ಮ್ಯಾನ್ಮಾರ್ನಿಂದ ಅಕ್ರಮವಾಗಿ ಅಡಿಕೆ ಆಮದು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಕಠಿಣ ಕ್ರಮವನ್ನು ತೀವ್ರಗೊಳಿಸುವುದಾಗಿ ಘೋಷಿಸಿದೆ. ರಾಜ್ಯದ ವಿಧಾನಸಭೆಯಲ್ಲಿ ಮಾತನಾಡಿದ ಗೃಹ ಸಚಿವ ಕೆ ಸಪ್ದಂಗ ಅವರು ಕಳ್ಳಸಾಗಣೆ ವಿರುದ್ಧ ಕಠಿಣ ನೀತಿ ಮುಂದುವರಿಯುತ್ತದೆ ಎಂದು ಸ್ಪಷ್ಟಪಡಿಸಿದರು.
2019 ರಿಂದ 2025ರವರೆಗೆ ಅಡಿಕೆ ಕಳ್ಳಸಾಗಣೆ ಸಂಬಂಧ 468 ಪ್ರಕರಣಗಳು ದಾಖಲಾಗಿದ್ದು, 292 ಮಂದಿಯನ್ನು ಬಂಧಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು. 109 ಪ್ರಕರಣಗಳು ಐಪಿಸಿ/ಬಿಎನ್ಎಸ್ಎಸ್ ಅಡಿಯಲ್ಲಿ ಹಾಗೂ 359 ಪ್ರಕರಣಗಳು ಕಸ್ಟಮ್ಸ್ ಕಾಯ್ದೆ, 1962 ಅಡಿಯಲ್ಲಿ ದಾಖಲಾಗಿವೆ. ಐಪಿಸಿ/ಬಿಎನ್ಎಸ್ಎಸ್ ಅಡಿಯಲ್ಲಿ 184 ಮಂದಿ ಬಂಧಿತರಾಗಿದ್ದು, 108 ಮಂದಿಯ ವಿರುದ್ಧ ಕಸ್ಟಮ್ಸ್ ಕಾಯ್ದೆಯಡಿ ಕ್ರಮ ಕೈಗೊಳ್ಳಲಾಗಿದೆ. ಅಪರಾಧಿಗಳು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಮುಂದೆ ವಿಚಾರಣೆಗೆ ಒಳಪಡುವುದಾಗಿ ತಿಳಿಸಿದ್ದಾರೆ.
ಮ್ಯಾನ್ಮಾರ್ನಿಂದ ಬರುವ ಅಡಿಕೆಗಳು ಕಡ್ಡಾಯ ಆಮದು ಸುಂಕ ಮತ್ತು ತೆರಿಗೆಗಳನ್ನು ತಪ್ಪಿಸಿ ಕಡಿಮೆ ಬೆಲೆಗೆ ಮಾರಾಟವಾಗುತ್ತಿವೆ. ಇದರಿಂದ ಕಪ್ಪು ಹಣದ ಚಲಾವಣೆ ಹೆಚ್ಚುವುದರ ಜೊತೆಗೆ ಸ್ಥಳೀಯ ಅಡಿಕೆ ಬೆಳೆಗಾರರಿಗೆ ಗಂಭೀರ ಆರ್ಥಿಕ ಹೊಡೆತ ಬಿದ್ದಿದೆ ಎಂದು ಸಚಿವರು ತಿಳಿಸಿದ್ದಾರೆ.
ಮುಂದೆ ಗಡಿ ಕಣ್ಗಾವಲು ಬಲಪಡಿಸಲಾಗುವುದು. ಅಕ್ರಮ ವ್ಯಾಪಾರದಲ್ಲಿ ಭಾಗಿಯಾದವರಲ್ಲಿ ಸರ್ಕಾರಿ ಅಧಿಕಾರಿಗಳಿದ್ದರೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ಅಡಿಕೆ ಬೆಲೆಯಲ್ಲಿ ಏರಿಕೆ : ಅಕ್ರಮ ಚಟುವಟಿಕೆ ತಡೆಯುತ್ತಿರುವ ಬೆನ್ನಲ್ಲೇ ಅಡಿಕೆ ಬೆಲೆ ಏರಿಕೆ ಕಂಡಿದೆ. ಕಟ್ಟುನಿಟ್ಟಿನ ಕ್ರಮಗಳಿಂದ ಸ್ಥಳೀಯವಾಗಿ ಉತ್ಪಾದಿಸುವ ಅಡಿಕೆಯ ಬೆಲೆಯಲ್ಲಿ ಏರಿಕೆ ಕಂಡುಬಂದಿದೆ. ಅಕ್ರಮ ಆಮದು ತಡೆಗೆ ಸೂಕ್ತ ಕ್ರಮವಾದರೆ ಕರ್ನಾಟಕದಲ್ಲೂ ಅಡಿಕೆ ಮಾರುಕಟ್ಟೆ ಚೇತರಿಕೆ ಕಾಣಲಿದೆ.
The Mizoram government has intensified its crackdown on arecanut smuggling from Myanmar, registering 468 cases and arresting 292 individuals since 2019. Authorities aim to curb black money circulation and protect local areca nut farmers from economic losses.
ಗೋಕರ್ಣದಲ್ಲಿ ನಡೆದ ಅನ್ನಬ್ರಹ್ಮ ಚಾತುರ್ಮಾಸ್ಯ ಧರ್ಮಸಭೆಯಲ್ಲಿ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು…
ಮಧ್ಯಪ್ರದೇಶದಲ್ಲಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು…
ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…
ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್ 1ರಂದು ಪುತ್ತೂರಿನಲ್ಲಿ ನೇರ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…