Advertisement
ಸುದ್ದಿಗಳು

ಅಸ್ಸಾಂ ಗಡಿಯಲ್ಲೇ ಅಡಿಕೆ ಹಬ್…! 30,000 ಹೆಕ್ಟೇರ್ ಅಡಿಕೆ ಕೃಷಿಗೆ ಬಲ – ಮಿಜೋರಾಂ ಸಿಎಂ ಉದ್ಘಾಟಿಸಿದ ಹೊಸ ಘಟಕ

Share

ಮಿಜೋರಾಂ ಮುಖ್ಯಮಂತ್ರಿ ಲಾಲ್ದುಹೋಮಾ ಅವರು ಶುಕ್ರವಾರ ಅಸ್ಸಾಂ ಗಡಿಯ ಬಳಿಯ ಮಿಜೋರಾಂನ ಕೊಲಾಸಿಬ್ ಜಿಲ್ಲೆಯಲ್ಲಿ ಹೊಸ ಅಡಿಕೆ ಸಂಸ್ಕರಣಾ ಘಟಕವನ್ನು ಉದ್ಘಾಟಿಸಿದರು ಎಂದು ಸುದ್ದಿಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಎಸ್‌ಎಸ್‌ಬಿ ಆಗ್ರೋ ಸಂಸ್ಥೆ ಸ್ಥಾಪಿಸಿರುವ ಈ ಘಟಕವು ರಾಜ್ಯದ ಕೃಷಿ ವಲಯವನ್ನು ಬಲಪಡಿಸುವುದರ ಜೊತೆಗೆ, ಈ ಪ್ರದೇಶದ ಅಡಿಕೆ ರೈತರಿಗೆ ವಿಶ್ವಾಸಾರ್ಹ ಮಾರುಕಟ್ಟೆಯನ್ನು ಒದಗಿಸುವ ಉದ್ದೇಶ ಹೊಂದಿದೆ.  ಬುಹ್ಚಾಂಗ್‌ಫಾಯಿಯಲ್ಲಿ ನಡೆದ ಉದ್ಘಾಟನಾ ಸಮಾರಂಭದಲ್ಲಿ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಪಿಸಿ ವನ್ಲಾಲ್ರುವಾಟಾ, ಉಪ ಸ್ಪೀಕರ್ ಲಾಲ್ಫಮ್ಕಿಮಾ ಹಾಗೂ ಮುಖ್ಯಮಂತ್ರಿ ಸಲಹೆಗಾರ ಮತ್ತು ಶಾಸಕ ಲಾಲ್ಮುವಾನ್‌ಪುಯಾ ಪುಂಟೆ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಲಾಲ್ದುಹೋಮಾ, ರಾಜ್ಯದಲ್ಲಿ ಪ್ರಸ್ತುತ ಸುಮಾರು 30,000 ಹೆಕ್ಟೇರ್‌ ಭೂಮಿಯಲ್ಲಿ ಅಡಿಕೆ ಕೃಷಿ ನಡೆಯುತ್ತಿದೆ ಎಂದು ತಿಳಿಸಿದರು. ಅಲ್ಲದೆ, ಸರ್ಕಾರ ಅಡಿಕೆ ಕಳ್ಳಸಾಗಣೆ ವಿರುದ್ಧ ಕೈಗೊಂಡ ಕ್ರಮಗಳಿಂದ ಸ್ಥಳೀಯ ರೈತರಿಗೆ ಉತ್ತಮ ಮಾರುಕಟ್ಟೆ ಲಾಭ ದೊರಕುತ್ತಿದೆ ಎಂದು ಹೇಳಿದರು.

ರಾಜ್ಯದ ಕೈಗಾರಿಕಾ ಮೂಲಸೌಕರ್ಯ ವಿಸ್ತಾರವಾಗುತ್ತಿದ್ದು, ಕೊಲಾಸಿಬ್ ಜಿಲ್ಲೆಯ ಚೆಂಫೈ ಹಾಗೂ ಮಾಮಿತ್ ಜಿಲ್ಲೆಯ ಜಮುವಾಂಗ್‌ನಲ್ಲಿ ಸರ್ಕಾರದ ವತಿಯಿಂದ ಸ್ಥಾಪಿಸಲಾಗುತ್ತಿರುವ ಸಂಸ್ಕರಣಾ ಘಟಕಗಳು ಮುಂದಿನ ವರ್ಷದಿಂದ ಕಾರ್ಯನಿರ್ವಹಿಸಲು ನಿರೀಕ್ಷಿಸಲಾಗಿದೆ ಎಂದರು.

ಎಸ್‌ಎಸ್‌ಬಿ ಆಗ್ರೋದ ಕಾರ್ಯಕ್ಷಮತೆಯನ್ನು ಶ್ಲಾಘಿಸಿದ ಮುಖ್ಯಮಂತ್ರಿ, ಮಿಜೋರಾಂ ಅಡಿಕೆ ಮಾರ್ಕೆಟಿಂಗ್ ಕೋಆಪರೇಟಿವ್ ಸೊಸೈಟಿಯೊಂದಿಗಿನ ಸಂಸ್ಥೆಯ ಖರೀದಿ ಒಪ್ಪಂದವನ್ನು ಸ್ವಾಗತಿಸಿ, ಈ ಪಾಲುದಾರಿಕೆ ಸ್ಥಳೀಯ ರೈತ ಸಮುದಾಯಕ್ಕೆ ಮಹತ್ತರ ಪ್ರಯೋಜನ ನೀಡಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

18 ಕರಿಮೆಣಸು ತಳಿಗಳ ನರ್ಸರಿ ನಿರ್ಮಿಸಿ ಯಶಸ್ಸು ಕಂಡ ಯುವ ರೈತ

ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…

6 hours ago

ಭಾರೀ ಮಳೆ ಹಿನ್ನೆಲೆ: ದಕ್ಷಿಣ ಕನ್ನಡದ ಶಾಲೆ-ಕಾಲೇಜುಗಳಿಗೆ ಇಂದು ರಜೆ -ಉತ್ತರ ಕನ್ನಡದ ಕೆಲವು ತಾಲೂಕಿನಲ್ಲೂ ರಜೆ ಘೋಷಣೆ

ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…

6 hours ago

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…

1 day ago

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

2 days ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

3 days ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

3 days ago