Advertisement
ವೈರಲ್ ಸುದ್ದಿ

ಪುತ್ತೂರು ಪೇಟೆಯಲ್ಲಿ ರಸ್ತೆ ಬದಿ ಸಚಿವರ ಕಾರು ಪಾರ್ಕಿಂಗ್‌ | ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನಿಸಿದ ಸಾರ್ವಜನಿಕರು….! |

Share

ಪುತ್ತೂರು ನಗರದ ಮಳಿಗೆಯೊಂದರ ಬಳಿ ಜಿಲ್ಲೆಯ ಸಚಿವರೊಬ್ಬರ ಕಾರನ್ನು ಪಾರ್ಕ್ ಮಾಡಿದ ಫೋಟೋ ಇದೀಗ‌  ಸಾರ್ವಜನಿಕ ಚರ್ಚೆಗೆ ಕಾರಣವಾಗಿದೆ. ಸಚಿವರ ಕಾರು ಈ ರೀತಿ ಪಾರ್ಕ್‌ ಮಾಡಿರುವುದನ್ನು ಸಾರ್ವಜನಿಕರು ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನಿಸಿದ್ದಾರೆ. ಎಲ್ಲರಿಗೂ ಒಂದೇ ನಿಯಮವಲ್ಲವೇ ಇಲ್ಲಿ ? ಎಂಬುದು ಪ್ರಶ್ನೆಯ ಸಾರಾಂಶ.

ಪುತ್ತೂರು ನಗರದಲ್ಲಿ ವಾಹನಗಳಿಗೆ ಸರಿಯಾದ ಪಾರ್ಕಿಂಗ್‌ ವ್ಯವಸ್ಥೆ ಇಲ್ಲ. ವಾಹನಗಳ ಓಡಾಟ ಹೆಚ್ಚಾದಂತೆ ಪುತ್ತೂರು ಪೇಟೆಯ ರಸ್ತೆಗಳು ಆಗಾಗ ಬ್ಲಾಕ್‌ ಆಗುತ್ತವೆ. ಹೀಗಾದಾಗ ಇಡೀ ಪೇಟೆಯಲ್ಲಿ ಟ್ರಾಫಿಕ್‌ ಜಾಂ ಆಗುತ್ತದೆ.

ಆದರೆ ಸಚಿವರೊಬ್ಬರ ಕಾರನ್ನು ಗುರುವಾರ ಸಂಜೆ  ನಗರದ ಮಳಿಗೆಯೊಂದರ ಎದುರಿನಲ್ಲಿ ಪಾರ್ಕ್‌ ಮಾಡಲಾಗಿತ್ತು. ಇದರಿಂದ ಕೆಲಕಾಲ ಟ್ರಾಫಿಕ್‌ ಸಮಸ್ಯೆಯಾಯಿತು ಎಂದು ಕೆಲವರು ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದಾರೆ, ಇದೇ ವೇಳೆ, ಸಾರ್ವಜನಿಕರಿಗೆ ಒಂದು ಕಾನೂನು- ಸಚಿವರಿಗೆ ಇನ್ನೊಂದು ಕಾನೂನೇ ಎಂದೂ ಪ್ರಶ್ನೆ ಮಾಡಿದ್ದಾರೆ.  ಸಚಿವರಾಗಿ ಜವಾಬ್ದಾರಿ ಸ್ಥಾನದಲ್ಲಿರುವವರೇ ಹೀಗೆ ವಾಹನವನ್ನು ಪಾರ್ಕ್‌ ಮಾಡಿಸಿದರೆ ಹೇಗೆ ಎಂಬುದೂ ಪ್ರಶ್ನೆಯಾಗಿದೆ.

ಇಂತಹ ಸಂದರ್ಭಗಳಲ್ಲಿ ಕಾರಿನ ಚಾಲಕನಲ್ಲಿ ಕೆಲಸಕ್ಕಾಗಿ ಮಳಿಗೆಗಳಿಗೆ ಬಿಟ್ಟು  ವಾಹನವನ್ನು ಬೇರೆಡೆ ಪಾರ್ಕ್‌ ಮಾಡಿಸಿ ಕೆಲಸದ ನಂತರ ವಾಹನವನ್ನು ಮತ್ತೆ ಕರೆಯಿಸುವ ವ್ಯವಸ್ಥೆಯನ್ನು ಸಾಮಾನ್ಯ ಜನರೂ ಮಾಡುತ್ತಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

26 minutes ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

2 hours ago

ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…

4 hours ago

ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ

ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…

4 hours ago

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

17 hours ago

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ

ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…

1 day ago