(ಫೋಟೊ ಕೃಪೆ : ಪೇಸ್ ಬುಕ್ )
ಪುತ್ತೂರು ನಗರದ ಮಳಿಗೆಯೊಂದರ ಬಳಿ ಜಿಲ್ಲೆಯ ಸಚಿವರೊಬ್ಬರ ಕಾರನ್ನು ಪಾರ್ಕ್ ಮಾಡಿದ ಫೋಟೋ ಇದೀಗ ಸಾರ್ವಜನಿಕ ಚರ್ಚೆಗೆ ಕಾರಣವಾಗಿದೆ. ಸಚಿವರ ಕಾರು ಈ ರೀತಿ ಪಾರ್ಕ್ ಮಾಡಿರುವುದನ್ನು ಸಾರ್ವಜನಿಕರು ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನಿಸಿದ್ದಾರೆ. ಎಲ್ಲರಿಗೂ ಒಂದೇ ನಿಯಮವಲ್ಲವೇ ಇಲ್ಲಿ ? ಎಂಬುದು ಪ್ರಶ್ನೆಯ ಸಾರಾಂಶ.
ಪುತ್ತೂರು ನಗರದಲ್ಲಿ ವಾಹನಗಳಿಗೆ ಸರಿಯಾದ ಪಾರ್ಕಿಂಗ್ ವ್ಯವಸ್ಥೆ ಇಲ್ಲ. ವಾಹನಗಳ ಓಡಾಟ ಹೆಚ್ಚಾದಂತೆ ಪುತ್ತೂರು ಪೇಟೆಯ ರಸ್ತೆಗಳು ಆಗಾಗ ಬ್ಲಾಕ್ ಆಗುತ್ತವೆ. ಹೀಗಾದಾಗ ಇಡೀ ಪೇಟೆಯಲ್ಲಿ ಟ್ರಾಫಿಕ್ ಜಾಂ ಆಗುತ್ತದೆ.
ಆದರೆ ಸಚಿವರೊಬ್ಬರ ಕಾರನ್ನು ಗುರುವಾರ ಸಂಜೆ ನಗರದ ಮಳಿಗೆಯೊಂದರ ಎದುರಿನಲ್ಲಿ ಪಾರ್ಕ್ ಮಾಡಲಾಗಿತ್ತು. ಇದರಿಂದ ಕೆಲಕಾಲ ಟ್ರಾಫಿಕ್ ಸಮಸ್ಯೆಯಾಯಿತು ಎಂದು ಕೆಲವರು ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದಾರೆ, ಇದೇ ವೇಳೆ, ಸಾರ್ವಜನಿಕರಿಗೆ ಒಂದು ಕಾನೂನು- ಸಚಿವರಿಗೆ ಇನ್ನೊಂದು ಕಾನೂನೇ ಎಂದೂ ಪ್ರಶ್ನೆ ಮಾಡಿದ್ದಾರೆ. ಸಚಿವರಾಗಿ ಜವಾಬ್ದಾರಿ ಸ್ಥಾನದಲ್ಲಿರುವವರೇ ಹೀಗೆ ವಾಹನವನ್ನು ಪಾರ್ಕ್ ಮಾಡಿಸಿದರೆ ಹೇಗೆ ಎಂಬುದೂ ಪ್ರಶ್ನೆಯಾಗಿದೆ.
ಇಂತಹ ಸಂದರ್ಭಗಳಲ್ಲಿ ಕಾರಿನ ಚಾಲಕನಲ್ಲಿ ಕೆಲಸಕ್ಕಾಗಿ ಮಳಿಗೆಗಳಿಗೆ ಬಿಟ್ಟು ವಾಹನವನ್ನು ಬೇರೆಡೆ ಪಾರ್ಕ್ ಮಾಡಿಸಿ ಕೆಲಸದ ನಂತರ ವಾಹನವನ್ನು ಮತ್ತೆ ಕರೆಯಿಸುವ ವ್ಯವಸ್ಥೆಯನ್ನು ಸಾಮಾನ್ಯ ಜನರೂ ಮಾಡುತ್ತಾರೆ.
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…