ಬೆಳ್ಳಿಪ್ಪಾಡಿ ಬಿ ಎಸ್ ಎನ್ ಎಲ್ ಟವರ್ ಗೆ ಸಂಬಂಧಿಸಿ ಮೈಕ್ರೋ ಗೆ ಹೋಗುವ ವಿದ್ಯುತ್ ಲೈನ್ ಗೆ ತಾಗುವ ಮರದ ಗೆಲ್ಲು ಲೈನ್ ತೆರವು ಮಾಡುವ ಸೇವಾ ಕಾರ್ಯ ನಡೆಯಿತು. ಸ್ಥಳೀಯ ಶಕ್ತಿ ಯುವಕ ಮಂಡಲ ಬೆಳ್ಳಿಪ್ಪಾಡಿ ಮತ್ತು ಹಿಂದೂ ಐಕ್ಯ ವೇದಿ ಬೆಳ್ಳಿಪ್ಪಾಡಿ ಘಟಕದ ವತಿಯಿಂದ ಸೇವಾಕಾರ್ಯ ಮಾಡಲಾಯಿತು.
ಈ ಸಂದರ್ಭದಲ್ಲಿ ವಿದ್ಯುತ್ ಇಲಾಖೆಯ ಪವರ್ ಮ್ಯಾನ್ , ಬಿ ಎಸ್ ಎನ್ ಎಲ್ ಉದ್ಯೋಗಿಗಳು , ಶಕ್ತಿ ಯುವಕ ಮಂಡಲ ಹಾಗೂ ಹಿಂದೂ ಐಕ್ಯ ವೇದಿ ಬೆಳ್ಳಿಪ್ಪಾಡಿ ಯ ಅಧ್ಯಕ್ಷರು ಮತ್ತು ಸರ್ವಸದಸ್ಯರು ಭಾಗವಹಿಸಿದರು. ಇದೇ ಸಂದರ್ಭ BSNL ಗೆ ಸಂಬಂಧಿಸಿ ಅಧಿಕಾರಿಗಳು ಆದಷ್ಟು ಬೇಗ ನೆಟ್ವರ್ಕ್ ಸಮಸ್ಯೆಯನ್ನು ಬಗೆಹರಿಸಲು ಮನವಿ ಮಾಡಲಾಯಿತು.
ಗ್ರಾಮೀಣ ಭಾಗದಲ್ಲಿ ಮೊಬೈಲ್ ನೆಟ್ವರ್ಕ್ , ವಿದ್ಯುತ್ ಸಮಸ್ಯೆ ಇದ್ದರೂ ಯುವಕ ಸಂಘಟನೆಗಳು ಸಕ್ರಿಯವಾಗಿ ಇಲಾಖೆಗಳ ಜೊತೆಗೆ ಸಹಕರಿಸುತ್ತಾ ಸೇವಾ ಕಾರ್ಯದಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ. ಆದರೆ ಇಲಾಖೆಗಳು ಮಾತ್ರಾ ಸೇವೆ ಒದಗಿಸುವಲ್ಲಿ ವಿಳಂಬ ಮಾಡುತ್ತಿರುವುದು ಅಷ್ಟೇ ವಿಷಾದವಾಗಿದೆ.
ಬಾಂಗ್ಲಾದೇಶದ ವಿಜ್ಞಾನಿಗಳು ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ ತಯಾರಿಸುವ ತಂತ್ರಜ್ಞಾನಕ್ಕೆ ಪೇಟೆಂಟ್…
ಭಾರತದ ಕೃಷಿ ರಫ್ತು ಉತ್ಪನ್ನಗಳ ಸಂಖ್ಯೆ 280ರಿಂದ ಸುಮಾರು 500ಕ್ಕೆ ಏರಿಕೆಯಾಗಿದೆ. ₹4.61…
ದೊಡ್ಡಬಳ್ಳಾಪುರ ಭಾಗದಲ್ಲಿ ಅಡಿಕೆ ಹೊಂಬಾಳೆಗಳನ್ನು ಕಳ್ಳರು ಕದ್ದೊಯ್ಯುತ್ತಿರುವ ಘಟನೆಗಳು ಹೆಚ್ಚಾಗಿವೆ. ಇದರಿಂದ ರೈತರು…
ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಕಾವೇರಿ ನೀರಿನ ಮಟ್ಟ…
ಗೋಕರ್ಣದಲ್ಲಿ ನಡೆದ ಅನ್ನಬ್ರಹ್ಮ ಚಾತುರ್ಮಾಸ್ಯ ಧರ್ಮಸಭೆಯಲ್ಲಿ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು…
ಮಧ್ಯಪ್ರದೇಶದಲ್ಲಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು…