ಮಿರರ್‌ ನೆರವು | ಬಾಲಕಿಯ ಚಿಕಿತ್ಸೆಗೆ ನೆರವಾಗುವಿರಾ…

July 15, 2022
9:36 AM

ಕಾಸರಗೋಡು ಜಿಲ್ಲೆಯ  ಕುಂಬ್ದಾಜೆ ಪಂಚಾಯತ್ 13ನೇ ವಾರ್ಡ್ ವ್ಯಾಪ್ತಿಯ ಕಜೆಮಲೆ ನಿವಾಸಿ ಉದಯ ಕುಮಾರ್ ಹಾಗೂ ಸವಿತಾ ದಂಪತಿಗಳ ಪುತ್ರಿ ನಾರಂಪಾಡಿ  ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿನಿ ಸಾನ್ವಿ (7) ಅಪರೂಪವಾಗಿ ಕಂಡುಬರುವ ತಲಸ್ಸೇಮಿಯಾ ಮೇಜರ್ ಎಂಬ  ಕಾಯಿಲೆ ತಗಲಿದ್ದು, ಚಿಕಿತ್ಸೆಗಾಗಿ ಬಡ ಕುಟುಂಬ ದಾನಿಗಳಿಂದ ನೆರವನ್ನು ಕೇಳಿಕೊಂಡಿದೆ.

ಈಗಾಗಲೇ ಬೆಂಗಳೂರಿನ ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಈ ಬಾಲಕಿಯ ಚಿಕಿತ್ಸೆಗಾಗಿ ಈ ಬಡ ಕುಟುಂಬ ಅಪಾರ ಮೊತ್ತ ವ್ಯಯಿಸಿದ್ದು, ಮುಂದೆ ಅಸ್ಥಿಮಜ್ಜೆ ಕಸಿ ಮಾಡುವ ಶಸ್ತ್ರಕ್ರಿಯೆ ನಡೆಯಬೇಕಿದ್ದು, ಅಂದಾಜು 40 ಲಕ್ಷ ಮೊತ್ತ ಅವಶ್ಯಕವಾಗಿದೆ ಎಂದು ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ.

ಇಷ್ಟು ದೊಡ್ಡ ಮೊತ್ತವನ್ನು ಹೊಂದಿಸಲು ಅಸಾಧ್ಯವಾದ ಈ ಬಡ ಕುಟುಂಬಕ್ಕೆ ಆಸರೆಯಾಗುವ ನಿಟ್ಟಿನಲ್ಲಿ ಕುಂಬ್ದಾಜೆ ಪಂಚಾಯತ್ ಅಧ್ಯಕ್ಷ ಹಮೀದ್ ಪೊಸೊಳಿಗೆ ಅಧ್ಯಕ್ಷತೆಯಲ್ಲಿ ಊರ ಪರವೂರ ಬಂಧುಗಳ ಸಹಕಾರದೊಂದಿಗೆ ಸಾನ್ವಿ ಚಿಕಿತ್ಸಾ ಸಹಾಯ ಸಮಿತಿಯನ್ನು ರೂಪಿಸಿದ್ದು, ಸಮಿತಿಯ ಖಾತೆಯ ಮುಖಾಂತರ ದಾನಿಗಳಿಂದ ಚಿಕಿತ್ಸಾ ನೆರವನ್ನು ಸ್ವೀಕರಿಸಲಾಗುತ್ತಿದೆ.

ಇದರೊಂದಿಗೆ ಸಮಿತಿಯ ಸದಸ್ಯರು ಗುಂಪುಗಳಾಗಿ ತೆರಳಿ, ವಿವಿಧ ಸ್ವ ಸಹಾಯ ಸಂಘ, ಕ್ಲಬ್, ವಿದ್ಯಾ ಸಂಸ್ಥೆ, ಪೊಲೀಸ್ ಠಾಣೆ ಸೇರಿದಂತೆ ಸರ್ಕಾರಿ ಹಾಗೂ ಸರ್ಕಾರೇತರ ಕಚೇರಿಗಳಿಂದಲೂ ಆರ್ಥಿಕ ನೆರವನ್ನು ಸ್ವೀಕರಿಸುತ್ತಿದ್ದಾರೆ. ಬೆಳಿಂಜ – ಬದಿಯಡ್ಕ – ಕಾಸರಗೋಡು ಸಂಚರಿಸುವ ಬಿಲಾಲ್, ಮಲ್ಲ – ಕಾಸರಗೋಡು – ಪೈಕ – ಮುಳ್ಳೇರಿಯಾ – ಬದಿಯಡ್ಕ – ಪೆರ್ಲ ರಸ್ತೆ ಮೂಲಕ ಸಾಗುವ ದುರ್ಗಾ ಗಣೇಶ್, ಕಿನ್ನಿಂಗಾರು- ಮುಳ್ಳೇರಿಯಾ – ಕಾಸರಗೋಡು ಸಂಚರಿಸುವ ರಶ್ಮಿ ಎಂಬ ಖಾಸಗಿ ಬಸ್ ಕಾರುಣ್ಯ ಯಾತ್ರೆ ನಡೆಸಿ, ಒಂದು ದಿನದ ಸಂಗ್ರಹವನ್ನು ಬಾಲಕಿಯ ಚಿಕಿತ್ಸೆಗಾಗಿ ನೀಡಿದ್ದು, ಕಾಸರಗೋಡು- ಮಧೂರ್- ನೀರ್ಚಾಲ್- ಬದಿಯಡ್ಕ – ಪೆರ್ಲ ಸಂಚರಿಸುವ ಸಂಘಂ ಎಂಬ ಖಾಸಗಿ ಬಸ್ ಜು. 19 ರಂದು ಕಾರುಣ್ಯ ಯಾತ್ರೆ ನಡೆಸಿ ಬಾಲಕಿಯ ಚಿಕಿತ್ಸೆಗಾಗಿ ನೆರವಾಗಲಿದೆ.

ಇದರೊಂದಿಗೆ ಪೆರ್ಲ ರಿಕ್ಷಾ ಚಾಲಕರು ಬುಧವಾರ ಕಾರುಣ್ಯ ನಡೆಸಿ ಒಂದು ದಿನದ ಸಂಗ್ರಹವನ್ನು ಚಿಕಿತ್ಸಾ ನಿಧಿಗೆ ಸಮರ್ಪಿಸಿದ್ದು, ಶಿವಾಜಿ ಆಟೋ ಟ್ಯಾಕ್ಸಿ ಸ್ಟ್ಯಾಂಡ್ ಮುಳ್ಳೇರಿಯಾ ಚಾಲಕರು ಮುನ್ನಡೆಸುವ ಕಾರುಣ್ಯ ಯಾತ್ರಾ ಜು.16 ಶನಿವಾರ ನಡೆಯಲಿದೆ.

ಚಿಕಿತ್ಸೆಗಾಗಿ ಮತ್ತಷ್ಟು ಮೊತ್ತದ ಅವಶ್ಯಕತೆಯಿದ್ದು ದಾನಿಗಳು ತಮ್ಮ ಕೈಲಾದಷ್ಟು ಮೊತ್ತವನ್ನು ನೀಡಿ ಬಾಲಕಿಯ ಮುಂದಿನ ಚಿಕಿತ್ಸೆಗೆ ಅನುವು ಮಾಡಿಕೊಡಬೇಕಾಗಿ ಸಮಿತಿ ಪದಾಧಿಕಾರಿಗಳು ವಿನಂತಿಸಿದ್ದಾರೆ.

ಸಂಪರ್ಕ ಹಾಗೂ ಖಾತೆ ಸಂಖ್ಯೆ :

Saanvi Medical Treatment Committee 
ಕೇರಳ ಗ್ರಾಮೀಣ ಬ್ಯಾಂಕ್ ಜಯನಗರ (ಕುಂಬ್ದಾಜೆ) ಶಾಖೆ
ಖಾತೆ ಸಂಖ್ಯೆ : 40413101052286
ಐಎಫ್ಎಸ್ಸಿ ಕೋಡ್ :  KLGB0040413
ಗೂಗಲ್ ಪೇ/ ಪೇಟಿಯಂ : 8921968983

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ
August 3, 2026
5:45 PM
by: ದ ರೂರಲ್ ಮಿರರ್.ಕಾಂ
ಭಾರಿ ಮಳೆ ಎಚ್ಚರಿಕೆ: ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿಗೆ ಆರೆಂಜ್ – ಎಲ್ಲೋ ಅಲರ್ಟ್‌ | ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ
August 3, 2026
4:38 PM
by: ದ ರೂರಲ್ ಮಿರರ್.ಕಾಂ
ಆಕೆ ಏಕೆ ತನ್ನ ನೋವನ್ನು ಯಾರಿಗೂ ಹೇಳುವುದಿಲ್ಲ..?
August 3, 2026
3:37 PM
by: ಮಹೇಶ್ ಪುಚ್ಚಪ್ಪಾಡಿ
ಹಿಂದೂ ಮಹಾಸಾಗರದ ಹವಾಮಾನದಲ್ಲಿ ಹಠಾತ್ ಬದಲಾವಣೆ – ಮತ್ತೆ ಮಹಾಮಳೆಗೆ ಕಾರಣವಾಗುತ್ತಿದೆಯೇ?
August 3, 2026
12:03 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror