Advertisement
ಸುದ್ದಿಗಳು

ಮಿಜೋರಾಂ ಅಡಿಕೆ ಬೆಳೆಗಾರರ ಬೇಡಿಕೆ ಈಡೇರಿಕೆಗೆ ಒತ್ತಾಯ | ವಾರಗಳ ಕಾಲ ಮುಷ್ಕರಕ್ಕೆ ಕರೆ | ಅಡಿಕೆ ಸಾಗಾಟಕ್ಕೆ ಹೆಚ್ಚಿದ ಒತ್ತಡ |

Share

ಮಿಜೋರಾಂ ಪ್ರದೇಶದ ಅಡಿಕೆ ಬೆಳೆಗಾರರು ತಾವು ಬೆಳೆದ ಅಡಿಕೆಯನ್ನು ಸಮೀಪ ಅಥವಾ ರಾಜ್ಯದ ಹೊರಗೆ ಸಾಗಿಸಲು ನಿರಂತರ ಸಮಸ್ಯೆಗಳನ್ನು ಎದುರಿಸುತ್ತಿದ್ದು ಸಮಸ್ಯೆ ಪರಿಹಾರವಾಗದ ಹಿನ್ನೆಲೆಯಲ್ಲಿ ಇದೀಗ ಅಡಿಕೆ ಬೆಳೆಗಾರರು ಹೋರಾಟಕ್ಕೆ ಮುಂದಾಗಿದ್ದಾರೆ. ಅಸ್ಸಾಂನ ಕರೀಂಗಂಜ್ ಜಿಲ್ಲೆಯ ಗಡಿಯಲ್ಲಿರುವ  ಮಿಜೋರಾಂನ ಮಮಿತ್ ಜಿಲ್ಲೆಯ ಹಚೆಕ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಅಡಿಕೆ ಬೆಳೆಗಾರರು ಒಂದು ವಾರ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಆರಂಭದ 4 ದಿನಗಳ ಕಾಲ ಕಚೇರಿಗಳಿಗೆ ಮುತ್ತಿಗೆ ಹಾಗೂ ಆ ಬಳಿಕ ಹೆದ್ದಾರಿ ತಡೆ ನಡೆಸಲು ನಿರ್ಧರಿಸಿದ್ದಾರೆ.

ಮಂಗಳವಾರದಿಂದ ಪ್ರಾರಂಭವಾದ  ಮುಷ್ಕರ ವಾರಗಳ ಕಾಲ ನಡೆಯಲಿದೆ. ಮಿಜೋರಾಂನ ಹಚ್ಚೇಕ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ 32 ಗ್ರಾಮಗಳ ಪೈಕಿ 30 ಗ್ರಾಮಗಳಲ್ಲಿ ಅಡಿಕೆ ತೋಟವಿದೆ. ಆದರೆ ಇಲ್ಲಿ ಬೆಳೆದ ಅಡಿಕೆಯ ಸಾಗಾಟಕ್ಕೆ ಕಷ್ಟವಾಗುತ್ತಿದೆ ಎಂಬುದು  ಅಲ್ಲಿನ ಬೆಳೆಗಾರರ ಆರೋಪ. ಅಸ್ಸಾಂ ಪೊಲೀಸರು ಅಡಿಕೆ ಸಾಗಾಟವನ್ನು ತಡೆಯುತ್ತಿದ್ದಾರೆ. ಅಸ್ಸಾಂ, ಮಿಜೋರಾಂ ಮೂಲಕ ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಾಣಿಕೆ ನಿರಂತರವಾಗಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಅಸ್ಸಾಂ ಪೊಲೀಸರು ಅಡಿಕೆ ಸಾಗಾಟವನ್ನು  ತಡೆಯುತ್ತಿದ್ದಾರೆ.

ಮಿಜೋರಾಂ ಅಡಿಕೆ ಬೆಳೆಗಾರರ ಸಂಘವು ಅಲ್ಲಿನ ಮುಖ್ಯಮಂತ್ರಿಗಳ ಜೊತೆ ಹಾಗೂ ಉನ್ನತ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿ ಬೆಳೆಗಾರರು ತಮ್ಮ ಉತ್ಪನ್ನಗಳ ಮಾರಾಟಕ್ಕೆ ಅವಕಾಶ ನೀಡುವಂತೆ ಮನವಿ ಮಾಡಿದ್ದರು. ಸರ್ಕಾರವು ರೈತರಿಗೆ ಗುರುತಿನ ಚೀಟಿ ನೀಡುವುದಾಗಿ ಹೇಳಿತ್ತು. ಇದರಿಂದ ಅಡಿಕೆ ಬೆಳೆಗಾರರಿಗೆ ಸಂಕಷ್ಟ ಇರಲಿಲ್ಲ. ಹಾಗಿದ್ದರೂ ಇದೀಗ ಪ್ರತಿಭಟನೆ ಆರಂಭವಾಗಿದೆ. ನ.8 ಕ್ಕೂ ಮೊದಲು  ಸಂಕಷ್ಟಗಳನ್ನು ಪರಿಹರಿಸಲು ಸೂಕ್ತ ಕ್ರಮಕೈಗೊಳ್ಳದೇ ಇದ್ದರೆ ನ.9 ರಿಂದ ಹಚೆಕ್ ಪ್ರದೇಶದಲ್ಲಿ ಅನಿರ್ದಿಷ್ಟಾವಧಿ ಸಂಪೂರ್ಣ ಬಂದ್ ಮಾಡುವುದಾಗಿ ಅಡಿಕೆ ಬೆಳೆಗಾರರು ಹೇಳಿದ್ದಾರೆ.

ಅಸ್ಸಾಂ ಸರ್ಕಾರವು  ಮ್ಯಾನ್ಮಾರ್‌ನಿಂದ ಮಿಜೋರಾಂ ಮೂಲಕ ಕಳ್ಳಸಾಗಣೆ ಮಾಡಲಾಗುತ್ತಿರುವ  ಒಣ ಅಡಿಕೆಗಳ ಸಾಗಾಣಿಕೆ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಂಡಿದೆ. ಇದೀಗ ಮಿಜೋರಾಂ ಅಡಿಕೆ ಬೆಳೆಗಾರರ ಮೂಲಕ ಅಡಿಕೆ ಕಳ್ಳಸಾಗಾಣಿಕೆದಾರರು ಹೊಸದೊಂದು ಪ್ರಯತ್ನ ನಡೆಸುತ್ತಿದ್ದಾರೆ ಎಂಬುದು ಇಲಾಖೆಗಳ ಸಂದೇಹವಾಗಿದೆ. ಮಿಜೋರಾಂನಲ್ಲಿ ಹಸಿ ಅಡಿಕೆಯ ವ್ಯವಹಾರಗಳೇ ಹೆಚ್ಚಾಗಿ ನಡೆಯುತ್ತಿರುವಾಗ ಒಣ ಅಡಿಕೆ ಸಾಗಾಟ ನಿಷೇಧ ತೆರವು ಬಗ್ಗೆ ನಡೆಸುತ್ತಿರುವ ಹೋರಾಟವೂ ಇದೇ ಉದ್ದೇಶವಾಗಿದೆ ಎಂದು ಚರ್ಚೆಯಾಗುತ್ತಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯವೇ ದೊಡ್ಡ ಶಕ್ತಿಮೂಲ

ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…

8 hours ago

ಎಲ್ ನಿನೋ ಆತಂಕದ ನಡುವೆಯೂ ಖಾರಿಫ್ ಬಿತ್ತನೆ 1,000 ಲಕ್ಷ ಹೆಕ್ಟೇರ್ ದಾಟಿದೆ

ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…

10 hours ago

ಹವಾಮಾನ ವರದಿ | 19-08-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಮುಂಗಾರು ಏಕೆ ದುರ್ಬಲವಾಗಿದೆ?

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…

15 hours ago

ತುಮಕೂರಿನಲ್ಲಿ ಭರ್ಜರಿ ಕೈಗಾರಿಕಾ ಹಬ್ – ₹7,000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗದ ಗುರಿ

ತುಮಕೂರು ಕೈಗಾರಿಕಾ ನೋಡ್‌ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…

21 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…

21 hours ago

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

2 days ago