ಮಿಝೋರಂ ಸರ್ಕಾರವು ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಯಾವುದೇ ವ್ಯಕ್ತಿ, ಸರಕಾರಿ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ ಅಥವಾ ನಾಗರಿಕರೂ ಈ ಅಕ್ರಮ ವ್ಯಾಪಾರದಲ್ಲಿ ಭಾಗಿಯಾಗಿದ್ದರೆ ಕಾನೂನು ಕ್ರಮಕ್ಕೆ ಒಳಗಾಗುವುದಾಗಿ ರಾಜ್ಯ ಗೃಹ ಸಚಿವ ಕೆ. ಸಪ್ದಂಗ ಎಚ್ಚರಿಸಿದ್ದಾರೆ. ಯಾರಾದರೂ ಕಳ್ಳವ್ಯಾಪಾರಕ್ಕೆ ಸಂಬಂಧಿಸಿದವರಿದ್ದರೆ ಅವರನ್ನು ಹಿಡಿದು ಕಾನೂನು ಅಡಿಯಲ್ಲಿ ಗಟ್ಟಿಯಾಗಿ ದಂಡಿಸಲಾಗುತ್ತದೆ ಎಂದಿದ್ದಾರೆ. ಅಕ್ರಮವಾಗಿ ಅಡಿಕೆ ಸಾಗಾಟದಿಂದ ಸ್ಥಳೀಯ ಬೆಳೆಗಾರರಿಗೆ ಸಮಸ್ಯೆಯಾಗುತ್ತಿದೆ. ಅಡಿಕೆ ಧಾರಣೆ ಮೇಲೂ ಪರಿಣಾಮವಾಗಲಿದೆ. ಎಂದು ಹೇಳಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ಈ ಕ್ರಮದ ಪರಿಣಾಮವು ಮಿಝೋರಂ ರಾಜ್ಯದ ಆರ್ಥಿಕತೆಯ ಮೇಲೆ ಪರಿಣಾಮ ಬೀಳುವ ಸಾಧ್ಯತೆ ಇದೆ. ಅಡಿಕೆ ಕಳ್ಳಸಾಗಣೆಗೆ ಕಟ್ಟುನಿಟ್ಟಿನ ಕಡಿವಾಣ ಬಿದ್ದರೆ, ಅಕ್ರಮವಾಗಿ ಕಡಿಮೆ ದರದಲ್ಲಿ ಮಾರುಕಟ್ಟೆಗೆ ಬರುತ್ತಿದ್ದ ಅಡಿಕೆ ಪ್ರಮಾಣ ಕಡಿಮೆಯಾಗುತ್ತದೆ. ಇದರೊಂದಿಗೆ ಸ್ಥಳೀಯ ಬೆಳೆಗಾರರಿಗೆ ನ್ಯಾಯಸಮ್ಮತ ದರ ದೊರಕುವ ಸಾಧ್ಯತೆ ಹೆಚ್ಚುತ್ತದೆ.
ಇದನ್ನೂ ಓದಿ….
ಭಾರತದ ಎಮ್ಮೆ ಮಾಂಸ ರಫ್ತು 2025-26ರಲ್ಲಿ 5.1 ಬಿಲಿಯನ್ ಡಾಲರ್ ತಲುಪಿದ್ದು, 2026-27ರಲ್ಲಿ…
CAMPCO ಹಾಗೂ ಕೇಂದ್ರ ಸರ್ಕಾರದ ಪ್ರಕರಣಕ್ಕೆ ಸಂಬಂಧಿಸಿ 2026 ರ ಮೇ 26…
ಓಣಂ ಹಬ್ಬದ ಸಂದರ್ಭದ ಹೆಚ್ಚಿದ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ಕೇರಳ ಕೃಷಿ ಇಲಾಖೆ ನಡೆಸಿದ…
ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನವೂ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದ್ದು,…
ಕರ್ನಾಟಕದಲ್ಲಿ ಅಡಿಕೆ ಬೆಳೆಯುವ ಪ್ರದೇಶ ಕಳೆದ ಐದು ವರ್ಷಗಳಲ್ಲಿ ಶೇ.32.42ರಷ್ಟು ಹೆಚ್ಚಾದರೂ, ಉತ್ಪಾದನೆ…
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…