Advertisement
ಸುದ್ದಿಗಳು

ಮಿಜೋರಾಂ ಅಡಿಕೆ ಬೆಳೆಗಾರರ ಬೇಡಿಕೆ ಈಡೇರಿಕೆಗೆ ಒತ್ತಾಯ | ವಾರಗಳ ಕಾಲ ಮುಷ್ಕರಕ್ಕೆ ಕರೆ | ಅಡಿಕೆ ಸಾಗಾಟಕ್ಕೆ ಹೆಚ್ಚಿದ ಒತ್ತಡ |

Share

ಮಿಜೋರಾಂ ಪ್ರದೇಶದ ಅಡಿಕೆ ಬೆಳೆಗಾರರು ತಾವು ಬೆಳೆದ ಅಡಿಕೆಯನ್ನು ಸಮೀಪ ಅಥವಾ ರಾಜ್ಯದ ಹೊರಗೆ ಸಾಗಿಸಲು ನಿರಂತರ ಸಮಸ್ಯೆಗಳನ್ನು ಎದುರಿಸುತ್ತಿದ್ದು ಸಮಸ್ಯೆ ಪರಿಹಾರವಾಗದ ಹಿನ್ನೆಲೆಯಲ್ಲಿ ಇದೀಗ ಅಡಿಕೆ ಬೆಳೆಗಾರರು ಹೋರಾಟಕ್ಕೆ ಮುಂದಾಗಿದ್ದಾರೆ. ಅಸ್ಸಾಂನ ಕರೀಂಗಂಜ್ ಜಿಲ್ಲೆಯ ಗಡಿಯಲ್ಲಿರುವ  ಮಿಜೋರಾಂನ ಮಮಿತ್ ಜಿಲ್ಲೆಯ ಹಚೆಕ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಅಡಿಕೆ ಬೆಳೆಗಾರರು ಒಂದು ವಾರ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಆರಂಭದ 4 ದಿನಗಳ ಕಾಲ ಕಚೇರಿಗಳಿಗೆ ಮುತ್ತಿಗೆ ಹಾಗೂ ಆ ಬಳಿಕ ಹೆದ್ದಾರಿ ತಡೆ ನಡೆಸಲು ನಿರ್ಧರಿಸಿದ್ದಾರೆ.

ಮಂಗಳವಾರದಿಂದ ಪ್ರಾರಂಭವಾದ  ಮುಷ್ಕರ ವಾರಗಳ ಕಾಲ ನಡೆಯಲಿದೆ. ಮಿಜೋರಾಂನ ಹಚ್ಚೇಕ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ 32 ಗ್ರಾಮಗಳ ಪೈಕಿ 30 ಗ್ರಾಮಗಳಲ್ಲಿ ಅಡಿಕೆ ತೋಟವಿದೆ. ಆದರೆ ಇಲ್ಲಿ ಬೆಳೆದ ಅಡಿಕೆಯ ಸಾಗಾಟಕ್ಕೆ ಕಷ್ಟವಾಗುತ್ತಿದೆ ಎಂಬುದು  ಅಲ್ಲಿನ ಬೆಳೆಗಾರರ ಆರೋಪ. ಅಸ್ಸಾಂ ಪೊಲೀಸರು ಅಡಿಕೆ ಸಾಗಾಟವನ್ನು ತಡೆಯುತ್ತಿದ್ದಾರೆ. ಅಸ್ಸಾಂ, ಮಿಜೋರಾಂ ಮೂಲಕ ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಾಣಿಕೆ ನಿರಂತರವಾಗಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಅಸ್ಸಾಂ ಪೊಲೀಸರು ಅಡಿಕೆ ಸಾಗಾಟವನ್ನು  ತಡೆಯುತ್ತಿದ್ದಾರೆ.

ಮಿಜೋರಾಂ ಅಡಿಕೆ ಬೆಳೆಗಾರರ ಸಂಘವು ಅಲ್ಲಿನ ಮುಖ್ಯಮಂತ್ರಿಗಳ ಜೊತೆ ಹಾಗೂ ಉನ್ನತ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿ ಬೆಳೆಗಾರರು ತಮ್ಮ ಉತ್ಪನ್ನಗಳ ಮಾರಾಟಕ್ಕೆ ಅವಕಾಶ ನೀಡುವಂತೆ ಮನವಿ ಮಾಡಿದ್ದರು. ಸರ್ಕಾರವು ರೈತರಿಗೆ ಗುರುತಿನ ಚೀಟಿ ನೀಡುವುದಾಗಿ ಹೇಳಿತ್ತು. ಇದರಿಂದ ಅಡಿಕೆ ಬೆಳೆಗಾರರಿಗೆ ಸಂಕಷ್ಟ ಇರಲಿಲ್ಲ. ಹಾಗಿದ್ದರೂ ಇದೀಗ ಪ್ರತಿಭಟನೆ ಆರಂಭವಾಗಿದೆ. ನ.8 ಕ್ಕೂ ಮೊದಲು  ಸಂಕಷ್ಟಗಳನ್ನು ಪರಿಹರಿಸಲು ಸೂಕ್ತ ಕ್ರಮಕೈಗೊಳ್ಳದೇ ಇದ್ದರೆ ನ.9 ರಿಂದ ಹಚೆಕ್ ಪ್ರದೇಶದಲ್ಲಿ ಅನಿರ್ದಿಷ್ಟಾವಧಿ ಸಂಪೂರ್ಣ ಬಂದ್ ಮಾಡುವುದಾಗಿ ಅಡಿಕೆ ಬೆಳೆಗಾರರು ಹೇಳಿದ್ದಾರೆ.

ಅಸ್ಸಾಂ ಸರ್ಕಾರವು  ಮ್ಯಾನ್ಮಾರ್‌ನಿಂದ ಮಿಜೋರಾಂ ಮೂಲಕ ಕಳ್ಳಸಾಗಣೆ ಮಾಡಲಾಗುತ್ತಿರುವ  ಒಣ ಅಡಿಕೆಗಳ ಸಾಗಾಣಿಕೆ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಂಡಿದೆ. ಇದೀಗ ಮಿಜೋರಾಂ ಅಡಿಕೆ ಬೆಳೆಗಾರರ ಮೂಲಕ ಅಡಿಕೆ ಕಳ್ಳಸಾಗಾಣಿಕೆದಾರರು ಹೊಸದೊಂದು ಪ್ರಯತ್ನ ನಡೆಸುತ್ತಿದ್ದಾರೆ ಎಂಬುದು ಇಲಾಖೆಗಳ ಸಂದೇಹವಾಗಿದೆ. ಮಿಜೋರಾಂನಲ್ಲಿ ಹಸಿ ಅಡಿಕೆಯ ವ್ಯವಹಾರಗಳೇ ಹೆಚ್ಚಾಗಿ ನಡೆಯುತ್ತಿರುವಾಗ ಒಣ ಅಡಿಕೆ ಸಾಗಾಟ ನಿಷೇಧ ತೆರವು ಬಗ್ಗೆ ನಡೆಸುತ್ತಿರುವ ಹೋರಾಟವೂ ಇದೇ ಉದ್ದೇಶವಾಗಿದೆ ಎಂದು ಚರ್ಚೆಯಾಗುತ್ತಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?

ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…

7 hours ago

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?

ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…

18 hours ago

ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ

ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್‌ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್‌ ಪೂರೈಕೆಯ…

19 hours ago

ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ

2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…

1 day ago

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ

ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…

2 days ago

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

2 days ago