ಕೂಲಿ ಕಾರ್ಮಿಕರು ಜೀವನ ನಿರ್ವಹಣೆ ಮಾಡಲು ದೂರದ ನಗರಗಳಿಗೆ ವಲಸೆ ಹೋಗದೆ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡುವಂತೆ ಯಾದಗಿರಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಹಾದೇವ್ ಬಾಬಳಗಿ ಮನವಿ ಮಾಡಿದ್ದಾರೆ.
ದಿನಕ್ಕೆ 370 ರೂಪಾಯಿ ಕೂಲಿ ದರ ಏರಿಕೆ ಮಾಡಲಾಗಿದ್ದು. ಗ್ರಾಮೀಣ ಪ್ರದೇಶದ ಅರ್ಹ ಕೂಲಿ ಕಾರ್ಮಿಕರು ನರೇಗಾ ಸೌಲಭ್ಯ ಪಡೆಯಲು ಅರ್ಹರಾಗಿದ್ದಾರೆ ಎಂದು ತಿಳಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಹಳ್ಳ, ಕೆರೆ, ನಾಲಾ, ಚೆಕ್ ಡ್ಯಾಮ್ ಹೂಳೆತ್ತುವುದು, ಕಂದಕ ಬದು ನಿರ್ಮಾಣ ಮಾಡುವ ಮೂಲಕ ನೈಸರ್ಗಿಕ ಜಲ ಸಂಪತ್ತು ರಕ್ಷಿಸಿ ಬಲಪಡಿಸಲು ಹಾಗೂ ಕಾರ್ಮಿಕರಿಗೆ ಆರ್ಥಿಕ ಭದ್ರತೆ ನೀಡುವ ಉದ್ದೇಶದಿಂದ ಹೆಚ್ಚು ಕೂಲಿ ಕೆಲಸ ಆಧಾರಿತ ಕಾಮಗಾರಿ ಆಯ್ದುಕೊಳ್ಳಲಾಗಿದೆ ಎಂದು ಎಂದು ಸ್ಪಷ್ಟಪಡಿಸಿದ್ದಾರೆ. ನರೇಗಾ ಯೋಜನೆಯಡಿ ಗ್ರಾಮೀಣ ಪ್ರದೇಶದ ಪ್ರತಿ ಅರ್ಹ ಕುಟುಂಬಕ್ಕೆ ಒಂದು ಆರ್ಥಿಕ ವರ್ಷದಲ್ಲಿ ನೂರು ದಿನಗಳ ಕೂಲಿ ಕೆಲಸದ ಖಾತ್ರಿ ನೀಡಿದೆ. ಒಂದು ಕುಟುಂಬ ನೂರು ದಿನ ಕೆಲಸ ಮಾಡಿದರೆ 37000 ರೂಪಾಯಿ ಪಡೆದುಕೊಳ್ಳಬಹುದು ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…