ಮಡಿಕೇರಿಗೆ ಮಂತ್ರಿಗಿರಿ: ಅಪ್ಪಚ್ಚು ರಂಜನ್‌ಗೆ ಸಚಿವ ಸ್ಥಾನ ಖಚಿತ : ಕೇಂದ್ರ ಸಚಿವರ ಭರವಸೆ

May 8, 2023
10:49 AM

ಮಡಿಕೇರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಪ್ಪಚ್ಚು ರಂಜನ್‌ ಅವರನ್ನು ಸಚಿವರನ್ನಾಗಿ ಮಾಡುವ ಉದ್ದೇಶದಿಂದಲಾದರೂ ಭಜರಂಗಿ ಗೊತ್ತಿಲ್ಲ ಎನ್ನುವ ಕಾಂಗ್ರೆಸ್‌ ಸೋಲಿಸಬೇಕು ಎಂದು ಕೇಂದ್ರ ಸಚಿವ ವಿ.ಕೆ. ಸಿಂಗ್‌ ಮನವಿ ಮಾಡಿದರು.

ಕೇಂದ್ರ ಸಚಿವ ವಿ.ಕೆ. ಸಿಂಗ್‌ ರೋಡ್‌ ಶೋ: ಪಟ್ಟಣದ ಬೈಚನಹಳ್ಳಿ ಇರುವ ಮಾರಿಯಮ್ಮ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಅಪ್ಪಚ್ಚು ರಂಜನ್ ಮತ್ತು ವಿ.ಕೆ. ಸಿಂಗ್ ಅವರು ಬಳಿಕ ಬೃಹತ್ ರೋಡ್ ಷೋ ಆರಂಭಿಸಿದರು. ಮಾರಿಯಮ್ಮ ದೇವಾಲಯದ ಬಳಿಯಿಂದ ಪಟ್ಟಣದ ಕಾರು ನಿಲ್ದಾಣದವರೆಗೆ ಒಂದು ಕಿಲೋ ಮೀಟರ್ ರೋಡ್ ನಡೆಸಿದರು.  ಬಳಿಕ ಕಾರು ನಿಲ್ದಾಣದಲ್ಲಿ ನಡೆದ ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ವಿ.ಕೆ. ಸಿಂಗ್ ಅವರು ಎಲ್ಲರಿಗೂ ನಮಸ್ಕಾರ ಎಂದು ಕನ್ನಡದಲ್ಲೇ ಹೇಳುವ ಮೂಲಕ ಭಾಷಣ ಆರಂಭಿಸಿದ ವಿ.ಕೆ. ಸಿಂಗ್ ಅವರು ಮೊದಲಿಗೆ ಕಾರ್ಯಪ್ಪ ಅವರನ್ನು ನೆನೆದರು. ಅವರು 26 ರೆಜಿಮೆಂಟಿನಲ್ಲಿ ಇದ್ದವರು. ಅವರಂತಹ ಹಲವು ಸೇನಾಧಿಕಾರಿಗಳನ್ನು ಕೊಡಗು ದೇಶಕ್ಕೆ ಕೊಟ್ಟಿದ್ದು, ಕೊಡಗಿಗೆ ಸಾಕಷ್ಟು ಶಕ್ತಿ ಇದೆ. ಆ ಶಕ್ತಿ ಈ ಚುನಾವಣೆಯಲ್ಲಿ ಪ್ರದರ್ಶನವಾಗಬೇಕು ಎಂದು ಹೇಳಿದರು.

ಬಹುದಿನಗಳ ಕೊಡಗು ನೋಡುವ ಕಸನು ಸಾಕಾರ: ನಾನು ಹಿಂದೆಯೇ ಕೊಡಗು ಜಿಲ್ಲೆಗೆ ಬರಬೇಕು ಎಂದು ಕೊಂಡಿದ್ದೆ. ನನಗೆ ಈಗ ಆ ಅವಕಾಶ ಸಿಕ್ಕಿದೆ ಎಂದರು. ಕಾಂಗ್ರೆಸ್ ನವರು ನಮ್ಮ ಮೇಲೆ ಸವಾರಿ ಮಾಡುತ್ತಿದ್ದಾರೆ. ಹನುಮಾನ್ ಗೊತ್ತು ಭಜರಂಗಿ ಗೊತ್ತಿಲ್ಲ ಎನ್ನುತ್ತಿದ್ದಾರೆ. ಅವರನ್ನು ಈ ಚುನಾವಣೆಯಲ್ಲಿ ಸೋಲಿಸಬೇಕು. ಅದಕ್ಕಾಗಿ ನೀವು ಚುನಾವಣೆಯಲ್ಲಿ ಕಮಲದ ಬಟನ್ ಒತ್ತಬೇಕು ಮತ್ತು ನೀವು ಇನ್ನಷ್ಟು ಜನರಿಂದ ಬಟನ್ ಒತ್ತಿಸಿ ಕಾಂಗ್ರೆಸ್ ಸೋಲಿಸಬೇಕು. ದೇಶದಲ್ಲಿ ಕಾಂಗ್ರೆಸ್ ಇರುವವರೆಗೆ ಭ್ರಷ್ಟಾಚಾರ ಇದ್ದೇ ಇರುತ್ತದೆ. ಭ್ರಷ್ಟಾಚಾರ ತೊಲಗಿಸಲು ಕಾಂಗ್ರೆಸ್ ತೊಲಗಬೇಕು ಎಂದ ಅವರು ಅಪ್ಪಚ್ಚು ರಂಜನ್ ಅವರನ್ನು ಸಚಿವರನ್ನಾಗಿ ಮಾಡಲು ಕಾಂಗ್ರೆಸ್ ಅನ್ನು ಸೋಲಿಸಿ ಎಂದು ಕೇಂದ್ರ ರಾಜ್ಯ ಖಾತೆ ಸಚಿವ ವಿ.ಕೆ. ಸಿಂಗ್ ಹೇಳಿದರು.

ಕುಶಾಲನಗರದಲ್ಲಿ ಬಿಜೆಪಿ ಬೈಕ್‌ ಜಾಥಾ: ಇದಕ್ಕೂ ಮೊದಲು ಕೊಡಗು ಹಾಸನ ಜಿಲ್ಲೆಯ ಗಡಿಭಾಗವಾದ ಶಿರಂಗಾಲದಿಂದ ಕುಶಾಲನಗರದವರೆಗೆ ನೂರಾರು ಬೈಕುಗಳಲ್ಲಿ ಜನರು ಜಾಥಾ ನಡೆಸಿದರು. ಇನ್ನು ರೋಡ್ ಷೋ ಸಂದರ್ಭ ವ್ಯಕ್ತಿಯೊಬ್ಬರು ಭಜರಂಗಿಯ ವೇಕ್ಷ ಧರಿಸಿ ಎಲ್ಲರ ಗಮನ ಸೆಳೆದರು. ಆ ಮೂಲಕ ಭಜರಂಗ ದಳವನ್ನು ನಿಷೇಧಿಸುತ್ತೇವೆ ಎಂದು ತಮ್ಮ ಪ್ರಣಾಳಿಕೆಯಲ್ಲಿ ಹೇಳಿರುವ ಕಾಂಗ್ರೆಸ್ ಪಕ್ಷಕ್ಕೆ  ಬಿಜೆಪಿ ಕಾರ್ಯಕರ್ತರು ತಿರುಗೇಟು ನೀಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!
March 25, 2026
12:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್
ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ
March 23, 2026
10:18 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror