ಸುದ್ದಿಗಳು

ಮಡಿಕೇರಿಗೆ ಮಂತ್ರಿಗಿರಿ: ಅಪ್ಪಚ್ಚು ರಂಜನ್‌ಗೆ ಸಚಿವ ಸ್ಥಾನ ಖಚಿತ : ಕೇಂದ್ರ ಸಚಿವರ ಭರವಸೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಡಿಕೇರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಪ್ಪಚ್ಚು ರಂಜನ್‌ ಅವರನ್ನು ಸಚಿವರನ್ನಾಗಿ ಮಾಡುವ ಉದ್ದೇಶದಿಂದಲಾದರೂ ಭಜರಂಗಿ ಗೊತ್ತಿಲ್ಲ ಎನ್ನುವ ಕಾಂಗ್ರೆಸ್‌ ಸೋಲಿಸಬೇಕು ಎಂದು ಕೇಂದ್ರ ಸಚಿವ ವಿ.ಕೆ. ಸಿಂಗ್‌ ಮನವಿ ಮಾಡಿದರು.

Advertisement
Advertisement

ಕೇಂದ್ರ ಸಚಿವ ವಿ.ಕೆ. ಸಿಂಗ್‌ ರೋಡ್‌ ಶೋ: ಪಟ್ಟಣದ ಬೈಚನಹಳ್ಳಿ ಇರುವ ಮಾರಿಯಮ್ಮ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಅಪ್ಪಚ್ಚು ರಂಜನ್ ಮತ್ತು ವಿ.ಕೆ. ಸಿಂಗ್ ಅವರು ಬಳಿಕ ಬೃಹತ್ ರೋಡ್ ಷೋ ಆರಂಭಿಸಿದರು. ಮಾರಿಯಮ್ಮ ದೇವಾಲಯದ ಬಳಿಯಿಂದ ಪಟ್ಟಣದ ಕಾರು ನಿಲ್ದಾಣದವರೆಗೆ ಒಂದು ಕಿಲೋ ಮೀಟರ್ ರೋಡ್ ನಡೆಸಿದರು.  ಬಳಿಕ ಕಾರು ನಿಲ್ದಾಣದಲ್ಲಿ ನಡೆದ ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ವಿ.ಕೆ. ಸಿಂಗ್ ಅವರು ಎಲ್ಲರಿಗೂ ನಮಸ್ಕಾರ ಎಂದು ಕನ್ನಡದಲ್ಲೇ ಹೇಳುವ ಮೂಲಕ ಭಾಷಣ ಆರಂಭಿಸಿದ ವಿ.ಕೆ. ಸಿಂಗ್ ಅವರು ಮೊದಲಿಗೆ ಕಾರ್ಯಪ್ಪ ಅವರನ್ನು ನೆನೆದರು. ಅವರು 26 ರೆಜಿಮೆಂಟಿನಲ್ಲಿ ಇದ್ದವರು. ಅವರಂತಹ ಹಲವು ಸೇನಾಧಿಕಾರಿಗಳನ್ನು ಕೊಡಗು ದೇಶಕ್ಕೆ ಕೊಟ್ಟಿದ್ದು, ಕೊಡಗಿಗೆ ಸಾಕಷ್ಟು ಶಕ್ತಿ ಇದೆ. ಆ ಶಕ್ತಿ ಈ ಚುನಾವಣೆಯಲ್ಲಿ ಪ್ರದರ್ಶನವಾಗಬೇಕು ಎಂದು ಹೇಳಿದರು.

ಬಹುದಿನಗಳ ಕೊಡಗು ನೋಡುವ ಕಸನು ಸಾಕಾರ: ನಾನು ಹಿಂದೆಯೇ ಕೊಡಗು ಜಿಲ್ಲೆಗೆ ಬರಬೇಕು ಎಂದು ಕೊಂಡಿದ್ದೆ. ನನಗೆ ಈಗ ಆ ಅವಕಾಶ ಸಿಕ್ಕಿದೆ ಎಂದರು. ಕಾಂಗ್ರೆಸ್ ನವರು ನಮ್ಮ ಮೇಲೆ ಸವಾರಿ ಮಾಡುತ್ತಿದ್ದಾರೆ. ಹನುಮಾನ್ ಗೊತ್ತು ಭಜರಂಗಿ ಗೊತ್ತಿಲ್ಲ ಎನ್ನುತ್ತಿದ್ದಾರೆ. ಅವರನ್ನು ಈ ಚುನಾವಣೆಯಲ್ಲಿ ಸೋಲಿಸಬೇಕು. ಅದಕ್ಕಾಗಿ ನೀವು ಚುನಾವಣೆಯಲ್ಲಿ ಕಮಲದ ಬಟನ್ ಒತ್ತಬೇಕು ಮತ್ತು ನೀವು ಇನ್ನಷ್ಟು ಜನರಿಂದ ಬಟನ್ ಒತ್ತಿಸಿ ಕಾಂಗ್ರೆಸ್ ಸೋಲಿಸಬೇಕು. ದೇಶದಲ್ಲಿ ಕಾಂಗ್ರೆಸ್ ಇರುವವರೆಗೆ ಭ್ರಷ್ಟಾಚಾರ ಇದ್ದೇ ಇರುತ್ತದೆ. ಭ್ರಷ್ಟಾಚಾರ ತೊಲಗಿಸಲು ಕಾಂಗ್ರೆಸ್ ತೊಲಗಬೇಕು ಎಂದ ಅವರು ಅಪ್ಪಚ್ಚು ರಂಜನ್ ಅವರನ್ನು ಸಚಿವರನ್ನಾಗಿ ಮಾಡಲು ಕಾಂಗ್ರೆಸ್ ಅನ್ನು ಸೋಲಿಸಿ ಎಂದು ಕೇಂದ್ರ ರಾಜ್ಯ ಖಾತೆ ಸಚಿವ ವಿ.ಕೆ. ಸಿಂಗ್ ಹೇಳಿದರು.

