Advertisement
MIRROR FOCUS

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

Share

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಅಡಿಕೆ ಆಮದು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಕಠಿಣ ಕ್ರಮವನ್ನು ತೀವ್ರಗೊಳಿಸುವುದಾಗಿ ಘೋಷಿಸಿದೆ. ರಾಜ್ಯದ ವಿಧಾನಸಭೆಯಲ್ಲಿ ಮಾತನಾಡಿದ ಗೃಹ ಸಚಿವ ಕೆ ಸಪ್ದಂಗ ಅವರು ಕಳ್ಳಸಾಗಣೆ ವಿರುದ್ಧ  ಕಠಿಣ ನೀತಿ ಮುಂದುವರಿಯುತ್ತದೆ ಎಂದು ಸ್ಪಷ್ಟಪಡಿಸಿದರು.

2019 ರಿಂದ 2025ರವರೆಗೆ ಅಡಿಕೆ ಕಳ್ಳಸಾಗಣೆ ಸಂಬಂಧ 468 ಪ್ರಕರಣಗಳು ದಾಖಲಾಗಿದ್ದು, 292 ಮಂದಿಯನ್ನು ಬಂಧಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು. 109 ಪ್ರಕರಣಗಳು ಐಪಿಸಿ/ಬಿಎನ್‌ಎಸ್‌ಎಸ್ ಅಡಿಯಲ್ಲಿ ಹಾಗೂ 359 ಪ್ರಕರಣಗಳು ಕಸ್ಟಮ್ಸ್ ಕಾಯ್ದೆ, 1962 ಅಡಿಯಲ್ಲಿ ದಾಖಲಾಗಿವೆ.  ಐಪಿಸಿ/ಬಿಎನ್‌ಎಸ್‌ಎಸ್ ಅಡಿಯಲ್ಲಿ 184 ಮಂದಿ ಬಂಧಿತರಾಗಿದ್ದು, 108 ಮಂದಿಯ ವಿರುದ್ಧ ಕಸ್ಟಮ್ಸ್ ಕಾಯ್ದೆಯಡಿ ಕ್ರಮ ಕೈಗೊಳ್ಳಲಾಗಿದೆ. ಅಪರಾಧಿಗಳು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಮುಂದೆ ವಿಚಾರಣೆಗೆ ಒಳಪಡುವುದಾಗಿ ತಿಳಿಸಿದ್ದಾರೆ.

ಮ್ಯಾನ್ಮಾರ್‌ನಿಂದ ಬರುವ ಅಡಿಕೆಗಳು ಕಡ್ಡಾಯ ಆಮದು ಸುಂಕ ಮತ್ತು ತೆರಿಗೆಗಳನ್ನು ತಪ್ಪಿಸಿ ಕಡಿಮೆ ಬೆಲೆಗೆ ಮಾರಾಟವಾಗುತ್ತಿವೆ. ಇದರಿಂದ ಕಪ್ಪು ಹಣದ ಚಲಾವಣೆ ಹೆಚ್ಚುವುದರ ಜೊತೆಗೆ ಸ್ಥಳೀಯ ಅಡಿಕೆ ಬೆಳೆಗಾರರಿಗೆ ಗಂಭೀರ ಆರ್ಥಿಕ ಹೊಡೆತ ಬಿದ್ದಿದೆ ಎಂದು ಸಚಿವರು ತಿಳಿಸಿದ್ದಾರೆ.

