ರೈತರು(Farmer) ಒಂದೇ ಕೃಷಿಗೆ(agriculture) ಒಗ್ಗಿಕೊಳ್ಳದೆ ಬೇರೆ ಬೇರೆ ಬೆಳೆಗಳನ್ನು ಬೆಳೆಯುವ(Crop) ಬಗ್ಗೆ ಪ್ರಯೋಗ(Experiment) ಮಾಡುವುದು ಮಾಮೂಲು. ಈ ಪ್ರಯತ್ನದಲ್ಲಿ ಕೆಲವೊಮ್ಮ ಯಶಸ್ಸು ದೊರೆತರೆ, ಕೆಲವೊಮ್ಮೆ ಭೂಮಿ ತಾಯಿ ಕೈ ಕೊಡುತ್ತಾಳೆ. ಆದರೆ ಇಲ್ಲೊಬ್ಬ ರೈತರ ಪರಿಶ್ರಮಕ್ಕೆ ತಕ್ಕ ಫಲ ನೀಡಿದ್ದಾಳೆ. ಪಾಲಿಹೌಸ್(Polyhouse) ನಲ್ಲಿ ಬೇಸಾಯ ಮಾಡೋವ ಮೂಲಕ ಮಾದರಿ ಎನಿಸಿಕೊಂಡಿದ್ದಾರೆ. ಇವರು ಇನ್ನೊಬ್ಬರ ಜಮೀನು ಗುತ್ತಿಗೆ ಪಡೆದು ಪರದೆಯೊಳಗೆ ಪರದೇಶಿ (ಇಂಗ್ಲೀಷ್) ಸೌತೆಕಾಯಿ (Cucumber) ಬೆಳೆದು ಇತರ ರೈತರು ಹುಬ್ಬೇರಿಸುವಂತೆ ಮಾಡಿದ್ದಾರೆ.
ಏನಿದು ಇಂಗ್ಲೀಷ್ ಸೌತೆ? : ಮಂಡ್ಯದ ಶ್ರೀರಂಗಪಟ್ಟಣದ ಬೊಮ್ಮೂರು ಅಗ್ರಹಾರದಲ್ಲಿ ಇಂತಹದ್ದೊಂದು ಪರದೆಯೊಳಗೆ ಪರದೇಶಿ ಸೌತೆ ನೋಡಬಹುದಾಗಿದೆ. ಹೈದರಾಬಾದ್ ಮೂಲದ, ಸದ್ಯ ಮೈಸೂರಿನಲ್ಲಿ ನೆಲೆಸಿರುವ ರಾಜಕುಮಾರ್ ಚೌಹಾಣ್ ಎಂಬ ವ್ಯಕ್ತಿ ಶ್ರೀರಂಗಪಟ್ಟಣದ ಬೊಮ್ಮೂರು ಅಗ್ರಹಾರದ ಬಳಿ ಕಾವೇರಿ ನದಿ ದಂಡೆಯಲ್ಲಿ ಎರಡು ಎಕರೆ ಜಮೀನು ಗುತ್ತಿಗೆ ಪಡೆದು ಹನಿ ನೀರಾವರಿ ಪದ್ಧತಿಯಲ್ಲಿ ಇಂಗ್ಲೀಷ್ ಸೌತೆ ಬೆಳೆದಿದ್ದಾರೆ.
