ಕಾಡಾನೆಗಳ ಚಲನವಲನ ತಿಳಿಯಲು ಆಧುನಿಕ ತಂತ್ರಜ್ಞಾನ

August 23, 2024
9:46 PM

ಕಾಡಾನೆಗಳ ಚಲನವಲನ ತಿಳಿಯಲು ರಾಜ್ಯದಲ್ಲಿ ಪ್ರಥಮ ಬಾರಿಗೆ ಆಧುನಿಕ ತಂತ್ರಜ್ಞಾನ ಒಳಗೊಂಡ, ದಿನದ 24 ಗಂಟೆಯೂ ಕಾರ್ಯನಿರ್ವಹಿಸುವ ಅರಣ್ಯ ನಿಯಂತ್ರಣ ಕೊಠಡಿ ಹಾಸನದ ಅರಣ್ಯ ಭವನದಲ್ಲಿ ಕಾರ್ಯಾರಂಭಗೊಂಡಿದೆ.

ಹಾಸನ ಜಿಲ್ಲೆಯ ಆಲೂರು, ಸಕಲೇಶಪುರ, ಬೇಲೂರು ತಾಲೂಕಿನಲ್ಲಿ ಕಾಡಾನೆ ಸಮಸ್ಯೆ ತೀವ್ರವಾಗಿರುವ ಹಿನ್ನೆಲೆ ಅರಣ್ಯ ನಿಯಂತ್ರಣ ಕೊಠಡಿ ಕಾರ್ಯನಿರ್ವಹಿಸಲಿದೆ. ಈ ಬಗ್ಗೆ ಮಾತನಾಡಿದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸೌರಬ್ ಕುಮಾರ್, ನೂತನ ತಂತ್ರಜ್ಞಾನದ ಮೂಲಕ ಯಾವ ಸ್ಥಳದಲ್ಲಿ ಎಷ್ಟು ಆನೆಗಳ ಗುಂಪಿದೆ, ಆ ಆನೆಗಳು ಸಂಚರಿಸುತ್ತಿವೆಯೇ ಇಲ್ಲವೇ ಸೇರಿಂದತೆ ವಿವಿಧ ಮಾಹಿತಿ ನಿಯಂತ್ರಣ ಕೊಠಡಿಗೆ ರವಾನೆಯಾಗಲಿದೆ. ಈ ಮಾಹಿತಿಯ ಮೇರೆಗೆ ಆನೆಗಳು ಜನವಸತಿ ಪ್ರದೇಶಗಳಿಗೆ ಬರುವುದನ್ನು ತಪ್ಪಿಸಿ ಸಿಬ್ಬಂದಿ ಶೀಘ್ರದಲ್ಲಿ ಅರಣ್ಯಕ್ಕೆ ಹಿಮ್ಮೆಟ್ಟಿಸುತ್ತಾರೆ. ಆನೆ ದಾಳಿಗಳಂತಹ ಅಪಾಯಗಳನ್ನು ತಡೆಗಟ್ಟಲು ಈ ವಿಧಾನ ಪ್ರಯೋಜನಕಾರಿಯಾಗಿದೆ. ಅಲ್ಲದೆ ಆನೆಗಳ ಆವಾಸ ಬದಲಾವಣೆಯ ಕುರಿತಂತೆ ವರ್ಷಗಳ, ದಶಕಗಳ ದತ್ತಾಂಶವೂ ಮುಂದಿನ ದಿನಗಳಲ್ಲಿ ಸುಲಭವಾಗಿ ಲಭ್ಯವಾಗಲಿದೆ ಎಂದು ತಿಳಿಸಿದರು.

Source :DD

ನಿಮ್ಮ ಅಭಿಪ್ರಾಯಗಳನ್ನು ಇಲ್ಲಿ ದಾಖಲಿಸಿ…

 

A state-of-the-art 24-hour forest control room, equipped with modern technology, has been established at Aranya Bhavan in Hassan for the first time in the state. This control room will monitor the movement of forests in Alur, Sakaleshpur, and Belur taluks of Hassan district in response to the severe forest issues in the area.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ
July 21, 2026
11:55 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ
July 21, 2026
4:32 PM
by: ಸಾಯಿಶೇಖರ್ ಕರಿಕಳ
ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ
July 20, 2026
10:59 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್
July 20, 2026
10:18 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror