ಕೂಲಿ ಕಾರ್ಮಿಕರು ಜೀವನ ನಿರ್ವಹಣೆ ಮಾಡಲು ದೂರದ ನಗರಗಳಿಗೆ ವಲಸೆ ಹೋಗದೆ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡುವಂತೆ ಯಾದಗಿರಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಹಾದೇವ್ ಬಾಬಳಗಿ ಮನವಿ ಮಾಡಿದ್ದಾರೆ.
ದಿನಕ್ಕೆ 370 ರೂಪಾಯಿ ಕೂಲಿ ದರ ಏರಿಕೆ ಮಾಡಲಾಗಿದ್ದು. ಗ್ರಾಮೀಣ ಪ್ರದೇಶದ ಅರ್ಹ ಕೂಲಿ ಕಾರ್ಮಿಕರು ನರೇಗಾ ಸೌಲಭ್ಯ ಪಡೆಯಲು ಅರ್ಹರಾಗಿದ್ದಾರೆ ಎಂದು ತಿಳಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಹಳ್ಳ, ಕೆರೆ, ನಾಲಾ, ಚೆಕ್ ಡ್ಯಾಮ್ ಹೂಳೆತ್ತುವುದು, ಕಂದಕ ಬದು ನಿರ್ಮಾಣ ಮಾಡುವ ಮೂಲಕ ನೈಸರ್ಗಿಕ ಜಲ ಸಂಪತ್ತು ರಕ್ಷಿಸಿ ಬಲಪಡಿಸಲು ಹಾಗೂ ಕಾರ್ಮಿಕರಿಗೆ ಆರ್ಥಿಕ ಭದ್ರತೆ ನೀಡುವ ಉದ್ದೇಶದಿಂದ ಹೆಚ್ಚು ಕೂಲಿ ಕೆಲಸ ಆಧಾರಿತ ಕಾಮಗಾರಿ ಆಯ್ದುಕೊಳ್ಳಲಾಗಿದೆ ಎಂದು ಎಂದು ಸ್ಪಷ್ಟಪಡಿಸಿದ್ದಾರೆ. ನರೇಗಾ ಯೋಜನೆಯಡಿ ಗ್ರಾಮೀಣ ಪ್ರದೇಶದ ಪ್ರತಿ ಅರ್ಹ ಕುಟುಂಬಕ್ಕೆ ಒಂದು ಆರ್ಥಿಕ ವರ್ಷದಲ್ಲಿ ನೂರು ದಿನಗಳ ಕೂಲಿ ಕೆಲಸದ ಖಾತ್ರಿ ನೀಡಿದೆ. ಒಂದು ಕುಟುಂಬ ನೂರು ದಿನ ಕೆಲಸ ಮಾಡಿದರೆ 37000 ರೂಪಾಯಿ ಪಡೆದುಕೊಳ್ಳಬಹುದು ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…