ಸಂಚಾರ ವಲಯದಲ್ಲಿ ಮೂಲಸೌಕರ್ಯ ತಂತ್ರಜ್ಞಾನ ಕುರಿತ ಟ್ರಾಫಿಕ್ ಇನ್ಫ್ರಾ ಟೆಕ್ ಪ್ರದರ್ಶನವನ್ನು ದೆಹಲಿಯಲ್ಲಿ ಆಯೋಜಿಸಲಾಗಿತ್ತು.ಕಾರ್ಯಕ್ರಮದಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ರಸ್ತೆ ಸುರಕ್ಷತೆ , ಪರಿಸರ ಸ್ನೇಹಿ ವ್ಯವಸ್ಥೆ ಸುಧಾರಣೆಗೆ ಕೃತಕ ಬುದ್ಧಿಮತ್ತೆ ಸೇರಿದಂತೆ ಎಲ್ಲ ರೀತಿಯ ಅತ್ಯಾಧುನಿಕ ತಂತ್ರಜ್ಞಾನಗಳನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಹೇಳಿದರು.
ರಸ್ತೆಗಳ ನಿರ್ಮಾಣದಲ್ಲೂ ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಕೆ ಮಾಡಿಕೊಳ್ಳಲಾಗುತ್ತಿದೆ. ವಾಹನ ಸವಾರರಿಗೆ ಅನುಕೂಲ ಮಾಡಿಕೊಡಲು ರಸ್ತೆಗಳ ನಿರ್ಮಾಣದಲ್ಲಿ ಗುಣಮಟ್ಟ ಕಾಯ್ದುಕೊಳ್ಳಲು ಪ್ರತಿಭಾನ್ವಿತ ಇಂಜಿನಿಯರ್ ಗಳಿಗೆ ಉತ್ತೇಜನ ನೀಡಲಾಗುತ್ತಿದೆ ಎಂದು ಹೇಳಿದರು. ಅಪಘಾತಗಳ ಸಂಖ್ಯೆ ತಗ್ಗಿಸಲು ಭಾರತ ರಾಷ್ಟ್ರೀಯ ಹೆದ್ದಾರಿಗಳ ಪ್ರಾಧಿಕಾರ ಅಸಂಖ್ಯಾತ ಎಕ್ಸ್ ಪ್ರೆಸ್ ಹೆದ್ದಾರಿಗಳನ್ನು ನಿರ್ಮಾಣ ಮಾಡುತ್ತಿದೆ. ರಸ್ತೆ ಸುರಕ್ಷತೆಗಾಗಿ ಖಾಸಗಿ ವಲಯದಲ್ಲಿನ ತಂತ್ರಜ್ಞರನ್ನು ಸಚಿವಾಲಯ ನೇಮಕ ಮಾಡಿಕೊಳ್ಳುತ್ತಿದೆ ಎಂದು ತಿಳಿಸಿದರು.
ರಾಜ್ಯದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ…
ಕೃಷಿ ತ್ಯಾಜ್ಯ ಮತ್ತು ನೈಸರ್ಗಿಕ ನಾರುಗಳಿಂದ ತಯಾರಾಗುವ ಬಯೋ-ಕಾಂಪೋಸಿಟ್ ಉತ್ಪನ್ನಗಳು ಮರದ ಪರ್ಯಾಯವಾಗಿ…
ಅಡಿಕೆ ಮತ್ತು ವೀಳ್ಯದೆಲೆಯ ಸಾಂಸ್ಕೃತಿಕ ಮಹತ್ವವನ್ನು ಬಳಸಿಕೊಂಡು ವಿಯೆಟ್ನಾಂ ಹೊಸ ಆರೋಗ್ಯ ಹಾಗೂ…
ಝಾರ್ಖಂಡ್ನ ಮಹಿಳಾ ರೈತರು ಬೆಳೆದ 1.5 ಮೆಟ್ರಿಕ್ ಟನ್ ಆಮ್ರಪಾಲಿ ಮಾವುಗಳು ಮೊದಲ…
ಕರ್ನಾಟಕದಲ್ಲಿ ಜೂನ್ 8ರಿಂದ 11ರವರೆಗೆ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.
ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಜೂನ್ 9ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ.…