ಏನೆಲ್ಲ ಲಾಭ? : ಇನ್ನು ಈ ಇಂಗ್ಲಿಷ್ ಸೌತೆಗೆ ರಾಜ್ಯ ಸೇರಿದಂತೆ ಕೇರಳದಲ್ಲಿ ಬಹು ಬೇಡಿಕೆ ಇದೆ. ಅಲ್ಲದೆ ಈ ರೀತಿ ಪರದೆ ಪದ್ಧತಿಯಲ್ಲಿ ಸೌತೆ ಬೆಳೆದರೆ ಕೀಟಗಳ ಹಾವಳಿ ತೀರಾ ಕಡಿಮೆ. ಬಿಸಿ ಗಾಳಿ ಮತ್ತು ರಭಸದ ಮಳೆಯಿಂದ ಬೆಳೆಗೆ ರಕ್ಷಣೆ ಸಿಗುತ್ತದೆ. ತೇವಾಂಶ ಬೇಗ ನಶಿಸುವುದಿಲ್ಲ. ಪಾಲಿಹೌಸ್ (ಗ್ರೀನ್ ಹೌಸ್) ಪದ್ಧತಿಗಿಂತ ನೆಟ್ ಹೌಸ್ (ಬಲೆ ಮನೆ) ಪದ್ದತಿಯಲ್ಲಿ ಖರ್ಚು ಕಡಿಮೆ. ಇನ್ನು ಪಾಲಿಹೌಸ್ ಖರ್ಚಿನ ಅರ್ಧ ಹಣದಲ್ಲಿ ಪರದೆ ನಿರ್ಮಾಣ ಮಾಡಬಹುದು. ಪಾಲಿಹೌಸ್ ಒಳಗೆ ಹೆಚ್ಚು ಶಾಖ ಇದ್ದು, ಅದು ಯೂರೋಪಿನ ಹವಾಗುಣಕ್ಕೆ ಸೂಕ್ತ. ಆದರೆ ಇಲ್ಲಿನ ವಾತಾವರಣಕ್ಕೆ ಅದು ಅಷ್ಟಾಗಿ ಹೊಂದಿಕೊಳ್ಳುವುದಿಲ್ಲ. ಬಿಸಿ ವಾತಾವರಣದಲ್ಲಿ ಕೆಲಸ ಮಾಡಲು ಕೂಲಿ ಕಾರ್ಮಿಕರು ಹಿಂದೇಟು ಹಾಕುತ್ತಾರೆ.
ಬಲೆ ಪದ್ಧತಿಯಲ್ಲಿ ಒಂದು ಬಾರಿ ಬಲೆ ಅಳವಡಿಸಿದರೆ 5 ವರ್ಷಗಳಿಗೂ ಹೆಚ್ಚು ಕಾಲ ಬಾಳಿಕೆ ಬರುತ್ತದೆ. ಹಾಗಾಗಿ ಪಾಲಿಹೌಸ್ಗಿಂತ ನೆಟ್ ಹೌಸ್ ಪದ್ಧತಿಯಲ್ಲಿ ಖರ್ಚು ಕಡಿಮೆ, ಲಾಭ ಜಾಸ್ತಿ ಎನ್ನುವುದು ತಳಿ ವಿಜ್ಞಾನಿಯೂ ಆಗಿರುವ ಕಾವೇರಿ ಕನ್ಯಾ ಗುರುಕುಲದ ಮುಖ್ಯಸ್ಥ ಡಾ.ಕೆ.ಕೆ. ಸುಬ್ರಮಣಿ ಅವರ ಮಾತು. ಸದ್ಯ ರೈತ ರಾಜ್ ಕುಮಾರ್ ನಾಟಿ ಮಾಡಿದ 30 ದಿನಗಳಲ್ಲಿ ಫಸಲನ್ನ ಕೂಡ ಪಡೆದುಕೊಂಡಿದ್ದಾರೆ. ಪರದೆ ಪದ್ದತಿಯಲ್ಲಿ ಬೇಸಾಯ ಮಾಡಿದ್ರೆ ಹೆಚ್ಚು ಆದಾಯ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…
ಭಾರತದಲ್ಲಿ ಕೇವಲ ಒಂದು ದಿನದ ತೀವ್ರ ಬಿಸಿಲು ಸುಮಾರು 3,400 ಹೆಚ್ಚುವರಿ ಸಾವುಗಳಿಗೆ…
ದಕ್ಷಿಣ ಪೂರ್ವ ಏಷ್ಯಾ ರಾಷ್ಟ್ರಗಳು ಹವಾಮಾನ ಬದಲಾವಣೆ ಮತ್ತು ಆಹಾರ ಭದ್ರತೆ ಸವಾಲುಗಳನ್ನು…
ಈ ಬಾರಿ ಮುಂಗಾರು ತನ್ನ ಸಾಮಾನ್ಯ ಪ್ರವೇಶ ದಿನಾಂಕವನ್ನು ತಪ್ಪಿಸಿದೆ ಎಂದು ಸ್ಕೈಮೆಟ್…