ಸಂಚಾರ ವಲಯದಲ್ಲಿ ಮೂಲಸೌಕರ್ಯ ತಂತ್ರಜ್ಞಾನ ಕುರಿತ ಟ್ರಾಫಿಕ್ ಇನ್ಫ್ರಾ ಟೆಕ್ ಪ್ರದರ್ಶನವನ್ನು ದೆಹಲಿಯಲ್ಲಿ ಆಯೋಜಿಸಲಾಗಿತ್ತು.ಕಾರ್ಯಕ್ರಮದಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ರಸ್ತೆ ಸುರಕ್ಷತೆ , ಪರಿಸರ ಸ್ನೇಹಿ ವ್ಯವಸ್ಥೆ ಸುಧಾರಣೆಗೆ ಕೃತಕ ಬುದ್ಧಿಮತ್ತೆ ಸೇರಿದಂತೆ ಎಲ್ಲ ರೀತಿಯ ಅತ್ಯಾಧುನಿಕ ತಂತ್ರಜ್ಞಾನಗಳನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಹೇಳಿದರು.
ರಸ್ತೆಗಳ ನಿರ್ಮಾಣದಲ್ಲೂ ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಕೆ ಮಾಡಿಕೊಳ್ಳಲಾಗುತ್ತಿದೆ. ವಾಹನ ಸವಾರರಿಗೆ ಅನುಕೂಲ ಮಾಡಿಕೊಡಲು ರಸ್ತೆಗಳ ನಿರ್ಮಾಣದಲ್ಲಿ ಗುಣಮಟ್ಟ ಕಾಯ್ದುಕೊಳ್ಳಲು ಪ್ರತಿಭಾನ್ವಿತ ಇಂಜಿನಿಯರ್ ಗಳಿಗೆ ಉತ್ತೇಜನ ನೀಡಲಾಗುತ್ತಿದೆ ಎಂದು ಹೇಳಿದರು. ಅಪಘಾತಗಳ ಸಂಖ್ಯೆ ತಗ್ಗಿಸಲು ಭಾರತ ರಾಷ್ಟ್ರೀಯ ಹೆದ್ದಾರಿಗಳ ಪ್ರಾಧಿಕಾರ ಅಸಂಖ್ಯಾತ ಎಕ್ಸ್ ಪ್ರೆಸ್ ಹೆದ್ದಾರಿಗಳನ್ನು ನಿರ್ಮಾಣ ಮಾಡುತ್ತಿದೆ. ರಸ್ತೆ ಸುರಕ್ಷತೆಗಾಗಿ ಖಾಸಗಿ ವಲಯದಲ್ಲಿನ ತಂತ್ರಜ್ಞರನ್ನು ಸಚಿವಾಲಯ ನೇಮಕ ಮಾಡಿಕೊಳ್ಳುತ್ತಿದೆ ಎಂದು ತಿಳಿಸಿದರು.
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…