ಮಿಜೋರಾಂ ರಾಜ್ಯದಲ್ಲಿ ಅಡಿಕೆ ಕಳ್ಳಸಾಗಣೆ ಹಾಗೂ ಕಳ್ಳತನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ. ಮ್ಯಾನ್ಮಾರ್ನಿಂದ ಅಕ್ರಮವಾಗಿ ತರಲಾಗಿದ್ದ ಸುಮಾರು ₹24 ಕೋಟಿ ಮೌಲ್ಯದ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದು, ಈ ಸಂಬಂಧ 468 ಪ್ರಕರಣಗಳನ್ನು ದಾಖಲಿಸಿ 292 ಮಂದಿಯನ್ನು ಬಂಧಿಸಲಾಗಿದೆ ಎಂದು ಮಿಜೋರಾಂ ಗೃಹ ಸಚಿವ ಕೆ. ಸಪ್ಡಾಂಗಾ ವಿಧಾನಸಭೆಗೆ ಮಾಹಿತಿ ನೀಡಿದ್ದಾರೆ.
ವಿಧಾನಸಭೆಯಲ್ಲಿ ಸದಸ್ಯ ವಿ.ಎಲ್. ಜೈತಾಂಜಾಮಾ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ವೈರೆಂಗ್ಟೆ ಪ್ರದೇಶದ ಗೋದಾಮೊಂದರಿಂದ 5,849 ಚೀಲ ಒಣ ಅಡಿಕೆ ಕಳವಾಗಿದ್ದು, ಇದುವರೆಗೆ ಕಳವಾದ ಅಡಿಕೆಯನ್ನು ಪತ್ತೆಹಚ್ಚಲು ಸಾಧ್ಯವಾಗಿಲ್ಲ ಎಂದು ತಿಳಿಸಿದ್ದಾರೆ. ಕಳವು ನಡೆದ ಗೋದಾಮು ಪೊಲೀಸ್ ಕಣ್ಗಾವಲಿನಲ್ಲಿರಲಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
2025ರ ಜನವರಿ 1ರಿಂದ 2026ರ ಫೆಬ್ರವರಿ 28ರವರೆಗೆ ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ 11,837 ಚೀಲ ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದೆ. ಈ ಅಕ್ರಮ ವ್ಯಾಪಾರವು ಸ್ಥಳೀಯ ಅಡಿಕೆ ಬೆಳೆಗಾರರಿಗೆ ದೊಡ್ಡ ಹೊಡೆತ ನೀಡಿದ್ದು, ತೆರಿಗೆ ಪಾವತಿಸದ ಅಡಿಕೆ ಕಡಿಮೆ ಬೆಲೆಯಲ್ಲಿ ಮಾರುಕಟ್ಟೆಗೆ ಬರುತ್ತಿರುವುದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಸರ್ಕಾರ ತಿಳಿಸಿದೆ.
ಮಿಜೋರಾಂ ಸರ್ಕಾರ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುನೀತಿಯನ್ನು ಮುಂದುವರಿಸಿದ್ದು, ಗಡಿ ಪ್ರದೇಶಗಳಲ್ಲಿ ನಿಗಾವನ್ನು ಮತ್ತಷ್ಟು ಬಲಪಡಿಸಲು ನಿರ್ಧರಿಸಿದೆ. ಕಳ್ಳಸಾಗಣೆ ತಡೆಯುವ ಕ್ರಮಗಳಿಂದ ಸ್ಥಳೀಯ ಅಡಿಕೆಯ ಬೆಲೆ ಏರಿಕೆಯಾಗಿದ್ದು, ರೈತರಿಗೆ ಸ್ವಲ್ಪ ಮಟ್ಟಿನ ನೆಮ್ಮದಿ ದೊರೆತಿದೆ ಎಂದು ಸಚಿವರು ಹೇಳಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
The Mizoram government has intensified its crackdown on areca nut smuggling from Myanmar. Home Minister K. Sapdanga informed the Assembly that areca nuts worth around ₹24 crore were seized between January 2025 and February 2026. Authorities registered 468 cases and arrested 292 people. The government said illegal imports were hurting local farmers by depressing market prices and has vowed stricter border surveillance.
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…
ಭಾರತದಲ್ಲಿ ಕೇವಲ ಒಂದು ದಿನದ ತೀವ್ರ ಬಿಸಿಲು ಸುಮಾರು 3,400 ಹೆಚ್ಚುವರಿ ಸಾವುಗಳಿಗೆ…
ದಕ್ಷಿಣ ಪೂರ್ವ ಏಷ್ಯಾ ರಾಷ್ಟ್ರಗಳು ಹವಾಮಾನ ಬದಲಾವಣೆ ಮತ್ತು ಆಹಾರ ಭದ್ರತೆ ಸವಾಲುಗಳನ್ನು…