MIRROR FOCUS

ಪಾಲಿಹೌಸ್‌ನೊಳಗೆ ವಿದೇಶಿ ಸೌತೆ ಬೆಳೆದ ಮಾದರಿ ಕೃಷಿಕ | ಕಡಿಮೆ ಖರ್ಚಿನಲ್ಲಿ ಮಂಡ್ಯದಲ್ಲಿ ಇಂಗ್ಲಿಷ್‌ ಸೌತೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ರೈತರು(Farmer) ಒಂದೇ ಕೃಷಿಗೆ(agriculture) ಒಗ್ಗಿಕೊಳ್ಳದೆ ಬೇರೆ ಬೇರೆ ಬೆಳೆಗಳನ್ನು ಬೆಳೆಯುವ(Crop) ಬಗ್ಗೆ ಪ್ರಯೋಗ(Experiment) ಮಾಡುವುದು ಮಾಮೂಲು. ಈ ಪ್ರಯತ್ನದಲ್ಲಿ ಕೆಲವೊಮ್ಮ ಯಶಸ್ಸು ದೊರೆತರೆ, ಕೆಲವೊಮ್ಮೆ ಭೂಮಿ ತಾಯಿ ಕೈ ಕೊಡುತ್ತಾಳೆ. ಆದರೆ ಇಲ್ಲೊಬ್ಬ ರೈತರ ಪರಿಶ್ರಮಕ್ಕೆ ತಕ್ಕ ಫಲ ನೀಡಿದ್ದಾಳೆ. ಪಾಲಿಹೌಸ್(Polyhouse) ನಲ್ಲಿ ಬೇಸಾಯ ಮಾಡೋವ ಮೂಲಕ ಮಾದರಿ ಎನಿಸಿಕೊಂಡಿದ್ದಾರೆ. ಇವರು ಇನ್ನೊಬ್ಬರ ಜಮೀನು ಗುತ್ತಿಗೆ ಪಡೆದು ಪರದೆಯೊಳಗೆ ಪರದೇಶಿ (ಇಂಗ್ಲೀಷ್) ಸೌತೆಕಾಯಿ (Cucumber) ಬೆಳೆದು ಇತರ ರೈತರು ಹುಬ್ಬೇರಿಸುವಂತೆ ಮಾಡಿದ್ದಾರೆ‌. 

Advertisement
Advertisement

ಏನಿದು ಇಂಗ್ಲೀಷ್‌ ಸೌತೆ? : ಮಂಡ್ಯದ ಶ್ರೀರಂಗಪಟ್ಟಣದ ಬೊಮ್ಮೂರು ಅಗ್ರಹಾರದಲ್ಲಿ ಇಂತಹದ್ದೊಂದು ಪರದೆಯೊಳಗೆ ಪರದೇಶಿ ಸೌತೆ ನೋಡಬಹುದಾಗಿದೆ. ಹೈದರಾಬಾದ್ ಮೂಲದ, ಸದ್ಯ ಮೈಸೂರಿನಲ್ಲಿ ನೆಲೆಸಿರುವ ರಾಜಕುಮಾರ್ ಚೌಹಾಣ್ ಎಂಬ ವ್ಯಕ್ತಿ ಶ್ರೀರಂಗಪಟ್ಟಣದ ಬೊಮ್ಮೂರು ಅಗ್ರಹಾರದ ಬಳಿ ಕಾವೇರಿ ನದಿ ದಂಡೆಯಲ್ಲಿ ಎರಡು ಎಕರೆ ಜಮೀನು ಗುತ್ತಿಗೆ ಪಡೆದು ಹನಿ ನೀರಾವರಿ ಪದ್ಧತಿಯಲ್ಲಿ ಇಂಗ್ಲೀಷ್ ಸೌತೆ ಬೆಳೆದಿದ್ದಾರೆ.

