(ಫೋಟೊ ಕೃಪೆ : ಪೇಸ್ ಬುಕ್ )
ಪುತ್ತೂರು ನಗರದ ಮಳಿಗೆಯೊಂದರ ಬಳಿ ಜಿಲ್ಲೆಯ ಸಚಿವರೊಬ್ಬರ ಕಾರನ್ನು ಪಾರ್ಕ್ ಮಾಡಿದ ಫೋಟೋ ಇದೀಗ ಸಾರ್ವಜನಿಕ ಚರ್ಚೆಗೆ ಕಾರಣವಾಗಿದೆ. ಸಚಿವರ ಕಾರು ಈ ರೀತಿ ಪಾರ್ಕ್ ಮಾಡಿರುವುದನ್ನು ಸಾರ್ವಜನಿಕರು ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನಿಸಿದ್ದಾರೆ. ಎಲ್ಲರಿಗೂ ಒಂದೇ ನಿಯಮವಲ್ಲವೇ ಇಲ್ಲಿ ? ಎಂಬುದು ಪ್ರಶ್ನೆಯ ಸಾರಾಂಶ.
ಪುತ್ತೂರು ನಗರದಲ್ಲಿ ವಾಹನಗಳಿಗೆ ಸರಿಯಾದ ಪಾರ್ಕಿಂಗ್ ವ್ಯವಸ್ಥೆ ಇಲ್ಲ. ವಾಹನಗಳ ಓಡಾಟ ಹೆಚ್ಚಾದಂತೆ ಪುತ್ತೂರು ಪೇಟೆಯ ರಸ್ತೆಗಳು ಆಗಾಗ ಬ್ಲಾಕ್ ಆಗುತ್ತವೆ. ಹೀಗಾದಾಗ ಇಡೀ ಪೇಟೆಯಲ್ಲಿ ಟ್ರಾಫಿಕ್ ಜಾಂ ಆಗುತ್ತದೆ.
ಆದರೆ ಸಚಿವರೊಬ್ಬರ ಕಾರನ್ನು ಗುರುವಾರ ಸಂಜೆ ನಗರದ ಮಳಿಗೆಯೊಂದರ ಎದುರಿನಲ್ಲಿ ಪಾರ್ಕ್ ಮಾಡಲಾಗಿತ್ತು. ಇದರಿಂದ ಕೆಲಕಾಲ ಟ್ರಾಫಿಕ್ ಸಮಸ್ಯೆಯಾಯಿತು ಎಂದು ಕೆಲವರು ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದಾರೆ, ಇದೇ ವೇಳೆ, ಸಾರ್ವಜನಿಕರಿಗೆ ಒಂದು ಕಾನೂನು- ಸಚಿವರಿಗೆ ಇನ್ನೊಂದು ಕಾನೂನೇ ಎಂದೂ ಪ್ರಶ್ನೆ ಮಾಡಿದ್ದಾರೆ. ಸಚಿವರಾಗಿ ಜವಾಬ್ದಾರಿ ಸ್ಥಾನದಲ್ಲಿರುವವರೇ ಹೀಗೆ ವಾಹನವನ್ನು ಪಾರ್ಕ್ ಮಾಡಿಸಿದರೆ ಹೇಗೆ ಎಂಬುದೂ ಪ್ರಶ್ನೆಯಾಗಿದೆ.
ಇಂತಹ ಸಂದರ್ಭಗಳಲ್ಲಿ ಕಾರಿನ ಚಾಲಕನಲ್ಲಿ ಕೆಲಸಕ್ಕಾಗಿ ಮಳಿಗೆಗಳಿಗೆ ಬಿಟ್ಟು ವಾಹನವನ್ನು ಬೇರೆಡೆ ಪಾರ್ಕ್ ಮಾಡಿಸಿ ಕೆಲಸದ ನಂತರ ವಾಹನವನ್ನು ಮತ್ತೆ ಕರೆಯಿಸುವ ವ್ಯವಸ್ಥೆಯನ್ನು ಸಾಮಾನ್ಯ ಜನರೂ ಮಾಡುತ್ತಾರೆ.
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…