ರೈತನ ಬದುಕನ್ನೇ ಕಡಿದ ಪಾಪಿಗಳು | ಫಸಲಿಗೆ ಬಂದ 70ಕ್ಕೂ ಹೆಚ್ಚು ತೆಂಗಿನ ಮರಗಳನ್ನು ಕಡಿದ ಕಿಡಿಗೇಡಿಗಳು | ಇದಕ್ಕೆ ಕಾರಣ ಏನು..?

November 27, 2023
12:52 PM

ಕೃಷಿ(Agriculture) ಅನ್ನೋದು ಒಂದು ಸಮಾಧಾನ, ನೆಮ್ಮದಿ, ಖುಷಿ, ಸಂತೋಷ. ನಾಳೆಯ ಬದುಕಿನ ಆಸರೆ, ಭರವಸೆ. ಒಂದು ಜಮೀನಿನಲ್ಲಿ ಏನಾದರು ಬೆಳೆದರೆ, ಅದು ಮುಂದಿನ ಕೆಲವು ದಿನ, ತಿಂಗಳು, ಅಥವಾ ವರ್ಷದಲ್ಲಿ ಫಸಲು ನೀಡುತ್ತೆ, ನಮ್ಮ ಕಷ್ಟಕ್ಕೆ ಕೈ ಹಿಡಿಯುತ್ತೆ ಅನ್ನುವ ಭರವಸೆಯಲ್ಲಿ ರೈತ(Farmer) ಕೃಷಿ ಮಾಡಿರುತ್ತಾನೆ. ಅದನ್ನು ಕಷ್ಟಪಟ್ಟು ಪ್ರೀತಿಯಿಂದ ಸಾಕಿರುತ್ತಾನೆ. ಆದರೆ ಆ ಬೆಳೆ ಯಾರೋದೋ ಹುಂಬುತನಕ್ಕೆ ಬಲಿಯಾದರೆ ಅದನ್ನು ಬೆಳೆದ ರೈತ ಏನಾಗಬೇಡ..? ಇಲ್ಲಿ ಆದದ್ದೂ ಅದೇ. ಜಮೀನು ವಿವಾದದ ಹಿನ್ನಲೆಯಲ್ಲಿ 70ಕ್ಕೂ ಹೆಚ್ಚು ತೆಂಗಿನಮರಗಳನ್ನು(coconut tree) ಕಿಡಿಗೇಡಿಗಳು ನಾಶ ಮಾಡಿದ್ದಾರೆ. 5 ವರ್ಷ ಕಣ್ಣಲ್ಲಿ ಕಣ್ಣಿಟ್ಟು ಸಾಕಿದ ತೆಂಗಿನ ಗಿಡಗಳನ್ನು ಕಳೆದುಕೊಂಡ ರೈತನ ಪರಿಸ್ಥಿತಿ ಏನಾಗಬೇಡ.

ಈ ಘಟನೆ ಚನ್ನರಾಯಪಟ್ಟಣದ ಸಂತೇಶಿವರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಕೃಷ್ಣಮೂರ್ತಿ ಹಾಗೂ ಕುಶಾಲ ಎಂಬವರ ಜಮೀನಿನಲ್ಲಿ ಬೆಳೆದಿದ್ದ ತೆಂಗಿನ ಮರಗಳನ್ನು ಕಿಡಿಗೇಡಿಗಳು ಕಡಿದು ಹಾಕಿದ್ದಾರೆ. ಜಮೀನಿನ ಬಳಿ ಯಾರೂ ಇಲ್ಲದ ವೇಳೆ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ. ಐದು ವರ್ಷಗಳಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನಮರಗಳನ್ನು ಕಳೆದುಕೊಂಡು ರೈತರು (Farmer) ಕಣ್ಣೀರಿಟ್ಟಿದ್ದಾರೆ.

ನುಗ್ಗೇಹಳ್ಳಿ ಪೊಲೀಸ್ (Police) ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತನಿಖೆ ಆರಂಭಿಸಿದ ಪೊಲೀಸರಿಗೆ ಆರೋಪಿಗಳ ಸುಳಿವು ಸಿಕ್ಕಿದ್ದು ಶೀಘ್ರದಲ್ಲೇ ಬಂಧಿಸುವುದಾಗಿ ತಿಳಿಸಿದ್ದಾರೆ. ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಅವರಿಂದಲೇ ಆಗಿರುವ ನಷ್ಟ ಭರಿಸುವಂತೆ ರೈತ ಕೃಷ್ಣಮೂರ್ತಿ ಹಾಗೂ ಕುಶಾಲ ಒತ್ತಾಯಿಸಿದ್ದಾರೆ.

Miscreants have destroyed more than 70 coconut trees in the background of land dispute. What should be the situation of the farmer who has lost the coconut plants that he cultivated for 5 years. This incident took place in Santeshivara village of Channarayapatna. The miscreants have cut down the coconut trees growing in the land of Krishnamurthy and Kushala of the village. 

- ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ
August 5, 2026
10:30 AM
by: ದ ರೂರಲ್ ಮಿರರ್.ಕಾಂ
ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ
August 5, 2026
9:09 AM
by: ದ ರೂರಲ್ ಮಿರರ್.ಕಾಂ
ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ
August 5, 2026
8:41 AM
by: ದ ರೂರಲ್ ಮಿರರ್.ಕಾಂ
ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ
August 4, 2026
11:23 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror