ಮಿಝೋರಂ ಸರ್ಕಾರವು ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಯಾವುದೇ ವ್ಯಕ್ತಿ, ಸರಕಾರಿ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ ಅಥವಾ ನಾಗರಿಕರೂ ಈ ಅಕ್ರಮ ವ್ಯಾಪಾರದಲ್ಲಿ ಭಾಗಿಯಾಗಿದ್ದರೆ ಕಾನೂನು ಕ್ರಮಕ್ಕೆ ಒಳಗಾಗುವುದಾಗಿ ರಾಜ್ಯ ಗೃಹ ಸಚಿವ ಕೆ. ಸಪ್ದಂಗ ಎಚ್ಚರಿಸಿದ್ದಾರೆ. ಯಾರಾದರೂ ಕಳ್ಳವ್ಯಾಪಾರಕ್ಕೆ ಸಂಬಂಧಿಸಿದವರಿದ್ದರೆ ಅವರನ್ನು ಹಿಡಿದು ಕಾನೂನು ಅಡಿಯಲ್ಲಿ ಗಟ್ಟಿಯಾಗಿ ದಂಡಿಸಲಾಗುತ್ತದೆ ಎಂದಿದ್ದಾರೆ. ಅಕ್ರಮವಾಗಿ ಅಡಿಕೆ ಸಾಗಾಟದಿಂದ ಸ್ಥಳೀಯ ಬೆಳೆಗಾರರಿಗೆ ಸಮಸ್ಯೆಯಾಗುತ್ತಿದೆ. ಅಡಿಕೆ ಧಾರಣೆ ಮೇಲೂ ಪರಿಣಾಮವಾಗಲಿದೆ. ಎಂದು ಹೇಳಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ಈ ಕ್ರಮದ ಪರಿಣಾಮವು ಮಿಝೋರಂ ರಾಜ್ಯದ ಆರ್ಥಿಕತೆಯ ಮೇಲೆ ಪರಿಣಾಮ ಬೀಳುವ ಸಾಧ್ಯತೆ ಇದೆ. ಅಡಿಕೆ ಕಳ್ಳಸಾಗಣೆಗೆ ಕಟ್ಟುನಿಟ್ಟಿನ ಕಡಿವಾಣ ಬಿದ್ದರೆ, ಅಕ್ರಮವಾಗಿ ಕಡಿಮೆ ದರದಲ್ಲಿ ಮಾರುಕಟ್ಟೆಗೆ ಬರುತ್ತಿದ್ದ ಅಡಿಕೆ ಪ್ರಮಾಣ ಕಡಿಮೆಯಾಗುತ್ತದೆ. ಇದರೊಂದಿಗೆ ಸ್ಥಳೀಯ ಬೆಳೆಗಾರರಿಗೆ ನ್ಯಾಯಸಮ್ಮತ ದರ ದೊರಕುವ ಸಾಧ್ಯತೆ ಹೆಚ್ಚುತ್ತದೆ.
ಇದನ್ನೂ ಓದಿ….




