ಶ್ರೀಕಂಠೇಶ್ವರನ ದರ್ಶನ ಪಡೆದು ಚುನಾವಣಾ ಪ್ರಚಾರ ಕಾರ್ಯ ಮುಗಿಸಿದ ಮೋದಿ : ಬಿಜೆಪಿಗೆ ಮೋದಿಯೇ ಭರವಸೆ

May 8, 2023
9:50 AM

ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಭಾನುವಾರ ಕೊನೆಯ ದಿನದ ಪ್ರಚಾರ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರು ನಂಜನಗೂಡಿನ ದೇವಸ್ಥಾನದಲ್ಲಿ ಶ್ರೀಕಂಠೇಶ್ವರನ  ದರ್ಶನ ಪಡೆದು ಚುನಾವಣಾ ಪ್ರಚಾರ ಮುಗಿಸಿದರು.

ನಂಜನಗೂಡಿನಲ್ಲಿ ಬಿಜೆಪಿ (BJP) ಬೃಹತ್ ಸಮಾವೇಶ ಮುಗಿಸಿ ನೇರವಾಗಿ ದೇವಸ್ಥಾನಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ ಅವರಿಗೆ ಮಂಗಳವಾದ್ಯಗಳೊಂದಿಗೆ ಭವ್ಯ ಸ್ವಾಗತ ಕೋರಲಾಯಿತು. ದೇವಸ್ಥಾನದ ಮುಖ್ಯ ಅರ್ಚಕರ ವೃಂದ ಪೂರ್ಣಕುಂಬ ಸ್ವಾಗತ ನೀಡಿ ಬರಮಾಡಿಕೊಂಡಿತು. ದೇವಾಲಯ ಪ್ರವೇಶಿಸಿ ಮೊದಲು ಮಹಾಗಣಪತಿ ದರ್ಶನ ಪಡೆದ ಪ್ರಧಾನಿ ಮೋದಿ, ಬಳಿಕ ಶ್ರೀಕಂಠೇಶ್ವರನ ಗರ್ಭಗುಡಿ ಪ್ರವೇಶಿಸಿದರು.

ನಂತರ ಲೋಕಕಲ್ಯಾಣಕ್ಕಾಗಿ ಶ್ರೀಕಂಠೇಶ್ವರನ ಮುಂದೆ ಸಂಕಲ್ಪ ಮಾಡಿದರು. ಅದಕ್ಕೂ ಮುನ್ನ ಗರ್ಭಗುಡಿಯಲ್ಲಿ ಕೆಲನಿಮಿಷ ಕುಳಿತು ಪ್ರಾರ್ಥಿಸಿದರು. ನಂತರ ಗರ್ಭಗುಡಿ ಪ್ರದಕ್ಷಿಣೆ ಹಾಕಿ, ಪಾರ್ವತಿ ದೇವಿ ದರ್ಶನ ಪಡೆದರು. ಬಳಿಕ ಚಂಡೀಕೇಶ್ವರ ಮತ್ತು ನಂದೀಕೇಶ್ವರ ದೇವರ ದರ್ಶನ ಪಡೆದು ಶ್ರೀಕಂಠೇಶ್ವರನ ಸನ್ನಿಧಿಯಿಂದ ಹೊರನಡೆದರು

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ
August 12, 2026
8:24 PM
by: ದ ರೂರಲ್ ಮಿರರ್.ಕಾಂ
ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ
August 12, 2026
8:03 PM
by: ದ ರೂರಲ್ ಮಿರರ್.ಕಾಂ
ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ
August 12, 2026
7:50 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 12-08-2026 | ಕರ್ನಾಟಕದಲ್ಲಿ ಮುಂದುವರಿಯಲಿದೆ ಬಿಡುವಿನ ಮಳೆ
August 12, 2026
7:19 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror