ಸುದ್ದಿಗಳು

ಮಿಜೋರಾಂ ಅಡಿಕೆ ಬೆಳೆಗಾರರ ಬೇಡಿಕೆ ಈಡೇರಿಕೆಗೆ ಒತ್ತಾಯ | ವಾರಗಳ ಕಾಲ ಮುಷ್ಕರಕ್ಕೆ ಕರೆ | ಅಡಿಕೆ ಸಾಗಾಟಕ್ಕೆ ಹೆಚ್ಚಿದ ಒತ್ತಡ |

Share

ಮಿಜೋರಾಂ ಪ್ರದೇಶದ ಅಡಿಕೆ ಬೆಳೆಗಾರರು ತಾವು ಬೆಳೆದ ಅಡಿಕೆಯನ್ನು ಸಮೀಪ ಅಥವಾ ರಾಜ್ಯದ ಹೊರಗೆ ಸಾಗಿಸಲು ನಿರಂತರ ಸಮಸ್ಯೆಗಳನ್ನು ಎದುರಿಸುತ್ತಿದ್ದು ಸಮಸ್ಯೆ ಪರಿಹಾರವಾಗದ ಹಿನ್ನೆಲೆಯಲ್ಲಿ ಇದೀಗ ಅಡಿಕೆ ಬೆಳೆಗಾರರು ಹೋರಾಟಕ್ಕೆ ಮುಂದಾಗಿದ್ದಾರೆ. ಅಸ್ಸಾಂನ ಕರೀಂಗಂಜ್ ಜಿಲ್ಲೆಯ ಗಡಿಯಲ್ಲಿರುವ  ಮಿಜೋರಾಂನ ಮಮಿತ್ ಜಿಲ್ಲೆಯ ಹಚೆಕ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಅಡಿಕೆ ಬೆಳೆಗಾರರು ಒಂದು ವಾರ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಆರಂಭದ 4 ದಿನಗಳ ಕಾಲ ಕಚೇರಿಗಳಿಗೆ ಮುತ್ತಿಗೆ ಹಾಗೂ ಆ ಬಳಿಕ ಹೆದ್ದಾರಿ ತಡೆ ನಡೆಸಲು ನಿರ್ಧರಿಸಿದ್ದಾರೆ.

Advertisement

ಮಂಗಳವಾರದಿಂದ ಪ್ರಾರಂಭವಾದ  ಮುಷ್ಕರ ವಾರಗಳ ಕಾಲ ನಡೆಯಲಿದೆ. ಮಿಜೋರಾಂನ ಹಚ್ಚೇಕ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ 32 ಗ್ರಾಮಗಳ ಪೈಕಿ 30 ಗ್ರಾಮಗಳಲ್ಲಿ ಅಡಿಕೆ ತೋಟವಿದೆ. ಆದರೆ ಇಲ್ಲಿ ಬೆಳೆದ ಅಡಿಕೆಯ ಸಾಗಾಟಕ್ಕೆ ಕಷ್ಟವಾಗುತ್ತಿದೆ ಎಂಬುದು  ಅಲ್ಲಿನ ಬೆಳೆಗಾರರ ಆರೋಪ. ಅಸ್ಸಾಂ ಪೊಲೀಸರು ಅಡಿಕೆ ಸಾಗಾಟವನ್ನು ತಡೆಯುತ್ತಿದ್ದಾರೆ. ಅಸ್ಸಾಂ, ಮಿಜೋರಾಂ ಮೂಲಕ ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಾಣಿಕೆ ನಿರಂತರವಾಗಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಅಸ್ಸಾಂ ಪೊಲೀಸರು ಅಡಿಕೆ ಸಾಗಾಟವನ್ನು  ತಡೆಯುತ್ತಿದ್ದಾರೆ.

ಮಿಜೋರಾಂ ಅಡಿಕೆ ಬೆಳೆಗಾರರ ಸಂಘವು ಅಲ್ಲಿನ ಮುಖ್ಯಮಂತ್ರಿಗಳ ಜೊತೆ ಹಾಗೂ ಉನ್ನತ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿ ಬೆಳೆಗಾರರು ತಮ್ಮ ಉತ್ಪನ್ನಗಳ ಮಾರಾಟಕ್ಕೆ ಅವಕಾಶ ನೀಡುವಂತೆ ಮನವಿ ಮಾಡಿದ್ದರು. ಸರ್ಕಾರವು ರೈತರಿಗೆ ಗುರುತಿನ ಚೀಟಿ ನೀಡುವುದಾಗಿ ಹೇಳಿತ್ತು. ಇದರಿಂದ ಅಡಿಕೆ ಬೆಳೆಗಾರರಿಗೆ ಸಂಕಷ್ಟ ಇರಲಿಲ್ಲ. ಹಾಗಿದ್ದರೂ ಇದೀಗ ಪ್ರತಿಭಟನೆ ಆರಂಭವಾಗಿದೆ. ನ.8 ಕ್ಕೂ ಮೊದಲು  ಸಂಕಷ್ಟಗಳನ್ನು ಪರಿಹರಿಸಲು ಸೂಕ್ತ ಕ್ರಮಕೈಗೊಳ್ಳದೇ ಇದ್ದರೆ ನ.9 ರಿಂದ ಹಚೆಕ್ ಪ್ರದೇಶದಲ್ಲಿ ಅನಿರ್ದಿಷ್ಟಾವಧಿ ಸಂಪೂರ್ಣ ಬಂದ್ ಮಾಡುವುದಾಗಿ ಅಡಿಕೆ ಬೆಳೆಗಾರರು ಹೇಳಿದ್ದಾರೆ.

ಅಸ್ಸಾಂ ಸರ್ಕಾರವು  ಮ್ಯಾನ್ಮಾರ್‌ನಿಂದ ಮಿಜೋರಾಂ ಮೂಲಕ ಕಳ್ಳಸಾಗಣೆ ಮಾಡಲಾಗುತ್ತಿರುವ  ಒಣ ಅಡಿಕೆಗಳ ಸಾಗಾಣಿಕೆ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಂಡಿದೆ. ಇದೀಗ ಮಿಜೋರಾಂ ಅಡಿಕೆ ಬೆಳೆಗಾರರ ಮೂಲಕ ಅಡಿಕೆ ಕಳ್ಳಸಾಗಾಣಿಕೆದಾರರು ಹೊಸದೊಂದು ಪ್ರಯತ್ನ ನಡೆಸುತ್ತಿದ್ದಾರೆ ಎಂಬುದು ಇಲಾಖೆಗಳ ಸಂದೇಹವಾಗಿದೆ. ಮಿಜೋರಾಂನಲ್ಲಿ ಹಸಿ ಅಡಿಕೆಯ ವ್ಯವಹಾರಗಳೇ ಹೆಚ್ಚಾಗಿ ನಡೆಯುತ್ತಿರುವಾಗ ಒಣ ಅಡಿಕೆ ಸಾಗಾಟ ನಿಷೇಧ ತೆರವು ಬಗ್ಗೆ ನಡೆಸುತ್ತಿರುವ ಹೋರಾಟವೂ ಇದೇ ಉದ್ದೇಶವಾಗಿದೆ ಎಂದು ಚರ್ಚೆಯಾಗುತ್ತಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಆಮದು | ಮಿಜೋರಾಂ ಅಡಿಕೆ ಬೆಳೆಗಾರರಿಗೆ ಸವಾಲು

ಆಮದು ಕಾರಣದಿಂದ ಮಿಜೋರಾಂ ಅಡಿಕೆ ಬೆಳೆಗಾರರು ಸ್ಪರ್ಧಾತ್ಮಕ ಬೆಲೆಯಲ್ಲಿ ತಮ್ಮ ಉತ್ಪನ್ನಗಳನ್ನು ಮಾರಾಟ…

2 hours ago

ಈಗ ಮನಸುಗಳಿಗೇ ಒಂದು ಬ್ರಹ್ಮಕಲಶ ಯಾಕಾಗಬೇಕು…?

ಇಂದು ಯಾವುದೇ ಪ್ರಮುಖ ಕ್ಷೇತ್ರಗಳನ್ನು ಗಮನಿಸಿ, ಅಲ್ಲೊಂದು ವಿವಾದ ಇಲ್ಲದೇ ಇರುವುದೇ ಇಲ್ಲ.…

3 hours ago

ಉತ್ತರ ಭಾರತದಲ್ಲಿ ಆವರಿಸಿದ ಬಿಸಿಗಾಳಿ | 27 ಹವಾಮಾನ ಕೇಂದ್ರಗಳಲ್ಲಿ 43 ಡಿಗ್ರಿಗಿಂತ ಹೆಚ್ಚಿನ ತಾಪಮಾನ |

ಈ ವಾರ ದೆಹಲಿ, ರಾಜಸ್ಥಾನ , ಗುಜರಾತ್, ಮಧ್ಯಪ್ರದೇಶ , ಮಹಾರಾಷ್ಟ್ರ ಮತ್ತು…

4 hours ago

ಹೊಸರುಚಿ | ಗುಜ್ಜೆ ಕಡಲೆ ಗಸಿ

ಗುಜ್ಜೆ ಕಡಲೆ ಗಸಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ: ಗುಜ್ಜೆ 1…

4 hours ago

ಸ್ಥಳೀಯ ಉತ್ಪನ್ನ ಉತ್ತೇಜನ, ಪರಿಸರ ಸಂರಕ್ಷಣೆಗೆ ಪ್ರಧಾನಿ ಕರೆ

ಸ್ಥಳೀಯ ಉತ್ಪನ್ನ ಉತ್ತೇಜನ, ಪರಿಸರ ಸಂರಕ್ಷಣೆ ಸೇರಿದಂತೆ ಉತ್ತಮ ಯೋಗಕ್ಷೇಮಕ್ಕೆ 9 ಸಂಕಲ್ಪಗಳನ್ನು …

4 hours ago

ರೆಪೋ ದರದಲ್ಲಿ ಶೇಕಡ  0.25ರಷ್ಟು  ಕಡಿತ | ಶೇಕಡ 6.25ರಿಂದ ಶೇಕಡ 6ಕ್ಕೆ  ಇಳಿಕೆ

ಭಾರತೀಯ ರಿಸರ್ವ್ ಬ್ಯಾಂಕ್ ನ  ಹಣಕಾಸು ನೀತಿ ಸಮಿತಿ ಹಲವು  ಮಹತ್ವದ ನಿರ್ಧಾರಗಳನ್ನು…

4 hours ago