ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಭಾನುವಾರ ಕೊನೆಯ ದಿನದ ಪ್ರಚಾರ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರು ನಂಜನಗೂಡಿನ ದೇವಸ್ಥಾನದಲ್ಲಿ ಶ್ರೀಕಂಠೇಶ್ವರನ ದರ್ಶನ ಪಡೆದು ಚುನಾವಣಾ ಪ್ರಚಾರ ಮುಗಿಸಿದರು.
ನಂಜನಗೂಡಿನಲ್ಲಿ ಬಿಜೆಪಿ (BJP) ಬೃಹತ್ ಸಮಾವೇಶ ಮುಗಿಸಿ ನೇರವಾಗಿ ದೇವಸ್ಥಾನಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ ಅವರಿಗೆ ಮಂಗಳವಾದ್ಯಗಳೊಂದಿಗೆ ಭವ್ಯ ಸ್ವಾಗತ ಕೋರಲಾಯಿತು. ದೇವಸ್ಥಾನದ ಮುಖ್ಯ ಅರ್ಚಕರ ವೃಂದ ಪೂರ್ಣಕುಂಬ ಸ್ವಾಗತ ನೀಡಿ ಬರಮಾಡಿಕೊಂಡಿತು. ದೇವಾಲಯ ಪ್ರವೇಶಿಸಿ ಮೊದಲು ಮಹಾಗಣಪತಿ ದರ್ಶನ ಪಡೆದ ಪ್ರಧಾನಿ ಮೋದಿ, ಬಳಿಕ ಶ್ರೀಕಂಠೇಶ್ವರನ ಗರ್ಭಗುಡಿ ಪ್ರವೇಶಿಸಿದರು.
ನಂತರ ಲೋಕಕಲ್ಯಾಣಕ್ಕಾಗಿ ಶ್ರೀಕಂಠೇಶ್ವರನ ಮುಂದೆ ಸಂಕಲ್ಪ ಮಾಡಿದರು. ಅದಕ್ಕೂ ಮುನ್ನ ಗರ್ಭಗುಡಿಯಲ್ಲಿ ಕೆಲನಿಮಿಷ ಕುಳಿತು ಪ್ರಾರ್ಥಿಸಿದರು. ನಂತರ ಗರ್ಭಗುಡಿ ಪ್ರದಕ್ಷಿಣೆ ಹಾಕಿ, ಪಾರ್ವತಿ ದೇವಿ ದರ್ಶನ ಪಡೆದರು. ಬಳಿಕ ಚಂಡೀಕೇಶ್ವರ ಮತ್ತು ನಂದೀಕೇಶ್ವರ ದೇವರ ದರ್ಶನ ಪಡೆದು ಶ್ರೀಕಂಠೇಶ್ವರನ ಸನ್ನಿಧಿಯಿಂದ ಹೊರನಡೆದರು
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…