Advertisement
ಸುದ್ದಿಗಳು

ಸುಳ್ಯದ ಸಾಯಿಶೃತಿ ಅವರಿಗೆ ‘MISS WORLD INTERNATIONAL INDIA’ ಸೆಕೆಂಡ್ ರನ್ನರ್ ಅಪ್ಅವಾರ್ಡ್

Share

ಧ್ವನಿ ಮಾಯೆ ಕಲಾವಿದೆಯಾಗಿ ಗುರುತಿಸಿಕೊಂಡಿರುವ ಸುಳ್ಯದ ಹುಡುಗಿ ಸಾಯಿಶೃತಿ ಪಿಲಿಕಜೆ ಹೈದರಾಬಾದ್ ನಲ್ಲಿ ನಡೆದ ‘MISS WORLD INTERNATIONAL INDIA’ ಸ್ಪರ್ಧೆಯಲ್ಲಿ ಸೆಕೆಂಡ್ ರನ್ನರ್ ಅಪ್ ಅವಾರ್ಡ್ ಪಡೆದುಕೊಂಡಿದ್ದಾರೆ.

ಪ್ರತಿಭಾವಂತ ಹುಡುಗಿ ಸಾಯಿಶೃತಿ ಪಿಲಿಕಜೆ ಧ್ವನಿ ಮಾಯೆ ಕಲಾವಿದೆಯಾಗಿ ಹಲವಾರು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದಾರೆ. ಇವರ ಸಾಧನೆಯನ್ನು ಗುರುತಿಸಿ ವಿವಿಧ ಸಂಘ ಸಂಸ್ಥೆಗಳು ಅವರನ್ನು ಈ ಹಿಂದೆ ಗುರುತಿಸಿದ್ದನ್ನು ಸ್ಮರಿಸಬಹುದು.

ದಕ್ಷಿಣ ಕನ್ನಡ ಜಿಲ್ಲೆಯ  ಸುಳ್ಯ ತಾಲೂಕು ಅಮರ ಮೂಡ್ನೂರು ಗ್ರಾಮದ ಸಾಯಿಶ್ರುತಿ ಪ್ರತಿಭಾವಂತೆ. ಪಿಲಿಕಜೆ ಮನೆಯ ‌  ಶಿವಸಾಯಿ ಭಟ್ ಪಿಲಿಕಜೆ ಹಾಗೂ ಸುಜ್ಯೋತಿ ದಂಪತಿಗಳ  ಮಗಳು ಸಾಯಿಶ್ರುತಿ.  ಪ್ರೌಢ -ಪದವಿಪೂರ್ವ ಶಿಕ್ಷಣವನ್ನು ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು, ಬೆಳ್ಳಾರೆಯಲ್ಲಿ ಪಡೆದು, ಬಳಿಕ 1 ವರ್ಷ ಕುಕ್ಕೇ ಶ್ರೀ ಸುಬ್ರಹ್ಮಣ್ಯ ಕಾಲೇಜಿನಲ್ಲಿ ವ್ಯಾಸಂಗ ಮಾಡಿ,ಸುಳ್ಯದ ಕೊಡಿಯಾಲಬೈಲು ಸರಕಾರಿ ಪ್ರಥಮ ದರ್ಜೆ ಕಾಲೇಜಿ ನಲ್ಲಿ ಪದವಿಯನ್ನೂ ಗಳಿಸಿ, ಮೈಸೂರು ವಿಶ್ವವಿದ್ಯಾನಿಲಯ ದಲ್ಲಿ ಎಂಬಿಎ ಮಾಡಿರುತ್ತಾರೆ.

ಮಿಮಿಕ್ರಿ , ಭಾಷಣ, ಯಕ್ಷಗಾನ, ನಾಟಕ, ಹಾಡು, ನೃತ್ಯ ದಲ್ಲಿ ಪರಿಣಿತಿ ಹೊಂದಿದ  ಸಾಯಿಶೃತಿ ಪಿಲಿಕಜೆ ಕಳೆದ 5 ವರ್ಷಗಳಿಂದ ಬೊಂಬೆ – ಚಿಂಟೂ ವನ್ನು ಜೊತೆಗಾರನ್ನಾಗಿ ಮಾಡಿಕೊಂಡು, ಅದಕ್ಕೆ ಜೀವ ತುಂಬುವ ಕೆಲಸದಲ್ಲಿ ತೊಡಗಿದ್ದಾರೆ.” ಮಾತನಾಡುವ ಬೊಂಬೆ – ಚಿಂಟೂ ” ಎಂಬ ವಿನೂತನ ಕಾರ್ಯಕ್ರಮ ವನ್ನು ಪ್ರಾರಂಭಿಸಿದ ಸಾಯಿಶೃತಿ ಮಾತೇ ಮಾಣಿಕ್ಯವಾಗಿ ಮನರಂಜಿಸುವಲ್ಲಿ ಯಶಸ್ವಿಗೊಂಡು, ಸುಳ್ಯ, ಬೆಳ್ಳಾರೆ, ಪುತ್ತೂರು, ಸುಬ್ರಹ್ಮಣ್ಯ, ಕೇರಳ, ಬೆಂಗಳೂರು, ಗುಲ್ಬರ್ಗ, ಮುಂತಾದ ಕಡೆಗಳಲ್ಲಿ ಪ್ರದರ್ಶನ ನೀಡುವುದರ ಜೊತೆಗೆ, Online ಮೂಲಕ ಅಮೆರಿಕದ ಕನ್ನಡಿಗರಿಗೆ ಕಾರ್ಯಕ್ರಮ ಕೊಟ್ಟಿರುತ್ತಾರೆ.

ಸುಳ್ಯ, ಪುತ್ತೂರು, ಉಜಿರೆ, ಗುಲ್ಬರ್ಗ, ಮೊದಲಾದ ಊರಿನ ಸಂಘ – ಸಂಸ್ಥೆಗಳಿಂದ ಗೌರವ ಸನ್ಮಾನಗಳ ಜೊತೆಗೆ ‌ಶೈನಿಂಗ್ ಸ್ಟಾರ್ ನ್ಯಾಷನಲ್ ಪ್ರೈಡ್ ಎವಾರ್ಡ್, ಜೋನ್ 15 ಗಾಟ್ ಟ್ಯಾಲೆಂಟ್‌ ಯೂತ್ ಐಕಾನ್ ಆಫ್ ದ ಇಯರ್ 2023, ಕ್ವೀನ್ ಆಫ್ ಜೋನ್ 15 ಅವಾರ್ಡ್ ಆಫ್ ಎಕ್ಸಲೆನ್ಸ್, ಯೂನಿಕಾನ್ ವರ್ಡ್ ರೆಕಾರ್ಡ್ ಪ್ರಶಸ್ತಿ ಗಳನ್ನು ಗಳಿಸಿರುತ್ತಾರೆ.

ನಾಡಿನಾದ್ಯಂತ ಉತ್ತಮ ಮಾತುಗಾರ್ತಿಯಾದ  ಸಾಯಿಶೃತಿ ಪಿಲಿಕಜೆ ಮಾತಿನ ಮೂಲಕ ಚಿಂಟೂ ಜೊತೆ ಹಲವಾರು ಕಾರ್ಯಕ್ರಮಗಳಲ್ಲಿ ಕಲಾರಾಧನೆ ಮೂಲಕ ಜನ – ಮನ ರಂಜಿಸಿ ಪ್ರಖ್ಯಾತಿ ಗಳಿಸಿದ ಕಲಾವಿದೆ.

ಬರಹ ಮಾಹಿತಿ : ಬಾಲು ದೇರಾಜೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

18 ಕರಿಮೆಣಸು ತಳಿಗಳ ನರ್ಸರಿ ನಿರ್ಮಿಸಿ ಯಶಸ್ಸು ಕಂಡ ಯುವ ರೈತ

ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…

5 hours ago

ಭಾರೀ ಮಳೆ ಹಿನ್ನೆಲೆ: ದಕ್ಷಿಣ ಕನ್ನಡದ ಶಾಲೆ-ಕಾಲೇಜುಗಳಿಗೆ ಇಂದು ರಜೆ -ಉತ್ತರ ಕನ್ನಡದ ಕೆಲವು ತಾಲೂಕಿನಲ್ಲೂ ರಜೆ ಘೋಷಣೆ

ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…

6 hours ago

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…

1 day ago

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

2 days ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

2 days ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

3 days ago