ಶ್ರೀಕಂಠೇಶ್ವರನ ದರ್ಶನ ಪಡೆದು ಚುನಾವಣಾ ಪ್ರಚಾರ ಕಾರ್ಯ ಮುಗಿಸಿದ ಮೋದಿ : ಬಿಜೆಪಿಗೆ ಮೋದಿಯೇ ಭರವಸೆ

May 8, 2023
9:50 AM

ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಭಾನುವಾರ ಕೊನೆಯ ದಿನದ ಪ್ರಚಾರ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರು ನಂಜನಗೂಡಿನ ದೇವಸ್ಥಾನದಲ್ಲಿ ಶ್ರೀಕಂಠೇಶ್ವರನ  ದರ್ಶನ ಪಡೆದು ಚುನಾವಣಾ ಪ್ರಚಾರ ಮುಗಿಸಿದರು.

ನಂಜನಗೂಡಿನಲ್ಲಿ ಬಿಜೆಪಿ (BJP) ಬೃಹತ್ ಸಮಾವೇಶ ಮುಗಿಸಿ ನೇರವಾಗಿ ದೇವಸ್ಥಾನಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ ಅವರಿಗೆ ಮಂಗಳವಾದ್ಯಗಳೊಂದಿಗೆ ಭವ್ಯ ಸ್ವಾಗತ ಕೋರಲಾಯಿತು. ದೇವಸ್ಥಾನದ ಮುಖ್ಯ ಅರ್ಚಕರ ವೃಂದ ಪೂರ್ಣಕುಂಬ ಸ್ವಾಗತ ನೀಡಿ ಬರಮಾಡಿಕೊಂಡಿತು. ದೇವಾಲಯ ಪ್ರವೇಶಿಸಿ ಮೊದಲು ಮಹಾಗಣಪತಿ ದರ್ಶನ ಪಡೆದ ಪ್ರಧಾನಿ ಮೋದಿ, ಬಳಿಕ ಶ್ರೀಕಂಠೇಶ್ವರನ ಗರ್ಭಗುಡಿ ಪ್ರವೇಶಿಸಿದರು.

ನಂತರ ಲೋಕಕಲ್ಯಾಣಕ್ಕಾಗಿ ಶ್ರೀಕಂಠೇಶ್ವರನ ಮುಂದೆ ಸಂಕಲ್ಪ ಮಾಡಿದರು. ಅದಕ್ಕೂ ಮುನ್ನ ಗರ್ಭಗುಡಿಯಲ್ಲಿ ಕೆಲನಿಮಿಷ ಕುಳಿತು ಪ್ರಾರ್ಥಿಸಿದರು. ನಂತರ ಗರ್ಭಗುಡಿ ಪ್ರದಕ್ಷಿಣೆ ಹಾಕಿ, ಪಾರ್ವತಿ ದೇವಿ ದರ್ಶನ ಪಡೆದರು. ಬಳಿಕ ಚಂಡೀಕೇಶ್ವರ ಮತ್ತು ನಂದೀಕೇಶ್ವರ ದೇವರ ದರ್ಶನ ಪಡೆದು ಶ್ರೀಕಂಠೇಶ್ವರನ ಸನ್ನಿಧಿಯಿಂದ ಹೊರನಡೆದರು

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!
September 1, 2026
10:37 PM
by: ದ ರೂರಲ್ ಮಿರರ್.ಕಾಂ
ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ
September 1, 2026
3:16 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?
September 1, 2026
3:10 PM
by: ದ ರೂರಲ್ ಮಿರರ್.ಕಾಂ
ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ
September 1, 2026
7:42 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror