ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಭಾನುವಾರ ಕೊನೆಯ ದಿನದ ಪ್ರಚಾರ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರು ನಂಜನಗೂಡಿನ ದೇವಸ್ಥಾನದಲ್ಲಿ ಶ್ರೀಕಂಠೇಶ್ವರನ ದರ್ಶನ ಪಡೆದು ಚುನಾವಣಾ ಪ್ರಚಾರ ಮುಗಿಸಿದರು.
ನಂಜನಗೂಡಿನಲ್ಲಿ ಬಿಜೆಪಿ (BJP) ಬೃಹತ್ ಸಮಾವೇಶ ಮುಗಿಸಿ ನೇರವಾಗಿ ದೇವಸ್ಥಾನಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ ಅವರಿಗೆ ಮಂಗಳವಾದ್ಯಗಳೊಂದಿಗೆ ಭವ್ಯ ಸ್ವಾಗತ ಕೋರಲಾಯಿತು. ದೇವಸ್ಥಾನದ ಮುಖ್ಯ ಅರ್ಚಕರ ವೃಂದ ಪೂರ್ಣಕುಂಬ ಸ್ವಾಗತ ನೀಡಿ ಬರಮಾಡಿಕೊಂಡಿತು. ದೇವಾಲಯ ಪ್ರವೇಶಿಸಿ ಮೊದಲು ಮಹಾಗಣಪತಿ ದರ್ಶನ ಪಡೆದ ಪ್ರಧಾನಿ ಮೋದಿ, ಬಳಿಕ ಶ್ರೀಕಂಠೇಶ್ವರನ ಗರ್ಭಗುಡಿ ಪ್ರವೇಶಿಸಿದರು.
ನಂತರ ಲೋಕಕಲ್ಯಾಣಕ್ಕಾಗಿ ಶ್ರೀಕಂಠೇಶ್ವರನ ಮುಂದೆ ಸಂಕಲ್ಪ ಮಾಡಿದರು. ಅದಕ್ಕೂ ಮುನ್ನ ಗರ್ಭಗುಡಿಯಲ್ಲಿ ಕೆಲನಿಮಿಷ ಕುಳಿತು ಪ್ರಾರ್ಥಿಸಿದರು. ನಂತರ ಗರ್ಭಗುಡಿ ಪ್ರದಕ್ಷಿಣೆ ಹಾಕಿ, ಪಾರ್ವತಿ ದೇವಿ ದರ್ಶನ ಪಡೆದರು. ಬಳಿಕ ಚಂಡೀಕೇಶ್ವರ ಮತ್ತು ನಂದೀಕೇಶ್ವರ ದೇವರ ದರ್ಶನ ಪಡೆದು ಶ್ರೀಕಂಠೇಶ್ವರನ ಸನ್ನಿಧಿಯಿಂದ ಹೊರನಡೆದರು
ಜಾತಿಗಣತಿ ಮಾಡಿ ಏನನ್ನು ಸಾಧಿಸಲು ಸಾಧ್ಯ? ಸದ್ಯ ಬಹಿರಂಗ ಆಗಿರುವ ವರದಿಯು ಇನ್ನಷ್ಟು…
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುತ್ಲೂರು ಸರಕಾರಿ ಶಾಲೆ ವಿದ್ಯಾರ್ಥಿ ವಿದ್ಯಾರ್ಥಿನಿಯರು…
ಭಾರತದ ವಿವಿಧ ಕಡೆಗಳಲ್ಲಿ ಉತ್ಪಾದಕತೆಯನ್ನು ಹೆಚ್ಚಿಸುವ ಸಾಮರ್ಥ್ಯ ಇರುವ ಡ್ರಾಗನ್ ಫ್ರುಟ್(ಕಮಲಂ) ಹಾಗೂ…
ಏಪ್ರಿಲ್ ಮಧ್ಯದ ವೇಳೆಗೆ ದೆಹಲಿಯಲ್ಲಿ ತಾಪಮಾನವು 40 ಡಿಗ್ರಿಗಿಂತ ಹೆಚ್ಚಾಗಬಹುದು, ಈ ಬಾರಿ…
ಗುಜ್ಜೆ ರೋಲ್ ಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಮೊದಲಿಗೆ ಗುಜ್ಜೆ ಕಟ್…