ಏನೆಲ್ಲ ಲಾಭ? : ಇನ್ನು ಈ ಇಂಗ್ಲಿಷ್ ಸೌತೆಗೆ ರಾಜ್ಯ ಸೇರಿದಂತೆ ಕೇರಳದಲ್ಲಿ ಬಹು ಬೇಡಿಕೆ ಇದೆ. ಅಲ್ಲದೆ ಈ ರೀತಿ ಪರದೆ ಪದ್ಧತಿಯಲ್ಲಿ ಸೌತೆ ಬೆಳೆದರೆ ಕೀಟಗಳ ಹಾವಳಿ ತೀರಾ ಕಡಿಮೆ. ಬಿಸಿ ಗಾಳಿ ಮತ್ತು ರಭಸದ ಮಳೆಯಿಂದ ಬೆಳೆಗೆ ರಕ್ಷಣೆ ಸಿಗುತ್ತದೆ. ತೇವಾಂಶ ಬೇಗ ನಶಿಸುವುದಿಲ್ಲ. ಪಾಲಿಹೌಸ್ (ಗ್ರೀನ್ ಹೌಸ್) ಪದ್ಧತಿಗಿಂತ ನೆಟ್ ಹೌಸ್ (ಬಲೆ ಮನೆ) ಪದ್ದತಿಯಲ್ಲಿ ಖರ್ಚು ಕಡಿಮೆ. ಇನ್ನು ಪಾಲಿಹೌಸ್ ಖರ್ಚಿನ ಅರ್ಧ ಹಣದಲ್ಲಿ ಪರದೆ ನಿರ್ಮಾಣ ಮಾಡಬಹುದು. ಪಾಲಿಹೌಸ್ ಒಳಗೆ ಹೆಚ್ಚು ಶಾಖ ಇದ್ದು, ಅದು ಯೂರೋಪಿನ ಹವಾಗುಣಕ್ಕೆ ಸೂಕ್ತ. ಆದರೆ ಇಲ್ಲಿನ ವಾತಾವರಣಕ್ಕೆ ಅದು ಅಷ್ಟಾಗಿ ಹೊಂದಿಕೊಳ್ಳುವುದಿಲ್ಲ. ಬಿಸಿ ವಾತಾವರಣದಲ್ಲಿ ಕೆಲಸ ಮಾಡಲು ಕೂಲಿ ಕಾರ್ಮಿಕರು ಹಿಂದೇಟು ಹಾಕುತ್ತಾರೆ.

ಬಲೆ ಪದ್ಧತಿಯಲ್ಲಿ ಒಂದು ಬಾರಿ ಬಲೆ ಅಳವಡಿಸಿದರೆ 5 ವರ್ಷಗಳಿಗೂ ಹೆಚ್ಚು ಕಾಲ ಬಾಳಿಕೆ ಬರುತ್ತದೆ. ಹಾಗಾಗಿ ಪಾಲಿಹೌಸ್‌ಗಿಂತ ನೆಟ್ ಹೌಸ್ ಪದ್ಧತಿಯಲ್ಲಿ ಖರ್ಚು ಕಡಿಮೆ, ಲಾಭ ಜಾಸ್ತಿ ಎನ್ನುವುದು ತಳಿ ವಿಜ್ಞಾನಿಯೂ ಆಗಿರುವ ಕಾವೇರಿ ಕನ್ಯಾ ಗುರುಕುಲದ ಮುಖ್ಯಸ್ಥ ಡಾ.ಕೆ.ಕೆ. ಸುಬ್ರಮಣಿ ಅವರ ಮಾತು. ಸದ್ಯ ರೈತ ರಾಜ್ ಕುಮಾರ್ ನಾಟಿ ಮಾಡಿದ 30 ದಿನಗಳಲ್ಲಿ ಫಸಲನ್ನ ಕೂಡ ಪಡೆದುಕೊಂಡಿದ್ದಾರೆ. ಪರದೆ ಪದ್ದತಿಯಲ್ಲಿ ಬೇಸಾಯ ಮಾಡಿದ್ರೆ ಹೆಚ್ಚು ಆದಾಯ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಜೂನ್ 1 : ಯಕ್ಷಗುರು ಪಾಲೆಚ್ಚಾರು ಗೋವಿಂದ ನಾಯಕರಿಗೆ ‘ಈಶಾವಾಸ್ಯ ಪ್ರಶಸ್ತಿ’ | ಗೋವಿಂದ ಗಾಥೆ’ ಕೃತಿ ಅನಾವರಣ

ಯಕ್ಷಗುರು, ಭಾಗವತ ಶ್ರೀ ಪಾಲೆಚ್ಚಾರು ಗೋವಿಂದ ನಾಯಕ್ ಅವರಿಗೆ ‘ಈಶಾವಾಸ್ಯ ಪ್ರಶಸ್ತಿ ಪುರಸ್ಕಾರ’…

20 minutes ago

ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಮೀ ಸಾರ್ವಕಾಲಿಕ ದಾಖಲೆ ಮಳೆ

ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಲಿಮೀಟರ್ ಮಳೆಯಾಗಿದ್ದು, ಇದು ಸಾರ್ವಕಾಲಿಕ ದಾಖಲೆಯಾಗಿದೆ.…

35 minutes ago

ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿ

ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿಯಲ್ಲಿದ್ದು, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ…

48 minutes ago

ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆ | ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ

ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ…

53 minutes ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿವೃಷ್ಟಿ ನಿರ್ವಹಣೆ ಕುರಿತು ಸಭೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರ ಮಳೆಯಾಗುತ್ತಿದ್ದು, ಸಾರ್ವಜನಿಕರ ಜೀವಹಾನಿ ತಪ್ಪಿಸಲು ಸರಕಾರ ಗರಿಷ್ಠ…

58 minutes ago