Advertisement
MIRROR FOCUS

ರೈತನ ಬದುಕನ್ನೇ ಕಡಿದ ಪಾಪಿಗಳು | ಫಸಲಿಗೆ ಬಂದ 70ಕ್ಕೂ ಹೆಚ್ಚು ತೆಂಗಿನ ಮರಗಳನ್ನು ಕಡಿದ ಕಿಡಿಗೇಡಿಗಳು | ಇದಕ್ಕೆ ಕಾರಣ ಏನು..?

Share

ಕೃಷಿ(Agriculture) ಅನ್ನೋದು ಒಂದು ಸಮಾಧಾನ, ನೆಮ್ಮದಿ, ಖುಷಿ, ಸಂತೋಷ. ನಾಳೆಯ ಬದುಕಿನ ಆಸರೆ, ಭರವಸೆ. ಒಂದು ಜಮೀನಿನಲ್ಲಿ ಏನಾದರು ಬೆಳೆದರೆ, ಅದು ಮುಂದಿನ ಕೆಲವು ದಿನ, ತಿಂಗಳು, ಅಥವಾ ವರ್ಷದಲ್ಲಿ ಫಸಲು ನೀಡುತ್ತೆ, ನಮ್ಮ ಕಷ್ಟಕ್ಕೆ ಕೈ ಹಿಡಿಯುತ್ತೆ ಅನ್ನುವ ಭರವಸೆಯಲ್ಲಿ ರೈತ(Farmer) ಕೃಷಿ ಮಾಡಿರುತ್ತಾನೆ. ಅದನ್ನು ಕಷ್ಟಪಟ್ಟು ಪ್ರೀತಿಯಿಂದ ಸಾಕಿರುತ್ತಾನೆ. ಆದರೆ ಆ ಬೆಳೆ ಯಾರೋದೋ ಹುಂಬುತನಕ್ಕೆ ಬಲಿಯಾದರೆ ಅದನ್ನು ಬೆಳೆದ ರೈತ ಏನಾಗಬೇಡ..? ಇಲ್ಲಿ ಆದದ್ದೂ ಅದೇ. ಜಮೀನು ವಿವಾದದ ಹಿನ್ನಲೆಯಲ್ಲಿ 70ಕ್ಕೂ ಹೆಚ್ಚು ತೆಂಗಿನಮರಗಳನ್ನು(coconut tree) ಕಿಡಿಗೇಡಿಗಳು ನಾಶ ಮಾಡಿದ್ದಾರೆ. 5 ವರ್ಷ ಕಣ್ಣಲ್ಲಿ ಕಣ್ಣಿಟ್ಟು ಸಾಕಿದ ತೆಂಗಿನ ಗಿಡಗಳನ್ನು ಕಳೆದುಕೊಂಡ ರೈತನ ಪರಿಸ್ಥಿತಿ ಏನಾಗಬೇಡ.

ಈ ಘಟನೆ ಚನ್ನರಾಯಪಟ್ಟಣದ ಸಂತೇಶಿವರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಕೃಷ್ಣಮೂರ್ತಿ ಹಾಗೂ ಕುಶಾಲ ಎಂಬವರ ಜಮೀನಿನಲ್ಲಿ ಬೆಳೆದಿದ್ದ ತೆಂಗಿನ ಮರಗಳನ್ನು ಕಿಡಿಗೇಡಿಗಳು ಕಡಿದು ಹಾಕಿದ್ದಾರೆ. ಜಮೀನಿನ ಬಳಿ ಯಾರೂ ಇಲ್ಲದ ವೇಳೆ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ. ಐದು ವರ್ಷಗಳಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನಮರಗಳನ್ನು ಕಳೆದುಕೊಂಡು ರೈತರು (Farmer) ಕಣ್ಣೀರಿಟ್ಟಿದ್ದಾರೆ.

ನುಗ್ಗೇಹಳ್ಳಿ ಪೊಲೀಸ್ (Police) ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತನಿಖೆ ಆರಂಭಿಸಿದ ಪೊಲೀಸರಿಗೆ ಆರೋಪಿಗಳ ಸುಳಿವು ಸಿಕ್ಕಿದ್ದು ಶೀಘ್ರದಲ್ಲೇ ಬಂಧಿಸುವುದಾಗಿ ತಿಳಿಸಿದ್ದಾರೆ. ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಅವರಿಂದಲೇ ಆಗಿರುವ ನಷ್ಟ ಭರಿಸುವಂತೆ ರೈತ ಕೃಷ್ಣಮೂರ್ತಿ ಹಾಗೂ ಕುಶಾಲ ಒತ್ತಾಯಿಸಿದ್ದಾರೆ.

Miscreants have destroyed more than 70 coconut trees in the background of land dispute. What should be the situation of the farmer who has lost the coconut plants that he cultivated for 5 years. This incident took place in Santeshivara village of Channarayapatna. The miscreants have cut down the coconut trees growing in the land of Krishnamurthy and Kushala of the village. 

- ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

₹1,500 ಕೋಟಿ ಅಕ್ರಮ ಅಡಿಕೆ ಜಾಲ ಬಯಲು – ED ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…

10 hours ago

ಮಹಾರಾಷ್ಟ್ರದಲ್ಲಿ ತಡೆಹಿಡಿದ ಅಡಿಕೆ ಲಾರಿಗಳ ಬಿಡುಗಡೆಗೆ ಫಡ್ನವೀಸ್‌ಗೆ ಮನವಿ

ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್‌ಗೆ ಅಡಿಕೆ…

11 hours ago

ರಾಜ್ಯದ ವಿವಿದೆಡೆ ಭಾರೀ ಮಳೆ – ಜುಲೈ 8 ರಂದು ಹಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…

11 hours ago

ಮುಂಗಾರು ಬೆಳೆ ಸಮೀಕ್ಷೆ ಆರಂಭ | ರೈತರೇ ಮೊಬೈಲ್‌ ಮೂಲಕ ಬೆಳೆ ವಿವರ ದಾಖಲಿಸಿ – ಕೃಷಿ ಇಲಾಖೆ ಮನವಿ

2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್‌ ಆ್ಯಪ್‌ ಮೂಲಕವೇ ಬೆಳೆ…

12 hours ago

ಮಾಣಿ–ಸಂಪಾಜೆ ರಸ್ತೆ ದುರಸ್ತಿಗೆ ₹49.22 ಕೋಟಿ ಮಂಜೂರು | ಚತುಷ್ಪಥ ಯೋಜನೆಗೆ ವೇಗ

ಮಾಣಿ–ಸಂಪಾಜೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಕೇಂದ್ರದಿಂದ ₹49.22 ಕೋಟಿ ವಿಶೇಷ ಅನುದಾನ ಮಂಜೂರು.…

12 hours ago

ಭೂಕುಸಿತದ ಬಗ್ಗೆ ಎಚ್ಚರಿಕೆ – ಜುಲೈ 7 ರಿಂದ 11 ರವರೆಗೆ ಪಶ್ಚಿಮಘಟ್ಟದಲ್ಲಿ ಭಾರೀ ಮಳೆ ಸಾಧ್ಯತೆ

ಜುಲೈ 7ರಿಂದ 11ರವರೆಗೆ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಭೂಕುಸಿತದ…

13 hours ago