ಬರ್ಮಾದಿಂದ ಅಡಿಕೆ ಕಳ್ಳಸಾಗಾಣಿಕೆ | ಕಳ್ಳಸಾಗಾಣಿಕೆ ತಡೆಗೆ ಪ್ರಧಾನಿ ಮೋದಿಗೆ ಪತ್ರ ಬರೆದ ಶಾಸಕ |

November 9, 2022
10:58 PM

ಮಿಜೋರಾಂನಲ್ಲಿ ನಡೆಯುತ್ತಿರುವ ಬರ್ಮಾ ಅಡಿಕೆ ಕಳ್ಳಸಾಗಾಣಿಕೆಯಿಂದಾಗಿ ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುತ್ತಿದ್ದು ತಕ್ಷಣವೇ ಅಡಿಕೆ ಕಳ್ಳಸಾಗಾಣಿಕೆಗೆ ಕ್ರಮ ಕೈಗೊಳ್ಳಬೇಕು ಎಂದು ಮಿಜೋರಾಂನ ಕಾಂಗ್ರೆಸ್ ಶಾಸಕ ಲಾಲ್ರಿಂಡಿಕಾ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ಮಿಜೋರಾಂನ ಪೂರ್ವ ಭಾಗದಲ್ಲಿರುವ ಗಡಿಯ ಮೂಲಕ ನೆರೆಯ ಮ್ಯಾನ್ಮಾರ್, ಬರ್ಮಾ ಮತ್ತು ಇತರೆಡೆಗಳಿಂದ ಒಣ ಅಡಿಕೆಯನ್ನು ವ್ಯಾಪಕವಾಗಿ ಅಕ್ರಮವಾಗಿ ಆಮದು ಮಾಡಿಕೊಳ್ಳಲಾಗಿದೆ ಎಂದು ಲಾಲ್ರಿಂಡಿಕಾ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.ಅಡಿಕೆಯ ಅಕ್ರಮ ಆಮದನ್ನು ತಡೆಯಲು ಮಿಜೋರಾಂ ಮತ್ತು ಮಣಿಪುರ ಸರ್ಕಾರಗಳಿಗೆ ಕೇಂದ್ರವು ನಿರ್ದೇಶನ ನೀಡಿದ್ದರೂ, ಯಾವುದೇ ಕ್ರಮ ಆಗಿಲ್ಲ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಪಶ್ಚಿಮ ಮಿಜೋರಾಂನ ಮಮಿತ್ ಜಿಲ್ಲೆಯ ಹಚೆಕ್  ಪ್ರದೇಶವು ಅತಿ ಹೆಚ್ಚು ಅಡಿಕೆ ಉತ್ಪಾದಿಸುವ ಪ್ರದೇಶವಾಗಿದೆ, ಅಲ್ಲಿ ಸುಮಾರು 70 ಪ್ರತಿಶತ ನಿವಾಸಿಗಳು ದಶಕಗಳಿಂದ ಅಡಿಕೆ ಕೃಷಿಯ ಮೇಲೆ ಅವಲಂಬಿತರಾಗಿದ್ದಾರೆ.ಇದೀಗ ಅಡಿಕೆ ಆಮದು ಕಾರಣದಿಂದ ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯಕ್ಕೆ ಅಕ್ರಮ ಅಡಿಕೆ ಪ್ರವೇಶವನ್ನು ತಡೆಯಲು ಅಸ್ಸಾಂ ಸರ್ಕಾರವು ಸಾಕಷ್ಟು ಪ್ರಯತ್ನ ಮಾಡುತ್ತಿದೆ. ಆದರೆ ಮಿಜೋರಾಂನಲ್ಲಿ ಬೆಳೆಯುವ ಅಡಿಕೆ ಸಾಗಾಟಕ್ಕೆ ಕಷ್ಟವಾಗಿದೆ. ಬರ್ಮಾ ಅಡಿಕೆ ಆಮದು ತಡೆಯಾಗದ ಕಾರಣ  ಸ್ಥಳೀಯ ರೈತರಿಗೆ ತೀವ್ರ ಮಾರುಕಟ್ಟೆ ಸಮಸ್ಯೆಗೆ ಕಾರಣವಾಗಿವೆ ಎಂದು ಅವರು ತಿಳಿಸಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?
September 8, 2026
9:43 AM
by: ದ ರೂರಲ್ ಮಿರರ್.ಕಾಂ
ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!
September 7, 2026
9:38 PM
by: ದ ರೂರಲ್ ಮಿರರ್.ಕಾಂ
ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?
September 7, 2026
8:58 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?
September 7, 2026
1:29 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror