Advertisement
ಸುದ್ದಿಗಳು

ಮಿಜೋರಾಂ ಅಡಿಕೆ ಬೆಳೆಗಾರರ ಬೇಡಿಕೆ ಈಡೇರಿಕೆಗೆ ಒತ್ತಾಯ | ವಾರಗಳ ಕಾಲ ಮುಷ್ಕರಕ್ಕೆ ಕರೆ | ಅಡಿಕೆ ಸಾಗಾಟಕ್ಕೆ ಹೆಚ್ಚಿದ ಒತ್ತಡ |

Share

ಮಿಜೋರಾಂ ಪ್ರದೇಶದ ಅಡಿಕೆ ಬೆಳೆಗಾರರು ತಾವು ಬೆಳೆದ ಅಡಿಕೆಯನ್ನು ಸಮೀಪ ಅಥವಾ ರಾಜ್ಯದ ಹೊರಗೆ ಸಾಗಿಸಲು ನಿರಂತರ ಸಮಸ್ಯೆಗಳನ್ನು ಎದುರಿಸುತ್ತಿದ್ದು ಸಮಸ್ಯೆ ಪರಿಹಾರವಾಗದ ಹಿನ್ನೆಲೆಯಲ್ಲಿ ಇದೀಗ ಅಡಿಕೆ ಬೆಳೆಗಾರರು ಹೋರಾಟಕ್ಕೆ ಮುಂದಾಗಿದ್ದಾರೆ. ಅಸ್ಸಾಂನ ಕರೀಂಗಂಜ್ ಜಿಲ್ಲೆಯ ಗಡಿಯಲ್ಲಿರುವ  ಮಿಜೋರಾಂನ ಮಮಿತ್ ಜಿಲ್ಲೆಯ ಹಚೆಕ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಅಡಿಕೆ ಬೆಳೆಗಾರರು ಒಂದು ವಾರ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಆರಂಭದ 4 ದಿನಗಳ ಕಾಲ ಕಚೇರಿಗಳಿಗೆ ಮುತ್ತಿಗೆ ಹಾಗೂ ಆ ಬಳಿಕ ಹೆದ್ದಾರಿ ತಡೆ ನಡೆಸಲು ನಿರ್ಧರಿಸಿದ್ದಾರೆ.

Advertisement
Advertisement

ಮಂಗಳವಾರದಿಂದ ಪ್ರಾರಂಭವಾದ  ಮುಷ್ಕರ ವಾರಗಳ ಕಾಲ ನಡೆಯಲಿದೆ. ಮಿಜೋರಾಂನ ಹಚ್ಚೇಕ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ 32 ಗ್ರಾಮಗಳ ಪೈಕಿ 30 ಗ್ರಾಮಗಳಲ್ಲಿ ಅಡಿಕೆ ತೋಟವಿದೆ. ಆದರೆ ಇಲ್ಲಿ ಬೆಳೆದ ಅಡಿಕೆಯ ಸಾಗಾಟಕ್ಕೆ ಕಷ್ಟವಾಗುತ್ತಿದೆ ಎಂಬುದು  ಅಲ್ಲಿನ ಬೆಳೆಗಾರರ ಆರೋಪ. ಅಸ್ಸಾಂ ಪೊಲೀಸರು ಅಡಿಕೆ ಸಾಗಾಟವನ್ನು ತಡೆಯುತ್ತಿದ್ದಾರೆ. ಅಸ್ಸಾಂ, ಮಿಜೋರಾಂ ಮೂಲಕ ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಾಣಿಕೆ ನಿರಂತರವಾಗಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಅಸ್ಸಾಂ ಪೊಲೀಸರು ಅಡಿಕೆ ಸಾಗಾಟವನ್ನು  ತಡೆಯುತ್ತಿದ್ದಾರೆ.

ಮಿಜೋರಾಂ ಅಡಿಕೆ ಬೆಳೆಗಾರರ ಸಂಘವು ಅಲ್ಲಿನ ಮುಖ್ಯಮಂತ್ರಿಗಳ ಜೊತೆ ಹಾಗೂ ಉನ್ನತ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿ ಬೆಳೆಗಾರರು ತಮ್ಮ ಉತ್ಪನ್ನಗಳ ಮಾರಾಟಕ್ಕೆ ಅವಕಾಶ ನೀಡುವಂತೆ ಮನವಿ ಮಾಡಿದ್ದರು. ಸರ್ಕಾರವು ರೈತರಿಗೆ ಗುರುತಿನ ಚೀಟಿ ನೀಡುವುದಾಗಿ ಹೇಳಿತ್ತು. ಇದರಿಂದ ಅಡಿಕೆ ಬೆಳೆಗಾರರಿಗೆ ಸಂಕಷ್ಟ ಇರಲಿಲ್ಲ. ಹಾಗಿದ್ದರೂ ಇದೀಗ ಪ್ರತಿಭಟನೆ ಆರಂಭವಾಗಿದೆ. ನ.8 ಕ್ಕೂ ಮೊದಲು  ಸಂಕಷ್ಟಗಳನ್ನು ಪರಿಹರಿಸಲು ಸೂಕ್ತ ಕ್ರಮಕೈಗೊಳ್ಳದೇ ಇದ್ದರೆ ನ.9 ರಿಂದ ಹಚೆಕ್ ಪ್ರದೇಶದಲ್ಲಿ ಅನಿರ್ದಿಷ್ಟಾವಧಿ ಸಂಪೂರ್ಣ ಬಂದ್ ಮಾಡುವುದಾಗಿ ಅಡಿಕೆ ಬೆಳೆಗಾರರು ಹೇಳಿದ್ದಾರೆ.

ಅಸ್ಸಾಂ ಸರ್ಕಾರವು  ಮ್ಯಾನ್ಮಾರ್‌ನಿಂದ ಮಿಜೋರಾಂ ಮೂಲಕ ಕಳ್ಳಸಾಗಣೆ ಮಾಡಲಾಗುತ್ತಿರುವ  ಒಣ ಅಡಿಕೆಗಳ ಸಾಗಾಣಿಕೆ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಂಡಿದೆ. ಇದೀಗ ಮಿಜೋರಾಂ ಅಡಿಕೆ ಬೆಳೆಗಾರರ ಮೂಲಕ ಅಡಿಕೆ ಕಳ್ಳಸಾಗಾಣಿಕೆದಾರರು ಹೊಸದೊಂದು ಪ್ರಯತ್ನ ನಡೆಸುತ್ತಿದ್ದಾರೆ ಎಂಬುದು ಇಲಾಖೆಗಳ ಸಂದೇಹವಾಗಿದೆ. ಮಿಜೋರಾಂನಲ್ಲಿ ಹಸಿ ಅಡಿಕೆಯ ವ್ಯವಹಾರಗಳೇ ಹೆಚ್ಚಾಗಿ ನಡೆಯುತ್ತಿರುವಾಗ ಒಣ ಅಡಿಕೆ ಸಾಗಾಟ ನಿಷೇಧ ತೆರವು ಬಗ್ಗೆ ನಡೆಸುತ್ತಿರುವ ಹೋರಾಟವೂ ಇದೇ ಉದ್ದೇಶವಾಗಿದೆ ಎಂದು ಚರ್ಚೆಯಾಗುತ್ತಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

21 minutes ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

1 day ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

1 day ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

1 day ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

1 day ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

1 day ago