ಶ್ರೀಕಂಠೇಶ್ವರನ ದರ್ಶನ ಪಡೆದು ಚುನಾವಣಾ ಪ್ರಚಾರ ಕಾರ್ಯ ಮುಗಿಸಿದ ಮೋದಿ : ಬಿಜೆಪಿಗೆ ಮೋದಿಯೇ ಭರವಸೆ

May 8, 2023
9:50 AM

ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಭಾನುವಾರ ಕೊನೆಯ ದಿನದ ಪ್ರಚಾರ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರು ನಂಜನಗೂಡಿನ ದೇವಸ್ಥಾನದಲ್ಲಿ ಶ್ರೀಕಂಠೇಶ್ವರನ  ದರ್ಶನ ಪಡೆದು ಚುನಾವಣಾ ಪ್ರಚಾರ ಮುಗಿಸಿದರು.

ನಂಜನಗೂಡಿನಲ್ಲಿ ಬಿಜೆಪಿ (BJP) ಬೃಹತ್ ಸಮಾವೇಶ ಮುಗಿಸಿ ನೇರವಾಗಿ ದೇವಸ್ಥಾನಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ ಅವರಿಗೆ ಮಂಗಳವಾದ್ಯಗಳೊಂದಿಗೆ ಭವ್ಯ ಸ್ವಾಗತ ಕೋರಲಾಯಿತು. ದೇವಸ್ಥಾನದ ಮುಖ್ಯ ಅರ್ಚಕರ ವೃಂದ ಪೂರ್ಣಕುಂಬ ಸ್ವಾಗತ ನೀಡಿ ಬರಮಾಡಿಕೊಂಡಿತು. ದೇವಾಲಯ ಪ್ರವೇಶಿಸಿ ಮೊದಲು ಮಹಾಗಣಪತಿ ದರ್ಶನ ಪಡೆದ ಪ್ರಧಾನಿ ಮೋದಿ, ಬಳಿಕ ಶ್ರೀಕಂಠೇಶ್ವರನ ಗರ್ಭಗುಡಿ ಪ್ರವೇಶಿಸಿದರು.

ನಂತರ ಲೋಕಕಲ್ಯಾಣಕ್ಕಾಗಿ ಶ್ರೀಕಂಠೇಶ್ವರನ ಮುಂದೆ ಸಂಕಲ್ಪ ಮಾಡಿದರು. ಅದಕ್ಕೂ ಮುನ್ನ ಗರ್ಭಗುಡಿಯಲ್ಲಿ ಕೆಲನಿಮಿಷ ಕುಳಿತು ಪ್ರಾರ್ಥಿಸಿದರು. ನಂತರ ಗರ್ಭಗುಡಿ ಪ್ರದಕ್ಷಿಣೆ ಹಾಕಿ, ಪಾರ್ವತಿ ದೇವಿ ದರ್ಶನ ಪಡೆದರು. ಬಳಿಕ ಚಂಡೀಕೇಶ್ವರ ಮತ್ತು ನಂದೀಕೇಶ್ವರ ದೇವರ ದರ್ಶನ ಪಡೆದು ಶ್ರೀಕಂಠೇಶ್ವರನ ಸನ್ನಿಧಿಯಿಂದ ಹೊರನಡೆದರು

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು
March 3, 2026
10:34 PM
by: ಮಿರರ್‌ ಡೆಸ್ಕ್
ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು
March 3, 2026
9:51 PM
by: ಮಿರರ್‌ ಡೆಸ್ಕ್
ಹೋಳಿ ಹಬ್ಬ: ಪ್ರಾಣಿ-ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಿ – ಮಂಡಳಿ ಮನವಿ
March 3, 2026
9:28 PM
by: ಮಿರರ್‌ ಡೆಸ್ಕ್
ಅಡಿಕೆ ಮಾರುಕಟ್ಟೆ ಸುದ್ದಿ | ಅಡಿಕೆ ಧಾರಣೆ ಇಳಿಕೆಯಿಂದ ಸ್ಥಿರತೆಯತ್ತ ಮುಂದುವರಿಕೆ
March 3, 2026
2:15 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror