Advertisement
The Rural Mirror ಕಾಳಜಿ

ಮಿರರ್‌ ನೆರವು | ಬಾಲಕಿಯ ಚಿಕಿತ್ಸೆಗೆ ನೆರವಾಗುವಿರಾ…

Share

ಕಾಸರಗೋಡು ಜಿಲ್ಲೆಯ  ಕುಂಬ್ದಾಜೆ ಪಂಚಾಯತ್ 13ನೇ ವಾರ್ಡ್ ವ್ಯಾಪ್ತಿಯ ಕಜೆಮಲೆ ನಿವಾಸಿ ಉದಯ ಕುಮಾರ್ ಹಾಗೂ ಸವಿತಾ ದಂಪತಿಗಳ ಪುತ್ರಿ ನಾರಂಪಾಡಿ  ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿನಿ ಸಾನ್ವಿ (7) ಅಪರೂಪವಾಗಿ ಕಂಡುಬರುವ ತಲಸ್ಸೇಮಿಯಾ ಮೇಜರ್ ಎಂಬ  ಕಾಯಿಲೆ ತಗಲಿದ್ದು, ಚಿಕಿತ್ಸೆಗಾಗಿ ಬಡ ಕುಟುಂಬ ದಾನಿಗಳಿಂದ ನೆರವನ್ನು ಕೇಳಿಕೊಂಡಿದೆ.

ಈಗಾಗಲೇ ಬೆಂಗಳೂರಿನ ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಈ ಬಾಲಕಿಯ ಚಿಕಿತ್ಸೆಗಾಗಿ ಈ ಬಡ ಕುಟುಂಬ ಅಪಾರ ಮೊತ್ತ ವ್ಯಯಿಸಿದ್ದು, ಮುಂದೆ ಅಸ್ಥಿಮಜ್ಜೆ ಕಸಿ ಮಾಡುವ ಶಸ್ತ್ರಕ್ರಿಯೆ ನಡೆಯಬೇಕಿದ್ದು, ಅಂದಾಜು 40 ಲಕ್ಷ ಮೊತ್ತ ಅವಶ್ಯಕವಾಗಿದೆ ಎಂದು ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ.

ಇಷ್ಟು ದೊಡ್ಡ ಮೊತ್ತವನ್ನು ಹೊಂದಿಸಲು ಅಸಾಧ್ಯವಾದ ಈ ಬಡ ಕುಟುಂಬಕ್ಕೆ ಆಸರೆಯಾಗುವ ನಿಟ್ಟಿನಲ್ಲಿ ಕುಂಬ್ದಾಜೆ ಪಂಚಾಯತ್ ಅಧ್ಯಕ್ಷ ಹಮೀದ್ ಪೊಸೊಳಿಗೆ ಅಧ್ಯಕ್ಷತೆಯಲ್ಲಿ ಊರ ಪರವೂರ ಬಂಧುಗಳ ಸಹಕಾರದೊಂದಿಗೆ ಸಾನ್ವಿ ಚಿಕಿತ್ಸಾ ಸಹಾಯ ಸಮಿತಿಯನ್ನು ರೂಪಿಸಿದ್ದು, ಸಮಿತಿಯ ಖಾತೆಯ ಮುಖಾಂತರ ದಾನಿಗಳಿಂದ ಚಿಕಿತ್ಸಾ ನೆರವನ್ನು ಸ್ವೀಕರಿಸಲಾಗುತ್ತಿದೆ.

ಇದರೊಂದಿಗೆ ಸಮಿತಿಯ ಸದಸ್ಯರು ಗುಂಪುಗಳಾಗಿ ತೆರಳಿ, ವಿವಿಧ ಸ್ವ ಸಹಾಯ ಸಂಘ, ಕ್ಲಬ್, ವಿದ್ಯಾ ಸಂಸ್ಥೆ, ಪೊಲೀಸ್ ಠಾಣೆ ಸೇರಿದಂತೆ ಸರ್ಕಾರಿ ಹಾಗೂ ಸರ್ಕಾರೇತರ ಕಚೇರಿಗಳಿಂದಲೂ ಆರ್ಥಿಕ ನೆರವನ್ನು ಸ್ವೀಕರಿಸುತ್ತಿದ್ದಾರೆ. ಬೆಳಿಂಜ – ಬದಿಯಡ್ಕ – ಕಾಸರಗೋಡು ಸಂಚರಿಸುವ ಬಿಲಾಲ್, ಮಲ್ಲ – ಕಾಸರಗೋಡು – ಪೈಕ – ಮುಳ್ಳೇರಿಯಾ – ಬದಿಯಡ್ಕ – ಪೆರ್ಲ ರಸ್ತೆ ಮೂಲಕ ಸಾಗುವ ದುರ್ಗಾ ಗಣೇಶ್, ಕಿನ್ನಿಂಗಾರು- ಮುಳ್ಳೇರಿಯಾ – ಕಾಸರಗೋಡು ಸಂಚರಿಸುವ ರಶ್ಮಿ ಎಂಬ ಖಾಸಗಿ ಬಸ್ ಕಾರುಣ್ಯ ಯಾತ್ರೆ ನಡೆಸಿ, ಒಂದು ದಿನದ ಸಂಗ್ರಹವನ್ನು ಬಾಲಕಿಯ ಚಿಕಿತ್ಸೆಗಾಗಿ ನೀಡಿದ್ದು, ಕಾಸರಗೋಡು- ಮಧೂರ್- ನೀರ್ಚಾಲ್- ಬದಿಯಡ್ಕ – ಪೆರ್ಲ ಸಂಚರಿಸುವ ಸಂಘಂ ಎಂಬ ಖಾಸಗಿ ಬಸ್ ಜು. 19 ರಂದು ಕಾರುಣ್ಯ ಯಾತ್ರೆ ನಡೆಸಿ ಬಾಲಕಿಯ ಚಿಕಿತ್ಸೆಗಾಗಿ ನೆರವಾಗಲಿದೆ.

ಇದರೊಂದಿಗೆ ಪೆರ್ಲ ರಿಕ್ಷಾ ಚಾಲಕರು ಬುಧವಾರ ಕಾರುಣ್ಯ ನಡೆಸಿ ಒಂದು ದಿನದ ಸಂಗ್ರಹವನ್ನು ಚಿಕಿತ್ಸಾ ನಿಧಿಗೆ ಸಮರ್ಪಿಸಿದ್ದು, ಶಿವಾಜಿ ಆಟೋ ಟ್ಯಾಕ್ಸಿ ಸ್ಟ್ಯಾಂಡ್ ಮುಳ್ಳೇರಿಯಾ ಚಾಲಕರು ಮುನ್ನಡೆಸುವ ಕಾರುಣ್ಯ ಯಾತ್ರಾ ಜು.16 ಶನಿವಾರ ನಡೆಯಲಿದೆ.

ಚಿಕಿತ್ಸೆಗಾಗಿ ಮತ್ತಷ್ಟು ಮೊತ್ತದ ಅವಶ್ಯಕತೆಯಿದ್ದು ದಾನಿಗಳು ತಮ್ಮ ಕೈಲಾದಷ್ಟು ಮೊತ್ತವನ್ನು ನೀಡಿ ಬಾಲಕಿಯ ಮುಂದಿನ ಚಿಕಿತ್ಸೆಗೆ ಅನುವು ಮಾಡಿಕೊಡಬೇಕಾಗಿ ಸಮಿತಿ ಪದಾಧಿಕಾರಿಗಳು ವಿನಂತಿಸಿದ್ದಾರೆ.

ಸಂಪರ್ಕ ಹಾಗೂ ಖಾತೆ ಸಂಖ್ಯೆ :

Saanvi Medical Treatment Committee
ಕೇರಳ ಗ್ರಾಮೀಣ ಬ್ಯಾಂಕ್ ಜಯನಗರ (ಕುಂಬ್ದಾಜೆ) ಶಾಖೆ
ಖಾತೆ ಸಂಖ್ಯೆ : 40413101052286
ಐಎಫ್ಎಸ್ಸಿ ಕೋಡ್ :  KLGB0040413
ಗೂಗಲ್ ಪೇ/ ಪೇಟಿಯಂ : 8921968983

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

2 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

2 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

2 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

3 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

3 days ago