಲಾಕ್‌ ಆಗುತ್ತವೆ. ಹೀಗಾದಾಗ ಇಡೀ ಪೇಟೆಯಲ್ಲಿ ಟ್ರಾಫಿಕ್‌ ಜಾಂ ಆಗುತ್ತದೆ.

Advertisement

ಆದರೆ ಸಚಿವರೊಬ್ಬರ ಕಾರನ್ನು ಗುರುವಾರ ಸಂಜೆ  ನಗರದ ಮಳಿಗೆಯೊಂದರ ಎದುರಿನಲ್ಲಿ ಪಾರ್ಕ್‌ ಮಾಡಲಾಗಿತ್ತು. ಇದರಿಂದ ಕೆಲಕಾಲ ಟ್ರಾಫಿಕ್‌ ಸಮಸ್ಯೆಯಾಯಿತು ಎಂದು ಕೆಲವರು ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದಾರೆ, ಇದೇ ವೇಳೆ, ಸಾರ್ವಜನಿಕರಿಗೆ ಒಂದು ಕಾನೂನು- ಸಚಿವರಿಗೆ ಇನ್ನೊಂದು ಕಾನೂನೇ ಎಂದೂ ಪ್ರಶ್ನೆ ಮಾಡಿದ್ದಾರೆ.  ಸಚಿವರಾಗಿ ಜವಾಬ್ದಾರಿ ಸ್ಥಾನದಲ್ಲಿರುವವರೇ ಹೀಗೆ ವಾಹನವನ್ನು ಪಾರ್ಕ್‌ ಮಾಡಿಸಿದರೆ ಹೇಗೆ ಎಂಬುದೂ ಪ್ರಶ್ನೆಯಾಗಿದೆ.

ಇಂತಹ ಸಂದರ್ಭಗಳಲ್ಲಿ ಕಾರಿನ ಚಾಲಕನಲ್ಲಿ ಕೆಲಸಕ್ಕಾಗಿ ಮಳಿಗೆಗಳಿಗೆ ಬಿಟ್ಟು  ವಾಹನವನ್ನು ಬೇರೆಡೆ ಪಾರ್ಕ್‌ ಮಾಡಿಸಿ ಕೆಲಸದ ನಂತರ ವಾಹನವನ್ನು ಮತ್ತೆ ಕರೆಯಿಸುವ ವ್ಯವಸ್ಥೆಯನ್ನು ಸಾಮಾನ್ಯ ಜನರೂ ಮಾಡುತ್ತಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ವಿಶ್ವೇಶ್ವರ ಭಟ್‌ ಬಂಗಾರಡ್ಕ ಅವರಿಂದ ಬಜೆಟ್‌ ವಿಶ್ಲೇಷಣೆ |

‌ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್‌…

2 hours ago

ಗ್ರಾಮೀಣ, ನಗರ ಪ್ರದೇಶದ ಕಟ್ಟೆಗಳ ಅಭಿವೃದ್ಧಿ – ಧಾರ್ಮಿಕ ಪರಂಪರೆ ಸಂರಕ್ಷಣೆ

ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ  ಸುಮಾರು 250…

23 hours ago

ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸಲು ಸಕಲ ಕ್ರಮ | ಮುಖ್ಯಮಂತ್ರಿ  ಸಿದ್ದರಾಮಯ್ಯ

ರಾಜ್ಯದ ಕಾಡಂಚಿನ ಪ್ರದೇಶದಲ್ಲಿ  ಮಾನವ ಮತ್ತು  ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…

23 hours ago

ಎಲ್ಲಾ ಕೃಷಿ ಉತ್ಪನ್ನಗಳಿಗೆ ಎಂಎಸ್‌ಪಿ ಕಾನೂನು ಜಾರಿಗೆ ರಾಜ್ಯ ರೈತ ಸಂಘಟನೆಗಳ ಮನವಿ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಮಂಡಿಸಲಿರುವ ಕೇಂದ್ರ ಬಜೆಟ್ 2025…

23 hours ago