Advertisement
ಪ್ರಮುಖ

ಲಘು ಹೆಲಿಕಾಪ್ಟರ್‌ಗಾಗಿ ಹೆಚ್‍ಎಎಲ್‍ನೊಂದಿಗೆ ರಕ್ಷಣಾ ಸಚಿವಾಲಯದಿಂದ ಒಪ್ಪಂದ |

Share

ಇತ್ತೀಚಿನ ವರ್ಷಗಳಲ್ಲಿ ನಮ್ಮ ಭಾರತೀಯ ಸೇನೆ(Indian Army) ಗಣನೀಯವಾಗಿ ಪ್ರಗತಿಯನ್ನು ಕಾಣುತ್ತಿದೆ. ಹಿಂದೆಂದೂ ಕಾಣದ ಸೌಲಭ್ಯಗಳು(Facilities) ನಮ್ಮ ಸೈನಿಕರಿಗೆ(Soldiers) ದೊರೆಯುತ್ತಿದೆ. ಇದೀಗ ಭಾರತೀಯ ಸೇನೆ ಮತ್ತು ಕೋಸ್ಟ್ ಗಾರ್ಡ್‍ಗಾಗಿ(Coast Gourd) 34 ಸುಧಾರಿತ ಲಘು ಹೆಲಿಕಾಪ್ಟರ್‌(Light helicopter)  ಮತ್ತು ಅದಕ್ಕೆ ಸಂಬಂಧಿಸಿದ ಸಲಕರಣೆಗಳಿಗಾಗಿ ರಕ್ಷಣಾ ಸಚಿವಾಲಯವು(Ministry of Defence) ಬೆಂಗಳೂರಿನ (Bengaluru) ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‍ನೊಂದಿಗೆ(HAL) 8073.17 ಕೋಟಿ ರೂ. ಮೌಲ್ಯದ ಎರಡು ಒಪ್ಪಂದಗಳಿಗೆ ಸಹಿ ಹಾಕಿದೆ.

34 ಧ್ರುವ ಎಮ್‍ಕೆ ಹೆಲಿಕಾಪ್ಟರ್‌ಗಳಲ್ಲಿ ಸೇನೆಯು 25 ಮತ್ತು ಕೋಸ್ಟ್ ಗಾರ್ಡ್ 9ನ್ನು ಪಡೆಯಲಿದೆ ಎಂದು ಸಚಿವಾಲಯ ತಿಳಿಸಿದೆ. ಭದ್ರತಾ ಕ್ಯಾಬಿನೆಟ್ ಸಮಿತಿ (ಸಿಸಿಎಸ್) ಕಳೆದ ವಾರ ಎರಡು ಖರೀದಿ ಯೋಜನೆಗಳಿಗೆ ಅನುಮತಿ ನೀಡಿತ್ತು.  ALH Mk III MR ಹೆಲಿಕಾಪ್ಟರ್‌ನ್ನು ಸೈನಿಕರನ್ನು ಕರೆದೊಯ್ಯಲು, ಹುಡುಕಾಟ ಮತ್ತು ಅಪಘಾತದ ವೇಳೆ ರಕ್ಷಣಾ ಕಾರ್ಯಾಚರಣೆಗಾಗಿ ವಿನ್ಯಾಸಗೊಳಿಸಲಾಗಿದೆ.

ಈ ಹೆಲಿಕಾಪ್ಟರ್, ಸಿಯಾಚಿನ್ ಗ್ಲೇಸಿಯರ್ ಮತ್ತು ಲಡಾಖ್‍ನಂತಹ ಎತ್ತರದ ಪ್ರದೇಶಗಳಲ್ಲಿ ತನ್ನ ಕಾರ್ಯಕ್ಷಮತೆಯನ್ನು ಸಾಬೀತುಪಡಿಸಿದೆ. ಸಮುದ್ರ ಮತ್ತು ಭೂಮಿಯ ಮೇಲಿನ ಪ್ರತಿಕೂಲ ವಾತಾವರಣದ ಪರಿಸ್ಥಿತಿಗಳಲ್ಲಿಯೂ ಇದು ತನ್ನ ಸಾಮಥ್ರ್ಯವನ್ನು ಸಾಬೀತುಪಡಿಸಿದೆ.

  • ಅಂತರ್ಜಾಲ ಮಾಹಿತಿ

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

7 hours ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

8 hours ago

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

23 hours ago

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

1 day ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

1 day ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

2 days ago