Advertisement
ವೈರಲ್ ಸುದ್ದಿ

ಪುತ್ತೂರು ಪೇಟೆಯಲ್ಲಿ ರಸ್ತೆ ಬದಿ ಸಚಿವರ ಕಾರು ಪಾರ್ಕಿಂಗ್‌ | ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನಿಸಿದ ಸಾರ್ವಜನಿಕರು….! |

Share

ಪುತ್ತೂರು ನಗರದ ಮಳಿಗೆಯೊಂದರ ಬಳಿ ಜಿಲ್ಲೆಯ ಸಚಿವರೊಬ್ಬರ ಕಾರನ್ನು ಪಾರ್ಕ್ ಮಾಡಿದ ಫೋಟೋ ಇದೀಗ‌  ಸಾರ್ವಜನಿಕ ಚರ್ಚೆಗೆ ಕಾರಣವಾಗಿದೆ. ಸಚಿವರ ಕಾರು ಈ ರೀತಿ ಪಾರ್ಕ್‌ ಮಾಡಿರುವುದನ್ನು ಸಾರ್ವಜನಿಕರು ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನಿಸಿದ್ದಾರೆ. ಎಲ್ಲರಿಗೂ ಒಂದೇ ನಿಯಮವಲ್ಲವೇ ಇಲ್ಲಿ ? ಎಂಬುದು ಪ್ರಶ್ನೆಯ ಸಾರಾಂಶ.

ಪುತ್ತೂರು ನಗರದಲ್ಲಿ ವಾಹನಗಳಿಗೆ ಸರಿಯಾದ ಪಾರ್ಕಿಂಗ್‌ ವ್ಯವಸ್ಥೆ ಇಲ್ಲ. ವಾಹನಗಳ ಓಡಾಟ ಹೆಚ್ಚಾದಂತೆ ಪುತ್ತೂರು ಪೇಟೆಯ ರಸ್ತೆಗಳು ಆಗಾಗ ಬ್ಲಾಕ್‌ ಆಗುತ್ತವೆ. ಹೀಗಾದಾಗ ಇಡೀ ಪೇಟೆಯಲ್ಲಿ ಟ್ರಾಫಿಕ್‌ ಜಾಂ ಆಗುತ್ತದೆ.

ಆದರೆ ಸಚಿವರೊಬ್ಬರ ಕಾರನ್ನು ಗುರುವಾರ ಸಂಜೆ  ನಗರದ ಮಳಿಗೆಯೊಂದರ ಎದುರಿನಲ್ಲಿ ಪಾರ್ಕ್‌ ಮಾಡಲಾಗಿತ್ತು. ಇದರಿಂದ ಕೆಲಕಾಲ ಟ್ರಾಫಿಕ್‌ ಸಮಸ್ಯೆಯಾಯಿತು ಎಂದು ಕೆಲವರು ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದಾರೆ, ಇದೇ ವೇಳೆ, ಸಾರ್ವಜನಿಕರಿಗೆ ಒಂದು ಕಾನೂನು- ಸಚಿವರಿಗೆ ಇನ್ನೊಂದು ಕಾನೂನೇ ಎಂದೂ ಪ್ರಶ್ನೆ ಮಾಡಿದ್ದಾರೆ.  ಸಚಿವರಾಗಿ ಜವಾಬ್ದಾರಿ ಸ್ಥಾನದಲ್ಲಿರುವವರೇ ಹೀಗೆ ವಾಹನವನ್ನು ಪಾರ್ಕ್‌ ಮಾಡಿಸಿದರೆ ಹೇಗೆ ಎಂಬುದೂ ಪ್ರಶ್ನೆಯಾಗಿದೆ.

ಇಂತಹ ಸಂದರ್ಭಗಳಲ್ಲಿ ಕಾರಿನ ಚಾಲಕನಲ್ಲಿ ಕೆಲಸಕ್ಕಾಗಿ ಮಳಿಗೆಗಳಿಗೆ ಬಿಟ್ಟು  ವಾಹನವನ್ನು ಬೇರೆಡೆ ಪಾರ್ಕ್‌ ಮಾಡಿಸಿ ಕೆಲಸದ ನಂತರ ವಾಹನವನ್ನು ಮತ್ತೆ ಕರೆಯಿಸುವ ವ್ಯವಸ್ಥೆಯನ್ನು ಸಾಮಾನ್ಯ ಜನರೂ ಮಾಡುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

₹1,500 ಕೋಟಿ ಅಕ್ರಮ ಅಡಿಕೆ ಜಾಲ ಬಯಲು – ED ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…

13 hours ago

ಮಹಾರಾಷ್ಟ್ರದಲ್ಲಿ ತಡೆಹಿಡಿದ ಅಡಿಕೆ ಲಾರಿಗಳ ಬಿಡುಗಡೆಗೆ ಫಡ್ನವೀಸ್‌ಗೆ ಮನವಿ

ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್‌ಗೆ ಅಡಿಕೆ…

14 hours ago

ರಾಜ್ಯದ ವಿವಿದೆಡೆ ಭಾರೀ ಮಳೆ – ಜುಲೈ 8 ರಂದು ಹಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…

14 hours ago

ಮುಂಗಾರು ಬೆಳೆ ಸಮೀಕ್ಷೆ ಆರಂಭ | ರೈತರೇ ಮೊಬೈಲ್‌ ಮೂಲಕ ಬೆಳೆ ವಿವರ ದಾಖಲಿಸಿ – ಕೃಷಿ ಇಲಾಖೆ ಮನವಿ

2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್‌ ಆ್ಯಪ್‌ ಮೂಲಕವೇ ಬೆಳೆ…

14 hours ago

ಮಾಣಿ–ಸಂಪಾಜೆ ರಸ್ತೆ ದುರಸ್ತಿಗೆ ₹49.22 ಕೋಟಿ ಮಂಜೂರು | ಚತುಷ್ಪಥ ಯೋಜನೆಗೆ ವೇಗ

ಮಾಣಿ–ಸಂಪಾಜೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಕೇಂದ್ರದಿಂದ ₹49.22 ಕೋಟಿ ವಿಶೇಷ ಅನುದಾನ ಮಂಜೂರು.…

15 hours ago

ಭೂಕುಸಿತದ ಬಗ್ಗೆ ಎಚ್ಚರಿಕೆ – ಜುಲೈ 7 ರಿಂದ 11 ರವರೆಗೆ ಪಶ್ಚಿಮಘಟ್ಟದಲ್ಲಿ ಭಾರೀ ಮಳೆ ಸಾಧ್ಯತೆ

ಜುಲೈ 7ರಿಂದ 11ರವರೆಗೆ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಭೂಕುಸಿತದ…

15 hours ago