ಕುಶಾಲನಗರದಲ್ಲಿ ಬಿಜೆಪಿ ಬೈಕ್‌ ಜಾಥಾ: ಇದಕ್ಕೂ ಮೊದಲು ಕೊಡಗು ಹಾಸನ ಜಿಲ್ಲೆಯ ಗಡಿಭಾಗವಾದ ಶಿರಂಗಾಲದಿಂದ ಕುಶಾಲನಗರದವರೆಗೆ ನೂರಾರು ಬೈಕುಗಳಲ್ಲಿ ಜನರು ಜಾಥಾ ನಡೆಸಿದರು. ಇನ್ನು ರೋಡ್ ಷೋ ಸಂದರ್ಭ ವ್ಯಕ್ತಿಯೊಬ್ಬರು ಭಜರಂಗಿಯ ವೇಕ್ಷ ಧರಿಸಿ ಎಲ್ಲರ ಗಮನ ಸೆಳೆದರು. ಆ ಮೂಲಕ ಭಜರಂಗ ದಳವನ್ನು ನಿಷೇಧಿಸುತ್ತೇವೆ ಎಂದು ತಮ್ಮ ಪ್ರಣಾಳಿಕೆಯಲ್ಲಿ ಹೇಳಿರುವ ಕಾಂಗ್ರೆಸ್ ಪಕ್ಷಕ್ಕೆ  ಬಿಜೆಪಿ ಕಾರ್ಯಕರ್ತರು ತಿರುಗೇಟು ನೀಡಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹಲಸಿನ ಅರಿವಿನ ಹರಿವಿನ ಪ್ರಸಂಗ ‘ಪನಸೋಪಾಖ್ಯಾನ’ | ಪರಿಸರ ಉಳಿಸುವ ಸಂದೇಶ ಸಾರಿದ ತಾಳಮದ್ದಳೆ |

 ‘ಪನಸೋಪಾಖ್ಯಾನ’ ಪ್ರಸಂಗವು ತಾಳಮದ್ದಳೆ ರೂಪದಲ್ಲಿ ಪ್ರಸ್ತುತವಾಯಿತು. ಇದು ಕಾಲ್ಪನಿಕ ಕಥಾಭಾಗವನ್ನು ಹೊಂದಿರುವ ಪ್ರಸಂಗ.…

2 hours ago

ಹವಾಮಾನ ವರದಿ | 14-06-2025 | ಜೂನ್.‌18 ರಿಂದ ಮಳೆಯ ಪ್ರಮಾಣ ಕಡಿಮೆ ನಿರೀಕ್ಷೆ

ಜೂನ್ 18 ರಿಂದ ಮುಂಗಾರು ಮತ್ತೆ ದುರ್ಬಲಗೊಂಡು ಮಳೆ ಕಡಿಮೆಯಾಗುವ ಸೂಚನೆಗಳಿವೆ.

3 hours ago

ಅಡಿಕೆ ಜಗಿಯುವ ಪ್ರವೃತ್ತಿ ಎಲ್ಲೆಲ್ಲಿ ಇದೆ ?

ತಾಂಬೂಲ ಸೇವನೆಗೆ ಅದರದ್ದೇ ಆದ ಇತಿಹಾಸ ಇದೆ. ಜಗತ್ತಿನ ಅಭಿವೃದ್ಧಿ ಹೊಂದಿದ ಮತ್ತು…

5 hours ago

ಮಕ್ಕಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯ ಪರಿಚಯ ಮೂಡಿಸಬೇಕಿದೆ

ಮಕ್ಕಳಲ್ಲಿ ಬೌದ್ಧಿಕ ಸಾಮರ್ಥ್ಯ ಗಣಿತ ಹಾಗೂ ಭಾಷಾ ಕೌಶಲ್ಯವನ್ನು ಅಭಿವೃದ್ಧಿಪಡಿಸುವ ಕಲಿಕಾ ಮಾದರಿ…

7 hours ago

ಎಳೆ ಅಡಿಕೆ ಬೀಳಲು ಹವಾಮಾನ ವೈಪರೀತ್ಯ ಕಾರಣವೇ…!?

ಅಡಿಕೆ ಬೆಳೆಗಾರರಿಗೆ ಜೂನ್‌ ಆರಂಭವಾಗುತ್ತಿದ್ದಂತೆಯೇ ಎಳೆ ಅಡಿಕೆ ಬೀಳುವ ಸಮಸ್ಯೆ ಆರಂಭವಾಗಿದೆ. ವಿವಿಧ…

12 hours ago