ಮಾದಕ ವ್ಯಸನಿಗಳ ವಿರುದ್ದ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಲು ಶಾಸಕ ಅಶೋಕ್‌ ಕುಮಾರ್‌ ರೈ ಒತ್ತಾಯ |

December 14, 2023
9:54 PM

ಮಾದಕ ವ್ಯಸನಿಗಳು ಸಮಾಜ ಕಂಠಕರಾಗುತ್ತಿದ್ದಾರೆ, ಯುವ ಪೀಳಿಗೆ ಮಾದಕ ವ್ಯಸನಕ್ಕೆ ಬಲಿಯಾಗುತ್ತಿದೆ, ಇದು ಅತ್ಯಂತ ಗಂಭೀರ ವಿಚಾರವಾಗಿದ್ದು ಇದು ಹೀಗೇ ಮುಂದುವರೆದರೆ ವ್ಯಸನಿಗಳಿಂದ ರಾಜ್ಯಕ್ಕೆ, ದೇಶಕ್ಕೆ ತೊಂದರೆ ಉಂಟಾಗಬಹುದು, ಸಮಾಜವನ್ನು ಹಾಳು ಮಾಡುತ್ತಿರುವ ಇಂತವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರೈಯವರು ಬೆಳಗಾವಿ ವಿಧಾನಸಭಾ ಅಧಿವೇಶನದಲ್ಲಿ ಸರಕಾರವನ್ನು ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ಮಾಧಕ ವ್ಯಸನಿಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ, ಯುವ ಸಮೂಹ ಇದಕ್ಕೆ ಬಲಿಯಾಗುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 147  ಪೆಡ್ಲರ್‌ಗಳ ವಿರುದ್ದ ಪ್ರಕರಣ ದಾಖಲಾಗಿದೆ, 528 ಮಂದಿ ಮಾದಕ ವ್ಯಸನಿಗಳ ವಿರುದ್ದ ಪ್ರಕರಣ ದಾಖಲಾಗಿದೆ, ಪುತ್ತೂರಿನಲ್ಲಿ 26 ಪ್ರಕರಣಗಳು ದಾಖಲಾಗಿದೆ. ಇದನ್ನು ನಿಯಂತ್ರಣ ಮಾಡಲು ಸರಕಾರ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.

ರಾಜ್ಯದ ಪ್ರತೀ ತಾಲೂಕುಗಳಲ್ಲಿ ಡಿ ಎಡಿಕ್ಸನ್ ಸೆಂಟರ್‌ಗಳನ್ನು ಆರಂಭಿಸಬೇಕು. ಈ ಕೇಂದ್ರಗಳಲ್ಲಿ ಅವರಿಗೆ ಚಿಕಿತ್ಸೆಯನ್ನು ನೀಡಬೇಕಿದೆ. ಪೊಲೀಸ್ ಇಲಾಖೆ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕು. ನಿರ್ಜನ ಪ್ರದೇಶಗಳ ಬಗ್ಗೆ ಪೊಲೀಸರು ಹೆಚ್ಚು ನಿಗಾ ಇಡಬೇಕು, ಕೆಲವು ಕಡೆಗಳಲ್ಲಿ ವೆಂಟೆಡ್ ಡ್ಯಾಮ್‌ಗಳ ಬಳಿ ಈ ವ್ಯವಹಾರಗಳು ಹೆಚ್ಚಾಗಿ ನಡೆಯುತ್ತಿದೆ. ಇದೆಲ್ಲವನ್ನೂ ತಡೆಗಟ್ಟುವ ಮೂಲಕ ಪೊಲೀಸ್ ಇಲಾಖೆ ಮಾಧಕ ವ್ಯಸನಿಗಳ ಭೇಟೆಯಾಡಬೇಕು ಎಂದು ಶಾಸಕರು ಆಗ್ರಹಿಸಿದರು.

ಪ್ರತೀ ಶಾಲಾ ಕಾಲೇಜುಗಳಲ್ಲಿ ಮಾದಕ ದ್ರವ್ಯ ವ್ಯಸನದಿಂದ ಅಗುವ ದುಷ್ಪರಿಣಾಮದ ಬಗ್ಗೆ ಜಾಗೃತಿ ಕಾರ್ಯಕ್ರಮವನ್ನು ಮಾಡಬೇಕು. ಈ ರೀತಿಯ ಕಾರ್ಯಕ್ರಮವನ್ನು ಮಾಡುವ ಮೂಲಕ ಯುವ ಸಮೂಹ ಮತ್ತು ಯುವ ವಿದ್ಯಾರ್ಥಿ ಸಮೂಹ ಈ ಚಟಗಳಿಗೆ ಬಲಿಯಾಗದಂತೆ ಎಚ್ಚರಿಕಾ ವ್ಯವಸ್ಥೆಗಳನ್ನು ಮಾಡಬೇಕು ಎಂದು ಶಾಸಕರು ಸರಕಾರವನ್ನು ಆಗ್ರಹಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ
March 27, 2026
6:50 AM
by: ದ ರೂರಲ್ ಮಿರರ್.ಕಾಂ
ವೈಜ್ಞಾನಿಕ ಬೆಂಬಲ ಬೆಲೆ ಮತ್ತು ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹ
March 27, 2026
6:45 AM
by: ದ ರೂರಲ್ ಮಿರರ್.ಕಾಂ
ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ
March 27, 2026
6:34 AM
by: ದ ರೂರಲ್ ಮಿರರ್.ಕಾಂ
ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!
March 26, 2026
7:04 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror