Advertisement
MIRROR FOCUS

ಕೃಷಿಕರನ್ನು ಸರ್ಕಾರಗಳು ಹೇಗೆ ಯಾಮಾರಿಸುತ್ತವೆ…? | ಅಡಿಕೆ ಹಳದಿ ಎಲೆರೋಗ ಇಸ್ರೇಲ್‌ಗೆ ಸೋಗೆ ಕಳುಹಿಸಿದ ಎಲೆ ಪ್ರಸ್ತಾಪವೇ ಇಲ್ಲ…! |

Share

ಕೃಷಿಕರನ್ನು ಸರ್ಕಾರಗಳು ಹೇಗೆಲ್ಲಾ ಯಾಮಾರಿಸುತ್ತವೆ..? ಅದಕ್ಕೊಂದು ಉದಾಹರಣೆ ಇಲ್ಲಿದೆ ಗಮನಿಸಿ. ಅಡಿಕೆ ಹಳದಿ ಎಲೆರೋಗದ ಸೋಗೆಯನ್ನು ಇಸ್ರೇಲ್‌ಗೆ ಕಳುಹಿಸಿ ಪರಿಹಾರದ ಬಗ್ಗೆ ಅಧ್ಯಯನ ನಡೆಸುವುದಾಗಿ ಕಳೆದ ಬಾರಿ ಸಚಿವರು ಹೇಳಿದ್ದರು. ಈ ಸರ್ಕಾರ ಕೈಗೊಂಡ ಕ್ರಮದ ಬಗ್ಗೆ ವಿಧಾನ ಪರಿಷತ್‌ ಸದಸ್ಯರು ಕೇಳಿದ ಪ್ರಶ್ನೆಯಲ್ಲಿ ಇದರ ಉಲ್ಲೇಖವೇ ಇಲ್ಲ…!. ಹಾಗಿದ್ದರೆ ಅಂದು ಸಚಿವರು ಹೇಳಿದ್ದೇನು? ಈ ಬಗ್ಗೆ ಏನು ಬೆಳವಣಿಗೆ ಎಂಬ ಮಾಹಿತಿಯೂ ಇಲ್ಲ..!.

ಅಡಿಕೆ ಬೆಳೆಗಾರರಿಗೆ ಕಾಡುವ ಸಮಸ್ಯೆ ಎಲೆಚುಕ್ಕಿ ರೋಗ ಹಾಗೂ ಹಳದಿ ಎಲೆರೋಗ. ಅಡಿಕೆ ಹಳದಿ ಎಲೆರೋಗ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಉತ್ತರಕನ್ನಡ, ಶೃಂಗೇರಿ ಮೊದಲಾದ ಕಡೆ ಇದೆ. ಆಗಾಗ ಸರ್ಕಾರದ ಪ್ರತಿನಿಧಿಗಳು ಭೇಟಿ ನೀಡಿ ಸಂತೈಸಿ ಪರಿಹಾರ ಕ್ರಮದ ಭರವಸೆ ನೀಡುತ್ತಾರೆ. ಕಳೆದ ಬಾರಿ ಎಲೆಚುಕ್ಕಿ ರೋಗ, ಅಡಿಕೆ ಹಳದಿ ಎಲೆರೋಗದ ಸಮಸ್ಯೆ ಬಗ್ಗೆ ಗಂಭೀರ ಚರ್ಚೆ ಆರಂಭವಾದಾಗ ಸರ್ಕಾರದ ಗಮನಕ್ಕೆ ಬಂದಾಗ ತೋಟಗಾರಿಕಾ ಸಚಿವರು ಭೇಟಿ ನೀಡಿದರು. ರೈತರನ್ನು ಸಂತೈಸಿ ಸಮಸ್ಯೆಯನ್ನು ಮುಂದೂಡಿದರು..!. ತೋಟಗಳಿಗೆ ಭೇಟಿ ನೀಡಿ, ಶೀಘ್ರವೇ ಪರಿಹಾರದ ಭರವಸೆ ನೀಡಿ, ಅಡಿಕೆ ಮರದ ಸೋಗೆಯನ್ನು ಇಸ್ರೇಲ್‌ಗೆ ಕಳುಹಿಸಿ ಅಧ್ಯಯನ ನಡೆಸಿ ಸೂಕ್ತ ಕ್ರಮದ ಭರವಸೆಯನ್ನು ನೀಡಿದ್ದರು. ಅದಾಗಿ ಹೊಸ ಸರ್ಕಾರ ಬಂದಾಗ, ಶೀಘ್ರವೇ ಪರಿಹಾರದ ಭರವಸೆಯನ್ನು ಕೃಷಿ ಸಚಿವರು ಹೇಳಿದರು. ರೈತ ಪರವಾದ ಹೇಳಿಕೆ ನೀಡಿ, ಸದ್ಯದಲ್ಲೇ ಸೂಕ್ತ ಕ್ರಮ ಎಂದರು..!.

Advertisement
ಪ್ರತಾಪ್‌ ಸಿಂಹ ನಾಯಕ್

ಇದೀಗ ವಿಧಾನ ಪರಿಷತ್‌ ಸದಸ್ಯ ಪ್ರತಾಪ್‌ ಸಿಂಹ ನಾಯಕ್‌ ಅವರು ಅಡಿಕೆ ಹಳದಿ ಎಲೆರೋಗ , ಎಲೆಚುಕ್ಕಿ ರೋಗದ ಬಗ್ಗೆ ಹಾಗೂ ಇದರಿಂದ ರೈತರಿಗೆ ಉಂಟಾದ ಆರ್ಥಿಕ ನಷ್ಟದ ಬಗ್ಗೆ ಅಧಿವೇಶನದಲ್ಲಿ ಸರ್ಕಾರವನ್ನು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ತೋಟಗಾರಿಕಾ ಸಚಿವರು, ಅಡಿಕೆ ಎಲೆಚುಕ್ಕಿ ರೋಗದಿಂದ 53977 ಹೆಕ್ಟೇರ್‌ ಪ್ರದೇಶದಲ್ಲಿ ಎಲೆಚುಕ್ಕಿ ರೋಗ ಬಾಧಿಸಿದ್ದು 11,0181 ಲಕ್ಷ ರೂಪಾಯಿ ಆರ್ಥಿಕ ನಷ್ಟ ಉಂಟಾಗಿದೆ, ಅಡಿಕೆ ಹಳದಿ ಎಲೆರೋಗದಿಂದ 13767 ಹೆಕ್ಟೇರ್‌ ಪ್ರದೇಶದಲ್ಲಿ ಹಳದಿ ಎಲೆರೋಗ ಬಾಧಿಸಿದ್ದು 56233 ಲಕ್ಷ ರೂಪಾಯಿ ನಷ್ಟ ಉಂಟಾಗಿದೆ ಎಂದು ಉತ್ತರಿಸಿದ್ದಾರೆ.

ಎಲೆಚುಕ್ಕಿ ಹಾಗೂ ಹಳದಿ ಎಲೆರೋಗ ನಿಯಂತ್ರಣಕ್ಕೆ ಸರ್ಕಾರವು ಕೈಗೊಂಡಿರುವ ವೈಜ್ಞಾನಿಕ ಕ್ರಮಗಳ ಬಗ್ಗೆಯೂ ಕೇಳಿದ ಪ್ರಶ್ನೆಯಲ್ಲಿ ಹಲವು ಪರಿಹಾರ ಕ್ರಮಗಳ ಬಗ್ಗೆ , ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಲಾಗಿದೆ. ಆದರೆ ಇಸ್ರೇಲ್‌ ಗೆ ಅಡಿಕೆ ಮರದ ಸೋಗೆ ಕಳುಹಿಸಿರುವ ಬಗ್ಗೆ ಯಾವುದೇ ಉಲ್ಲೇಖವಿಲ್ಲ.

Advertisement

ಈಗಾಗಲೇ ನಷ್ಟ ಉಂಟಾಗಿರುವ ರೈತರಿಗೆ ಪರಿಹಾರ ನೀಡುವ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಪ್ರತಾಪ್‌ ಸಿಂಹ ನಾಯಕ್‌ ಒತ್ತಾಯಿಸಿದ್ದಾರೆ.

‌MLC Pratap Singha Naik questioned the government in the session about Arecanut yellow leaf disease and leaf spot disease and due to this financial loss caused to the farmers.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ

ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…

22 hours ago

ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”

ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…

23 hours ago

ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ

ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…

2 days ago

ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್‌…

2 days ago

ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ

ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…

2 days ago

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

3 days ago