Advertisement
MIRROR FOCUS

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

Share

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಅಡಿಕೆ ಆಮದು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಕಠಿಣ ಕ್ರಮವನ್ನು ತೀವ್ರಗೊಳಿಸುವುದಾಗಿ ಘೋಷಿಸಿದೆ. ರಾಜ್ಯದ ವಿಧಾನಸಭೆಯಲ್ಲಿ ಮಾತನಾಡಿದ ಗೃಹ ಸಚಿವ ಕೆ ಸಪ್ದಂಗ ಅವರು ಕಳ್ಳಸಾಗಣೆ ವಿರುದ್ಧ  ಕಠಿಣ ನೀತಿ ಮುಂದುವರಿಯುತ್ತದೆ ಎಂದು ಸ್ಪಷ್ಟಪಡಿಸಿದರು.

2019 ರಿಂದ 2025ರವರೆಗೆ ಅಡಿಕೆ ಕಳ್ಳಸಾಗಣೆ ಸಂಬಂಧ 468 ಪ್ರಕರಣಗಳು ದಾಖಲಾಗಿದ್ದು, 292 ಮಂದಿಯನ್ನು ಬಂಧಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು. 109 ಪ್ರಕರಣಗಳು ಐಪಿಸಿ/ಬಿಎನ್‌ಎಸ್‌ಎಸ್ ಅಡಿಯಲ್ಲಿ ಹಾಗೂ 359 ಪ್ರಕರಣಗಳು ಕಸ್ಟಮ್ಸ್ ಕಾಯ್ದೆ, 1962 ಅಡಿಯಲ್ಲಿ ದಾಖಲಾಗಿವೆ.  ಐಪಿಸಿ/ಬಿಎನ್‌ಎಸ್‌ಎಸ್ ಅಡಿಯಲ್ಲಿ 184 ಮಂದಿ ಬಂಧಿತರಾಗಿದ್ದು, 108 ಮಂದಿಯ ವಿರುದ್ಧ ಕಸ್ಟಮ್ಸ್ ಕಾಯ್ದೆಯಡಿ ಕ್ರಮ ಕೈಗೊಳ್ಳಲಾಗಿದೆ. ಅಪರಾಧಿಗಳು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಮುಂದೆ ವಿಚಾರಣೆಗೆ ಒಳಪಡುವುದಾಗಿ ತಿಳಿಸಿದ್ದಾರೆ.

ಮ್ಯಾನ್ಮಾರ್‌ನಿಂದ ಬರುವ ಅಡಿಕೆಗಳು ಕಡ್ಡಾಯ ಆಮದು ಸುಂಕ ಮತ್ತು ತೆರಿಗೆಗಳನ್ನು ತಪ್ಪಿಸಿ ಕಡಿಮೆ ಬೆಲೆಗೆ ಮಾರಾಟವಾಗುತ್ತಿವೆ. ಇದರಿಂದ ಕಪ್ಪು ಹಣದ ಚಲಾವಣೆ ಹೆಚ್ಚುವುದರ ಜೊತೆಗೆ ಸ್ಥಳೀಯ ಅಡಿಕೆ ಬೆಳೆಗಾರರಿಗೆ ಗಂಭೀರ ಆರ್ಥಿಕ ಹೊಡೆತ ಬಿದ್ದಿದೆ ಎಂದು ಸಚಿವರು ತಿಳಿಸಿದ್ದಾರೆ.

ಮುಂದೆ ಗಡಿ ಕಣ್ಗಾವಲು ಬಲಪಡಿಸಲಾಗುವುದು. ಅಕ್ರಮ ವ್ಯಾಪಾರದಲ್ಲಿ ಭಾಗಿಯಾದವರಲ್ಲಿ ಸರ್ಕಾರಿ ಅಧಿಕಾರಿಗಳಿದ್ದರೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಅಡಿಕೆ ಬೆಲೆಯಲ್ಲಿ ಏರಿಕೆ : ಅಕ್ರಮ ಚಟುವಟಿಕೆ ತಡೆಯುತ್ತಿರುವ ಬೆನ್ನಲ್ಲೇ ಅಡಿಕೆ ಬೆಲೆ ಏರಿಕೆ ಕಂಡಿದೆ. ಕಟ್ಟುನಿಟ್ಟಿನ ಕ್ರಮಗಳಿಂದ ಸ್ಥಳೀಯವಾಗಿ ಉತ್ಪಾದಿಸುವ ಅಡಿಕೆಯ ಬೆಲೆಯಲ್ಲಿ ಏರಿಕೆ ಕಂಡುಬಂದಿದೆ. ಅಕ್ರಮ ಆಮದು ತಡೆಗೆ ಸೂಕ್ತ ಕ್ರಮವಾದರೆ ಕರ್ನಾಟಕದಲ್ಲೂ ಅಡಿಕೆ ಮಾರುಕಟ್ಟೆ ಚೇತರಿಕೆ ಕಾಣಲಿದೆ.

The Mizoram government has intensified its crackdown on arecanut smuggling from Myanmar, registering 468 cases and arresting 292 individuals since 2019. Authorities aim to curb black money circulation and protect local areca nut farmers from economic losses.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಭಾರತದ ಕೃಷಿ ರಫ್ತಿನಲ್ಲಿ ದೊಡ್ಡ ಬದಲಾವಣೆ – ಎಮ್ಮೆ ಮಾಂಸ ರಫ್ತು 5 ಬಿಲಿಯನ್ ಡಾಲರ್ ಗುರಿಯತ್ತ..!

ಭಾರತದ ಎಮ್ಮೆ ಮಾಂಸ ರಫ್ತು 2025-26ರಲ್ಲಿ 5.1 ಬಿಲಿಯನ್ ಡಾಲರ್ ತಲುಪಿದ್ದು, 2026-27ರಲ್ಲಿ…

3 hours ago

ಹಬ್ಬದ ಬೇಡಿಕೆಯನ್ನೇ ಕೃಷಿ ಅವಕಾಶವನ್ನಾಗಿ ಮಾಡಿದ ಕೇರಳ : 2.52 ಲಕ್ಷ ಟನ್ ತರಕಾರಿ ಉತ್ಪಾದನೆ

ಓಣಂ ಹಬ್ಬದ ಸಂದರ್ಭದ ಹೆಚ್ಚಿದ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ಕೇರಳ ಕೃಷಿ ಇಲಾಖೆ ನಡೆಸಿದ…

10 hours ago

ಹವಾಮಾನ ವರದಿ | 20-08-2026 | ಕರಾವಳಿಗೆ ಇನ್ನೂ ಮಳೆ ವಿರಾಮವಿಲ್ಲ…! ಆ.23–25 ಕ್ಕೆ ಮತ್ತೆ ಮಳೆ ಹೆಚ್ಚಾಗುವ ಸೂಚನೆ

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನವೂ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದ್ದು,…

12 hours ago

ಅಡಿಕೆ ತೋಟಗಳು ಹೆಚ್ಚುತ್ತಿವೆ… ಹಾಗಿದ್ದರೆ ಕರ್ನಾಟಕದಲ್ಲಿ ಇಳುವರಿ ಏಕೆ ಕುಸಿಯುತ್ತಿದೆ?

ಕರ್ನಾಟಕದಲ್ಲಿ ಅಡಿಕೆ ಬೆಳೆಯುವ ಪ್ರದೇಶ ಕಳೆದ ಐದು ವರ್ಷಗಳಲ್ಲಿ ಶೇ.32.42ರಷ್ಟು ಹೆಚ್ಚಾದರೂ, ಉತ್ಪಾದನೆ…

12 hours ago

ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯವೇ ದೊಡ್ಡ ಶಕ್ತಿಮೂಲ

ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…

1 day ago