ಮುಂದೆ ಗಡಿ ಕಣ್ಗಾವಲು ಬಲಪಡಿಸಲಾಗುವುದು. ಅಕ್ರಮ ವ್ಯಾಪಾರದಲ್ಲಿ ಭಾಗಿಯಾದವರಲ್ಲಿ ಸರ್ಕಾರಿ ಅಧಿಕಾರಿಗಳಿದ್ದರೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಅಡಿಕೆ ಬೆಲೆಯಲ್ಲಿ ಏರಿಕೆ : ಅಕ್ರಮ ಚಟುವಟಿಕೆ ತಡೆಯುತ್ತಿರುವ ಬೆನ್ನಲ್ಲೇ ಅಡಿಕೆ ಬೆಲೆ ಏರಿಕೆ ಕಂಡಿದೆ. ಕಟ್ಟುನಿಟ್ಟಿನ ಕ್ರಮಗಳಿಂದ ಸ್ಥಳೀಯವಾಗಿ ಉತ್ಪಾದಿಸುವ ಅಡಿಕೆಯ ಬೆಲೆಯಲ್ಲಿ ಏರಿಕೆ ಕಂಡುಬಂದಿದೆ. ಅಕ್ರಮ ಆಮದು ತಡೆಗೆ ಸೂಕ್ತ ಕ್ರಮವಾದರೆ ಕರ್ನಾಟಕದಲ್ಲೂ ಅಡಿಕೆ ಮಾರುಕಟ್ಟೆ ಚೇತರಿಕೆ ಕಾಣಲಿದೆ.

The Mizoram government has intensified its crackdown on arecanut smuggling from Myanmar, registering 468 cases and arresting 292 individuals since 2019. Authorities aim to curb black money circulation and protect local areca nut farmers from economic losses.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

2 hours ago

ಹೋಳಿ ಹಬ್ಬ: ಪ್ರಾಣಿ-ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಿ – ಮಂಡಳಿ ಮನವಿ

ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…

2 hours ago

ಅಡಿಕೆ ಮಾರುಕಟ್ಟೆ ಸುದ್ದಿ | ಅಡಿಕೆ ಧಾರಣೆ ಇಳಿಕೆಯಿಂದ ಸ್ಥಿರತೆಯತ್ತ ಮುಂದುವರಿಕೆ

ದಕ್ಷಿಣ ಕನ್ನಡ ಮತ್ತು ಮಲೆನಾಡು ಭಾಗದ ಕೃಷಿ ಮಾರುಕಟ್ಟೆಯಲ್ಲಿ ಸಹಜ ಸ್ಥಿತಿಯಲ್ಲಿ ಕಂಡುಬಂದಿದೆ.…

10 hours ago

2030ರೊಳಗೆ 5 ಟ್ರಿಲಿಯನ್ ಆರ್ಥಿಕತೆ ಮೀರಿದ ರಾಷ್ಟ್ರವಾಗಲಿದೆ ಭಾರತ

2030ರೊಳಗೆ ಭಾರತ 5 ಟ್ರಿಲಿಯನ್ ಆರ್ಥಿಕತೆಯನ್ನು ಮೀರುತ್ತದೆ ಎಂದು ಪ್ರಲ್ಹಾದ ಜೋಶಿ ವಿಶ್ವಾಸ…

14 hours ago

ರೈತರ ಹಿತಕ್ಕಾಗಿ ಎರಡು ಮಹತ್ವದ ಸುಧಾರಣೆಗಳು | ಹೊಸ ಬೀಜ ಕಾಯ್ದೆ, ಪರಿಷ್ಕೃತ ಕೀಟನಾಶಕ ಕಾಯ್ದೆ ಜಾರಿಗೆ ಕೇಂದ್ರ ಸಿದ್ಧತೆ

ರೈತರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಹೊಸ ಬೀಜ ಕಾಯ್ದೆ ಮತ್ತು ಪರಿಷ್ಕೃತ ಕೀಟನಾಶಕ…

14 hours ago

ಇನ್ನೆರಡು ದಿನಗಳಲ್ಲಿ ತಂಬಾಕು ಬೆಳೆಗಾರರ ಸಮಸ್ಯೆಗೆ ಪರಿಹಾರ : ಕುಮಾರಸ್ವಾಮಿ ಭರವಸೆ

ಮೈಸೂರು ವಿಭಾಗದ ತಂಬಾಕು ರೈತರು ಖರೀದಿ ಸಮಸ್ಯೆಯಿಂದ ಸಂಕಷ್ಟದಲ್ಲಿದ್ದು, ಈ ಬಗ್ಗೆ ಕೇಂದ್ರ…

14 hours ago