Advertisement
ಸುದ್ದಿಗಳು

ಬರ್ಮಾದಿಂದ ಅಡಿಕೆ ಕಳ್ಳಸಾಗಾಣಿಕೆ | ಕಳ್ಳಸಾಗಾಣಿಕೆ ತಡೆಗೆ ಪ್ರಧಾನಿ ಮೋದಿಗೆ ಪತ್ರ ಬರೆದ ಶಾಸಕ |

Share

ಮಿಜೋರಾಂನಲ್ಲಿ ನಡೆಯುತ್ತಿರುವ ಬರ್ಮಾ ಅಡಿಕೆ ಕಳ್ಳಸಾಗಾಣಿಕೆಯಿಂದಾಗಿ ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುತ್ತಿದ್ದು ತಕ್ಷಣವೇ ಅಡಿಕೆ ಕಳ್ಳಸಾಗಾಣಿಕೆಗೆ ಕ್ರಮ ಕೈಗೊಳ್ಳಬೇಕು ಎಂದು ಮಿಜೋರಾಂನ ಕಾಂಗ್ರೆಸ್ ಶಾಸಕ ಲಾಲ್ರಿಂಡಿಕಾ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ಮಿಜೋರಾಂನ ಪೂರ್ವ ಭಾಗದಲ್ಲಿರುವ ಗಡಿಯ ಮೂಲಕ ನೆರೆಯ ಮ್ಯಾನ್ಮಾರ್, ಬರ್ಮಾ ಮತ್ತು ಇತರೆಡೆಗಳಿಂದ ಒಣ ಅಡಿಕೆಯನ್ನು ವ್ಯಾಪಕವಾಗಿ ಅಕ್ರಮವಾಗಿ ಆಮದು ಮಾಡಿಕೊಳ್ಳಲಾಗಿದೆ ಎಂದು ಲಾಲ್ರಿಂಡಿಕಾ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.ಅಡಿಕೆಯ ಅಕ್ರಮ ಆಮದನ್ನು ತಡೆಯಲು ಮಿಜೋರಾಂ ಮತ್ತು ಮಣಿಪುರ ಸರ್ಕಾರಗಳಿಗೆ ಕೇಂದ್ರವು ನಿರ್ದೇಶನ ನೀಡಿದ್ದರೂ, ಯಾವುದೇ ಕ್ರಮ ಆಗಿಲ್ಲ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಪಶ್ಚಿಮ ಮಿಜೋರಾಂನ ಮಮಿತ್ ಜಿಲ್ಲೆಯ ಹಚೆಕ್  ಪ್ರದೇಶವು ಅತಿ ಹೆಚ್ಚು ಅಡಿಕೆ ಉತ್ಪಾದಿಸುವ ಪ್ರದೇಶವಾಗಿದೆ, ಅಲ್ಲಿ ಸುಮಾರು 70 ಪ್ರತಿಶತ ನಿವಾಸಿಗಳು ದಶಕಗಳಿಂದ ಅಡಿಕೆ ಕೃಷಿಯ ಮೇಲೆ ಅವಲಂಬಿತರಾಗಿದ್ದಾರೆ.ಇದೀಗ ಅಡಿಕೆ ಆಮದು ಕಾರಣದಿಂದ ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯಕ್ಕೆ ಅಕ್ರಮ ಅಡಿಕೆ ಪ್ರವೇಶವನ್ನು ತಡೆಯಲು ಅಸ್ಸಾಂ ಸರ್ಕಾರವು ಸಾಕಷ್ಟು ಪ್ರಯತ್ನ ಮಾಡುತ್ತಿದೆ. ಆದರೆ ಮಿಜೋರಾಂನಲ್ಲಿ ಬೆಳೆಯುವ ಅಡಿಕೆ ಸಾಗಾಟಕ್ಕೆ ಕಷ್ಟವಾಗಿದೆ. ಬರ್ಮಾ ಅಡಿಕೆ ಆಮದು ತಡೆಯಾಗದ ಕಾರಣ  ಸ್ಥಳೀಯ ರೈತರಿಗೆ ತೀವ್ರ ಮಾರುಕಟ್ಟೆ ಸಮಸ್ಯೆಗೆ ಕಾರಣವಾಗಿವೆ ಎಂದು ಅವರು ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

9 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

18 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

18 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

22 hours ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

23 hours ago