(ಫೋಟೊ ಕೃಪೆ : ಪೇಸ್ ಬುಕ್ )
ಪುತ್ತೂರು ನಗರದ ಮಳಿಗೆಯೊಂದರ ಬಳಿ ಜಿಲ್ಲೆಯ ಸಚಿವರೊಬ್ಬರ ಕಾರನ್ನು ಪಾರ್ಕ್ ಮಾಡಿದ ಫೋಟೋ ಇದೀಗ ಸಾರ್ವಜನಿಕ ಚರ್ಚೆಗೆ ಕಾರಣವಾಗಿದೆ. ಸಚಿವರ ಕಾರು ಈ ರೀತಿ ಪಾರ್ಕ್ ಮಾಡಿರುವುದನ್ನು ಸಾರ್ವಜನಿಕರು ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನಿಸಿದ್ದಾರೆ. ಎಲ್ಲರಿಗೂ ಒಂದೇ ನಿಯಮವಲ್ಲವೇ ಇಲ್ಲಿ ? ಎಂಬುದು ಪ್ರಶ್ನೆಯ ಸಾರಾಂಶ.
ಪುತ್ತೂರು ನಗರದಲ್ಲಿ ವಾಹನಗಳಿಗೆ ಸರಿಯಾದ ಪಾರ್ಕಿಂಗ್ ವ್ಯವಸ್ಥೆ ಇಲ್ಲ. ವಾಹನಗಳ ಓಡಾಟ ಹೆಚ್ಚಾದಂತೆ ಪುತ್ತೂರು ಪೇಟೆಯ ರಸ್ತೆಗಳು ಆಗಾಗ ಬ್ಲಾಕ್ ಆಗುತ್ತವೆ. ಹೀಗಾದಾಗ ಇಡೀ ಪೇಟೆಯಲ್ಲಿ ಟ್ರಾಫಿಕ್ ಜಾಂ ಆಗುತ್ತದೆ.
ಆದರೆ ಸಚಿವರೊಬ್ಬರ ಕಾರನ್ನು ಗುರುವಾರ ಸಂಜೆ ನಗರದ ಮಳಿಗೆಯೊಂದರ ಎದುರಿನಲ್ಲಿ ಪಾರ್ಕ್ ಮಾಡಲಾಗಿತ್ತು. ಇದರಿಂದ ಕೆಲಕಾಲ ಟ್ರಾಫಿಕ್ ಸಮಸ್ಯೆಯಾಯಿತು ಎಂದು ಕೆಲವರು ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದಾರೆ, ಇದೇ ವೇಳೆ, ಸಾರ್ವಜನಿಕರಿಗೆ ಒಂದು ಕಾನೂನು- ಸಚಿವರಿಗೆ ಇನ್ನೊಂದು ಕಾನೂನೇ ಎಂದೂ ಪ್ರಶ್ನೆ ಮಾಡಿದ್ದಾರೆ. ಸಚಿವರಾಗಿ ಜವಾಬ್ದಾರಿ ಸ್ಥಾನದಲ್ಲಿರುವವರೇ ಹೀಗೆ ವಾಹನವನ್ನು ಪಾರ್ಕ್ ಮಾಡಿಸಿದರೆ ಹೇಗೆ ಎಂಬುದೂ ಪ್ರಶ್ನೆಯಾಗಿದೆ.
ಇಂತಹ ಸಂದರ್ಭಗಳಲ್ಲಿ ಕಾರಿನ ಚಾಲಕನಲ್ಲಿ ಕೆಲಸಕ್ಕಾಗಿ ಮಳಿಗೆಗಳಿಗೆ ಬಿಟ್ಟು ವಾಹನವನ್ನು ಬೇರೆಡೆ ಪಾರ್ಕ್ ಮಾಡಿಸಿ ಕೆಲಸದ ನಂತರ ವಾಹನವನ್ನು ಮತ್ತೆ ಕರೆಯಿಸುವ ವ್ಯವಸ್ಥೆಯನ್ನು ಸಾಮಾನ್ಯ ಜನರೂ ಮಾಡುತ್ತಾರೆ.
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…