ಪ್ರಮುಖ

ಲಘು ಹೆಲಿಕಾಪ್ಟರ್‌ಗಾಗಿ ಹೆಚ್‍ಎಎಲ್‍ನೊಂದಿಗೆ ರಕ್ಷಣಾ ಸಚಿವಾಲಯದಿಂದ ಒಪ್ಪಂದ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಇತ್ತೀಚಿನ ವರ್ಷಗಳಲ್ಲಿ ನಮ್ಮ ಭಾರತೀಯ ಸೇನೆ(Indian Army) ಗಣನೀಯವಾಗಿ ಪ್ರಗತಿಯನ್ನು ಕಾಣುತ್ತಿದೆ. ಹಿಂದೆಂದೂ ಕಾಣದ ಸೌಲಭ್ಯಗಳು(Facilities) ನಮ್ಮ ಸೈನಿಕರಿಗೆ(Soldiers) ದೊರೆಯುತ್ತಿದೆ. ಇದೀಗ ಭಾರತೀಯ ಸೇನೆ ಮತ್ತು ಕೋಸ್ಟ್ ಗಾರ್ಡ್‍ಗಾಗಿ(Coast Gourd) 34 ಸುಧಾರಿತ ಲಘು ಹೆಲಿಕಾಪ್ಟರ್‌(Light helicopter)  ಮತ್ತು ಅದಕ್ಕೆ ಸಂಬಂಧಿಸಿದ ಸಲಕರಣೆಗಳಿಗಾಗಿ ರಕ್ಷಣಾ ಸಚಿವಾಲಯವು(Ministry of Defence) ಬೆಂಗಳೂರಿನ (Bengaluru) ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‍ನೊಂದಿಗೆ(HAL) 8073.17 ಕೋಟಿ ರೂ. ಮೌಲ್ಯದ ಎರಡು ಒಪ್ಪಂದಗಳಿಗೆ ಸಹಿ ಹಾಕಿದೆ.

Advertisement

34 ಧ್ರುವ ಎಮ್‍ಕೆ ಹೆಲಿಕಾಪ್ಟರ್‌ಗಳಲ್ಲಿ ಸೇನೆಯು 25 ಮತ್ತು ಕೋಸ್ಟ್ ಗಾರ್ಡ್ 9ನ್ನು ಪಡೆಯಲಿದೆ ಎಂದು ಸಚಿವಾಲಯ ತಿಳಿಸಿದೆ. ಭದ್ರತಾ ಕ್ಯಾಬಿನೆಟ್ ಸಮಿತಿ (ಸಿಸಿಎಸ್) ಕಳೆದ ವಾರ ಎರಡು ಖರೀದಿ ಯೋಜನೆಗಳಿಗೆ ಅನುಮತಿ ನೀಡಿತ್ತು.  ALH Mk III MR ಹೆಲಿಕಾಪ್ಟರ್‌ನ್ನು ಸೈನಿಕರನ್ನು ಕರೆದೊಯ್ಯಲು, ಹುಡುಕಾಟ ಮತ್ತು ಅಪಘಾತದ ವೇಳೆ ರಕ್ಷಣಾ ಕಾರ್ಯಾಚರಣೆಗಾಗಿ ವಿನ್ಯಾಸಗೊಳಿಸಲಾಗಿದೆ.

ಈ ಹೆಲಿಕಾಪ್ಟರ್, ಸಿಯಾಚಿನ್ ಗ್ಲೇಸಿಯರ್ ಮತ್ತು ಲಡಾಖ್‍ನಂತಹ ಎತ್ತರದ ಪ್ರದೇಶಗಳಲ್ಲಿ ತನ್ನ ಕಾರ್ಯಕ್ಷಮತೆಯನ್ನು ಸಾಬೀತುಪಡಿಸಿದೆ. ಸಮುದ್ರ ಮತ್ತು ಭೂಮಿಯ ಮೇಲಿನ ಪ್ರತಿಕೂಲ ವಾತಾವರಣದ ಪರಿಸ್ಥಿತಿಗಳಲ್ಲಿಯೂ ಇದು ತನ್ನ ಸಾಮಥ್ರ್ಯವನ್ನು ಸಾಬೀತುಪಡಿಸಿದೆ.

  • ಅಂತರ್ಜಾಲ ಮಾಹಿತಿ

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಪುತ್ತೂರು ಜಾತ್ರೆ ಎಂದರೆ “ನಮ್ಮ ಮನೆ ಉತ್ಸವ”

ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಪುಣ್ಯ ಕ್ಷೇತ್ರಗಳಲ್ಲಿ ಪುತ್ತೂರು ಶ್ರೀ ಮಹತೋಭಾರ ಶ್ರೀ…

6 hours ago

ಕೆಲವು ವಿಶೇಷ ಯೋಗಗಳು ಮತ್ತು ಗ್ರಹಗಳ ಸಂಯೋಜನೆ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

11 hours ago

ಮೀಸಲಾತಿಗಾಗಿ ಜಾತಿಯಾಗುವ ಮತಧರ್ಮ

ಜಾತಿಗಣತಿ ಮಾಡಿ ಏನನ್ನು ಸಾಧಿಸಲು ಸಾಧ್ಯ? ಸದ್ಯ ಬಹಿರಂಗ ಆಗಿರುವ ವರದಿಯು ಇನ್ನಷ್ಟು…

19 hours ago

ಸರಕಾರಿ ಶಾಲೆಯಲ್ಲಿ ಬೆಳೆಸಿದ ತರಕಾರಿ ಜಿಲ್ಲಾಧಿಕಾರಿಗೆ ಕೊಡುಗೆ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುತ್ಲೂರು ಸರಕಾರಿ ಶಾಲೆ ವಿದ್ಯಾರ್ಥಿ ವಿದ್ಯಾರ್ಥಿನಿಯರು…

20 hours ago

ಅನ್ನದ ಪರಿಮಳ ಮನವರಳಿಸ ಬಹುದಲ್ಲವೇ..!

ಅನ್ನದ ಪರಿಮಳ ಎಷ್ಟು ಸೊಗಸು. ಅಡುಗೆ ಮನೆಯ ಭಾಷೆಯೇ ಅಂತಹದ್ದು.

1 day ago

ಹೆಚ್ಚಿನ ಮೌಲ್ಯದ ಹಣ್ಣಿನ ಬೆಳೆಗಳ ಕುರಿತು ಚರ್ಚೆ | ಹಲಸು , ಡ್ರಾಗನ್‌ಫ್ರುಟ್‌ ಕೃಷಿಯ ಕಡೆಗೆ ಆದ್ಯತೆ |

ಭಾರತದ ವಿವಿಧ ಕಡೆಗಳಲ್ಲಿ ಉತ್ಪಾದಕತೆಯನ್ನು ಹೆಚ್ಚಿಸುವ ಸಾಮರ್ಥ್ಯ ಇರುವ ಡ್ರಾಗನ್‌ ಫ್ರುಟ್(ಕಮಲಂ) ಹಾಗೂ…

1 day ago